ಪಿ.ಎಂ. ಸೂರಜ್ ಪೋರ್ಟಲ್‌: ವಿವಿಧ ಸಾಲ ಸೌಲಭ್ಯ ಪಡೆದುಕೊಳ್ಳಲು ಕರೆ

ಕೇಂದ್ರ ಸರ್ಕಾರವು ವಿವಿಧ ಹಿಂದುಳಿದ ಮತ್ತು ಅಂಚಿನಲ್ಲಿರುವ ಗುಂಪುಗಳ ಫಲಾನುಭವಿಗಳಿಗಾಗಿ ವಿವಿಧ ರೀತಿಯ ಸಾಲ ಸೌಲಭ್ಯವನ್ನು ಪಡೆಯಲು ಅನುವಾಗುವಂತೆ ಪಿ.ಎಂ. ಸೂರಜ್‌ ಪೋರ್ಟಲ್‌ ನ್ನು ವಿನ್ಯಾಸಗೊಳಿಸಲಾಗಿದ್ದು, ಹಿಂದುಳಿದ ವರ್ಗ ಹಾಗೂ ಪರಿಶಿಷ್ಟ ಜಾತಿಯ ಜನತೆಯು ಈ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿ, ವಿವಿಧ ಸಾಲ ಸೌಲಭ್ಯವನ್ನು ಪಡೆದು, ಸಬಲೀಕರಣಗೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೀಡ್‌ ಬ್ಯಾಂಕ್‌ನ ಮುಖ್ಯ ಪ್ರಬಂಧಕರಾದ ಕೆ.ಮಧುಕರ್‌ ಅವರು ಕರೆ ನೀಡಿದರು.

ನೆಲಮಂಗಲ ತಾಲ್ಲೂಕಿನ ಅರಶಿನಕುಂಟೆಯಲ್ಲಿರುವ ರುಡ್‌ಸೆಟ್‌ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಹಿಂದುಳಿದ ಮತ್ತು ಅಂಚಿನಲ್ಲಿರುವ ಗುಂಪುಗಳ ಜನತೆಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಪಿ.ಎಂ. ಸೂರಜ್‌ ಪೋರ್ಟಲ್‌ ಮೂಲಕ ಉದ್ಯಮಿಗಳಿಗೆ ಆತ್ಮನಿರ್ಭರ್ ಮತ್ತು ಸ್ವಾವಲಂಬಿಯಾಗಲು ಅನುಕರಣೀಯ. ಸಾಲದ ಬೆಂಬಲವನ್ನು ಒದಗಿಸಲಾಗುತ್ತಿದೆ. ಉದಯೋನ್ಮುಖ ಉದ್ಯಮಿಗಳಿಗೆ ತಡೆರಹಿತ ಕ್ರೆಡಿಟ್ ಬೆಂಬಲವನ್ನು ವೆಬ್ ಸೇವೆಯ ಪ್ರಾರಂಭದ ಮೂಲಕ ಒದಗಿಸಲಾಗುವುದು ಎಂದರಲ್ಲದೆ, ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲು ಮತ್ತು ಸಮಾಜದ ಅತ್ಯಂತ ಅಂಚಿನಲ್ಲಿರುವ ವರ್ಗಗಳನ್ನು ಉನ್ನತೀಕರಿಸುವ ಗುರಿಯನ್ನು ಈ ಯೋಜನೆ ಹೊಂದಿದೆ ಎಂದರು.

ಪರಿಶಿಷ್ಟ ಜಾತಿ ವರ್ಗಗಳು, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಅನುವಾಗುವಂತೆ ಹಾಗೂ ಸಾಮಾಜಿಕ ಉನ್ನತಿ, ಉದ್ಯೋಗ ಮತ್ತು ಸಾರ್ವಜನಿಕ ಕಲ್ಯಾಣವನ್ನು ಆಧರಿಸಿದ ಯೋಜನೆ ಇದಾಗಿದ್ದು, ಈ ಪೋರ್ಟಲ್ ಮೂಲಕ ಅರ್ಹರು ಸಾಲದ ಸಹಾಯವನ್ನು ಪಡೆಯಬಹುದು. ಈ ಪೋರ್ಟಲ್ ಮೂಲಕ ಜನರು ಸುಲಭವಾಗಿ ಸಾಲವನ್ನು ಪಡೆಯಲು ಸಾಧ್ಯವಾಗಲಿದ್ದು, ಈ ಪೋರ್ಟಲ್ ಮೂಲಕವೇ ಅರ್ಜಿಯನ್ನು ಸಹ ಸಲ್ಲಿಸಬಹುದಾಗಿದೆ ಎಂದು ಹೇಳಿದರು.

ಹಿಂದುಳಿದ ವರ್ಗಗಳ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರಂಗನಾಥ್‌ ಅವರು ಮಾತನಾಡಿ ನಿಗಮ ವಿವಿಧ ಯೋಜನೆಗಳ ಕುರಿತು ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಿಂದ ಕೇಂದ್ರ ಸರಕಾರದ ಯೋಜನೆಗಳಡಿ ಸೌಲಭ್ಯ ಪಡೆದ ವಿವಿಧ ಫಲಾನುಭವಿಗಳಿಗೆ ಸಾಲ ಮಂಜೂರಾತಿ ಪತ್ರವನ್ನು ಸಹ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳು, ಸಮಾಜದ ಕಟ್ಟಕಡೆಯ ವರ್ಗಗಳಿಗೆ ಸಾಲದ ಬೆಂಬಲವನ್ನು ಒದಗಿಸುವ ರಾಷ್ಟ್ರವ್ಯಾಪಿ ಉಪಕ್ರಮವಾದ ‘ಪ್ರಧಾನ ಮಂತ್ರಿ ಸಾಮಾಜಿಕ್ ಉತ್ಥಾನ್ ಮತ್ತು ರೋಜ್ಗಾರ್ ಆಧಾರಿತ್ ಜನಕಲ್ಯಾಣ್’ (ಪಿಎಂ-ಸೂರಜ್) ರಾಷ್ಟ್ರೀಯ ಪೋರ್ಟಲ್ ಅನ್ನು ಪ್ರಧಾನ ಮಂತ್ರಿ ಕಚೇರಿಯಿಂದ ವರ್ಚುಯಲ್ ಮೂಲಕ ಚಾಲನೆ ನೀಡಿದ್ದನ್ನು ವಿವಿಧ ಬ್ಯಾಂಕುಗಳ ಫಲಾನುಭವಿಗಳು ಹಾಗೂ ರುಡ್‌ಸೆಟ್‌ ಸಂಸ್ಥೆಯ ಶಿಬಿರಾರ್ಥಿಗಳು ಸೇರಿದಂತೆ ಸಾರ್ವಜನಿಕರು ವಿಡಿಯೋ ಸಂವಾದದ ಮುಖೇನ ವೀಕ್ಷಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಹಿರಿಯ ವ್ಯವಸ್ಥಾಪಕರಾದ ಶ್ರೀನಿವಾಸಲು, ರಾಷ್ಟ್ರೀಯ ಮಾಹಿತಿ ಕೇಂದ್ರದ ಮಾಹಿತಿ ಅಧಿಕಾರಿ ಗೌರಿಶಂಕರ್‌, ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕ ರವಿಕುಮಾರ್‌, ವಿವಿಧ ಬ್ಯಾಂಕುಗಳ ಶಾಖಾ ಪ್ರಬಂಧಕರು, ಫಲಾನುಭವಿಗಳು, ರುಡ್‌ಸೆಟ್‌ ಸಂಸ್ಥೆಯ ಶಿಬಿರಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

49 minutes ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

1 hour ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

14 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

14 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

17 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago