ಕೇಂದ್ರ ಸರ್ಕಾರವು ವಿವಿಧ ಹಿಂದುಳಿದ ಮತ್ತು ಅಂಚಿನಲ್ಲಿರುವ ಗುಂಪುಗಳ ಫಲಾನುಭವಿಗಳಿಗಾಗಿ ವಿವಿಧ ರೀತಿಯ ಸಾಲ ಸೌಲಭ್ಯವನ್ನು ಪಡೆಯಲು ಅನುವಾಗುವಂತೆ ಪಿ.ಎಂ. ಸೂರಜ್ ಪೋರ್ಟಲ್ ನ್ನು ವಿನ್ಯಾಸಗೊಳಿಸಲಾಗಿದ್ದು, ಹಿಂದುಳಿದ ವರ್ಗ ಹಾಗೂ ಪರಿಶಿಷ್ಟ ಜಾತಿಯ ಜನತೆಯು ಈ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಿ, ವಿವಿಧ ಸಾಲ ಸೌಲಭ್ಯವನ್ನು ಪಡೆದು, ಸಬಲೀಕರಣಗೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೀಡ್ ಬ್ಯಾಂಕ್ನ ಮುಖ್ಯ ಪ್ರಬಂಧಕರಾದ ಕೆ.ಮಧುಕರ್ ಅವರು ಕರೆ ನೀಡಿದರು.
ಪಿ.ಎಂ. ಸೂರಜ್ ಪೋರ್ಟಲ್ ಮೂಲಕ ಉದ್ಯಮಿಗಳಿಗೆ ಆತ್ಮನಿರ್ಭರ್ ಮತ್ತು ಸ್ವಾವಲಂಬಿಯಾಗಲು ಅನುಕರಣೀಯ. ಸಾಲದ ಬೆಂಬಲವನ್ನು ಒದಗಿಸಲಾಗುತ್ತಿದೆ. ಉದಯೋನ್ಮುಖ ಉದ್ಯಮಿಗಳಿಗೆ ತಡೆರಹಿತ ಕ್ರೆಡಿಟ್ ಬೆಂಬಲವನ್ನು ವೆಬ್ ಸೇವೆಯ ಪ್ರಾರಂಭದ ಮೂಲಕ ಒದಗಿಸಲಾಗುವುದು ಎಂದರಲ್ಲದೆ, ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲು ಮತ್ತು ಸಮಾಜದ ಅತ್ಯಂತ ಅಂಚಿನಲ್ಲಿರುವ ವರ್ಗಗಳನ್ನು ಉನ್ನತೀಕರಿಸುವ ಗುರಿಯನ್ನು ಈ ಯೋಜನೆ ಹೊಂದಿದೆ ಎಂದರು.
ಹಿಂದುಳಿದ ವರ್ಗಗಳ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರಂಗನಾಥ್ ಅವರು ಮಾತನಾಡಿ ನಿಗಮ ವಿವಿಧ ಯೋಜನೆಗಳ ಕುರಿತು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ನಿಂದ ಕೇಂದ್ರ ಸರಕಾರದ ಯೋಜನೆಗಳಡಿ ಸೌಲಭ್ಯ ಪಡೆದ ವಿವಿಧ ಫಲಾನುಭವಿಗಳಿಗೆ ಸಾಲ ಮಂಜೂರಾತಿ ಪತ್ರವನ್ನು ಸಹ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ನ ಹಿರಿಯ ವ್ಯವಸ್ಥಾಪಕರಾದ ಶ್ರೀನಿವಾಸಲು, ರಾಷ್ಟ್ರೀಯ ಮಾಹಿತಿ ಕೇಂದ್ರದ ಮಾಹಿತಿ ಅಧಿಕಾರಿ ಗೌರಿಶಂಕರ್, ರುಡ್ಸೆಟ್ ಸಂಸ್ಥೆಯ ನಿರ್ದೇಶಕ ರವಿಕುಮಾರ್, ವಿವಿಧ ಬ್ಯಾಂಕುಗಳ ಶಾಖಾ ಪ್ರಬಂಧಕರು, ಫಲಾನುಭವಿಗಳು, ರುಡ್ಸೆಟ್ ಸಂಸ್ಥೆಯ ಶಿಬಿರಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…