ಕೇಂದ್ರ ಸರ್ಕಾರವು ವಿವಿಧ ಹಿಂದುಳಿದ ಮತ್ತು ಅಂಚಿನಲ್ಲಿರುವ ಗುಂಪುಗಳ ಫಲಾನುಭವಿಗಳಿಗಾಗಿ ವಿವಿಧ ರೀತಿಯ ಸಾಲ ಸೌಲಭ್ಯವನ್ನು ಪಡೆಯಲು ಅನುವಾಗುವಂತೆ ಪಿ.ಎಂ. ಸೂರಜ್ ಪೋರ್ಟಲ್ ನ್ನು ವಿನ್ಯಾಸಗೊಳಿಸಲಾಗಿದ್ದು, ಹಿಂದುಳಿದ ವರ್ಗ ಹಾಗೂ ಪರಿಶಿಷ್ಟ ಜಾತಿಯ ಜನತೆಯು ಈ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಿ, ವಿವಿಧ ಸಾಲ ಸೌಲಭ್ಯವನ್ನು ಪಡೆದು, ಸಬಲೀಕರಣಗೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೀಡ್ ಬ್ಯಾಂಕ್ನ ಮುಖ್ಯ ಪ್ರಬಂಧಕರಾದ ಕೆ.ಮಧುಕರ್ ಅವರು ಕರೆ ನೀಡಿದರು.
ಪಿ.ಎಂ. ಸೂರಜ್ ಪೋರ್ಟಲ್ ಮೂಲಕ ಉದ್ಯಮಿಗಳಿಗೆ ಆತ್ಮನಿರ್ಭರ್ ಮತ್ತು ಸ್ವಾವಲಂಬಿಯಾಗಲು ಅನುಕರಣೀಯ. ಸಾಲದ ಬೆಂಬಲವನ್ನು ಒದಗಿಸಲಾಗುತ್ತಿದೆ. ಉದಯೋನ್ಮುಖ ಉದ್ಯಮಿಗಳಿಗೆ ತಡೆರಹಿತ ಕ್ರೆಡಿಟ್ ಬೆಂಬಲವನ್ನು ವೆಬ್ ಸೇವೆಯ ಪ್ರಾರಂಭದ ಮೂಲಕ ಒದಗಿಸಲಾಗುವುದು ಎಂದರಲ್ಲದೆ, ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲು ಮತ್ತು ಸಮಾಜದ ಅತ್ಯಂತ ಅಂಚಿನಲ್ಲಿರುವ ವರ್ಗಗಳನ್ನು ಉನ್ನತೀಕರಿಸುವ ಗುರಿಯನ್ನು ಈ ಯೋಜನೆ ಹೊಂದಿದೆ ಎಂದರು.
ಹಿಂದುಳಿದ ವರ್ಗಗಳ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರಂಗನಾಥ್ ಅವರು ಮಾತನಾಡಿ ನಿಗಮ ವಿವಿಧ ಯೋಜನೆಗಳ ಕುರಿತು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ನಿಂದ ಕೇಂದ್ರ ಸರಕಾರದ ಯೋಜನೆಗಳಡಿ ಸೌಲಭ್ಯ ಪಡೆದ ವಿವಿಧ ಫಲಾನುಭವಿಗಳಿಗೆ ಸಾಲ ಮಂಜೂರಾತಿ ಪತ್ರವನ್ನು ಸಹ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ನ ಹಿರಿಯ ವ್ಯವಸ್ಥಾಪಕರಾದ ಶ್ರೀನಿವಾಸಲು, ರಾಷ್ಟ್ರೀಯ ಮಾಹಿತಿ ಕೇಂದ್ರದ ಮಾಹಿತಿ ಅಧಿಕಾರಿ ಗೌರಿಶಂಕರ್, ರುಡ್ಸೆಟ್ ಸಂಸ್ಥೆಯ ನಿರ್ದೇಶಕ ರವಿಕುಮಾರ್, ವಿವಿಧ ಬ್ಯಾಂಕುಗಳ ಶಾಖಾ ಪ್ರಬಂಧಕರು, ಫಲಾನುಭವಿಗಳು, ರುಡ್ಸೆಟ್ ಸಂಸ್ಥೆಯ ಶಿಬಿರಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…