ಪಿ.ಎಂ. ಸೂರಜ್ ಪೋರ್ಟಲ್‌: ವಿವಿಧ ಸಾಲ ಸೌಲಭ್ಯ ಪಡೆದುಕೊಳ್ಳಲು ಕರೆ

ಕೇಂದ್ರ ಸರ್ಕಾರವು ವಿವಿಧ ಹಿಂದುಳಿದ ಮತ್ತು ಅಂಚಿನಲ್ಲಿರುವ ಗುಂಪುಗಳ ಫಲಾನುಭವಿಗಳಿಗಾಗಿ ವಿವಿಧ ರೀತಿಯ ಸಾಲ ಸೌಲಭ್ಯವನ್ನು ಪಡೆಯಲು ಅನುವಾಗುವಂತೆ ಪಿ.ಎಂ. ಸೂರಜ್‌ ಪೋರ್ಟಲ್‌ ನ್ನು ವಿನ್ಯಾಸಗೊಳಿಸಲಾಗಿದ್ದು, ಹಿಂದುಳಿದ ವರ್ಗ ಹಾಗೂ ಪರಿಶಿಷ್ಟ ಜಾತಿಯ ಜನತೆಯು ಈ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿ, ವಿವಿಧ ಸಾಲ ಸೌಲಭ್ಯವನ್ನು ಪಡೆದು, ಸಬಲೀಕರಣಗೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೀಡ್‌ ಬ್ಯಾಂಕ್‌ನ ಮುಖ್ಯ ಪ್ರಬಂಧಕರಾದ ಕೆ.ಮಧುಕರ್‌ ಅವರು ಕರೆ ನೀಡಿದರು.

ನೆಲಮಂಗಲ ತಾಲ್ಲೂಕಿನ ಅರಶಿನಕುಂಟೆಯಲ್ಲಿರುವ ರುಡ್‌ಸೆಟ್‌ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಹಿಂದುಳಿದ ಮತ್ತು ಅಂಚಿನಲ್ಲಿರುವ ಗುಂಪುಗಳ ಜನತೆಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಪಿ.ಎಂ. ಸೂರಜ್‌ ಪೋರ್ಟಲ್‌ ಮೂಲಕ ಉದ್ಯಮಿಗಳಿಗೆ ಆತ್ಮನಿರ್ಭರ್ ಮತ್ತು ಸ್ವಾವಲಂಬಿಯಾಗಲು ಅನುಕರಣೀಯ. ಸಾಲದ ಬೆಂಬಲವನ್ನು ಒದಗಿಸಲಾಗುತ್ತಿದೆ. ಉದಯೋನ್ಮುಖ ಉದ್ಯಮಿಗಳಿಗೆ ತಡೆರಹಿತ ಕ್ರೆಡಿಟ್ ಬೆಂಬಲವನ್ನು ವೆಬ್ ಸೇವೆಯ ಪ್ರಾರಂಭದ ಮೂಲಕ ಒದಗಿಸಲಾಗುವುದು ಎಂದರಲ್ಲದೆ, ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲು ಮತ್ತು ಸಮಾಜದ ಅತ್ಯಂತ ಅಂಚಿನಲ್ಲಿರುವ ವರ್ಗಗಳನ್ನು ಉನ್ನತೀಕರಿಸುವ ಗುರಿಯನ್ನು ಈ ಯೋಜನೆ ಹೊಂದಿದೆ ಎಂದರು.

ಪರಿಶಿಷ್ಟ ಜಾತಿ ವರ್ಗಗಳು, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಅನುವಾಗುವಂತೆ ಹಾಗೂ ಸಾಮಾಜಿಕ ಉನ್ನತಿ, ಉದ್ಯೋಗ ಮತ್ತು ಸಾರ್ವಜನಿಕ ಕಲ್ಯಾಣವನ್ನು ಆಧರಿಸಿದ ಯೋಜನೆ ಇದಾಗಿದ್ದು, ಈ ಪೋರ್ಟಲ್ ಮೂಲಕ ಅರ್ಹರು ಸಾಲದ ಸಹಾಯವನ್ನು ಪಡೆಯಬಹುದು. ಈ ಪೋರ್ಟಲ್ ಮೂಲಕ ಜನರು ಸುಲಭವಾಗಿ ಸಾಲವನ್ನು ಪಡೆಯಲು ಸಾಧ್ಯವಾಗಲಿದ್ದು, ಈ ಪೋರ್ಟಲ್ ಮೂಲಕವೇ ಅರ್ಜಿಯನ್ನು ಸಹ ಸಲ್ಲಿಸಬಹುದಾಗಿದೆ ಎಂದು ಹೇಳಿದರು.

ಹಿಂದುಳಿದ ವರ್ಗಗಳ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರಂಗನಾಥ್‌ ಅವರು ಮಾತನಾಡಿ ನಿಗಮ ವಿವಿಧ ಯೋಜನೆಗಳ ಕುರಿತು ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಿಂದ ಕೇಂದ್ರ ಸರಕಾರದ ಯೋಜನೆಗಳಡಿ ಸೌಲಭ್ಯ ಪಡೆದ ವಿವಿಧ ಫಲಾನುಭವಿಗಳಿಗೆ ಸಾಲ ಮಂಜೂರಾತಿ ಪತ್ರವನ್ನು ಸಹ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳು, ಸಮಾಜದ ಕಟ್ಟಕಡೆಯ ವರ್ಗಗಳಿಗೆ ಸಾಲದ ಬೆಂಬಲವನ್ನು ಒದಗಿಸುವ ರಾಷ್ಟ್ರವ್ಯಾಪಿ ಉಪಕ್ರಮವಾದ ‘ಪ್ರಧಾನ ಮಂತ್ರಿ ಸಾಮಾಜಿಕ್ ಉತ್ಥಾನ್ ಮತ್ತು ರೋಜ್ಗಾರ್ ಆಧಾರಿತ್ ಜನಕಲ್ಯಾಣ್’ (ಪಿಎಂ-ಸೂರಜ್) ರಾಷ್ಟ್ರೀಯ ಪೋರ್ಟಲ್ ಅನ್ನು ಪ್ರಧಾನ ಮಂತ್ರಿ ಕಚೇರಿಯಿಂದ ವರ್ಚುಯಲ್ ಮೂಲಕ ಚಾಲನೆ ನೀಡಿದ್ದನ್ನು ವಿವಿಧ ಬ್ಯಾಂಕುಗಳ ಫಲಾನುಭವಿಗಳು ಹಾಗೂ ರುಡ್‌ಸೆಟ್‌ ಸಂಸ್ಥೆಯ ಶಿಬಿರಾರ್ಥಿಗಳು ಸೇರಿದಂತೆ ಸಾರ್ವಜನಿಕರು ವಿಡಿಯೋ ಸಂವಾದದ ಮುಖೇನ ವೀಕ್ಷಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಹಿರಿಯ ವ್ಯವಸ್ಥಾಪಕರಾದ ಶ್ರೀನಿವಾಸಲು, ರಾಷ್ಟ್ರೀಯ ಮಾಹಿತಿ ಕೇಂದ್ರದ ಮಾಹಿತಿ ಅಧಿಕಾರಿ ಗೌರಿಶಂಕರ್‌, ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕ ರವಿಕುಮಾರ್‌, ವಿವಿಧ ಬ್ಯಾಂಕುಗಳ ಶಾಖಾ ಪ್ರಬಂಧಕರು, ಫಲಾನುಭವಿಗಳು, ರುಡ್‌ಸೆಟ್‌ ಸಂಸ್ಥೆಯ ಶಿಬಿರಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 hour ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

8 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

24 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago