ಕೇಂದ್ರ ಸರ್ಕಾರವು ವಿವಿಧ ಹಿಂದುಳಿದ ಮತ್ತು ಅಂಚಿನಲ್ಲಿರುವ ಗುಂಪುಗಳ ಫಲಾನುಭವಿಗಳಿಗಾಗಿ ವಿವಿಧ ರೀತಿಯ ಸಾಲ ಸೌಲಭ್ಯವನ್ನು ಪಡೆಯಲು ಅನುವಾಗುವಂತೆ ಪಿ.ಎಂ. ಸೂರಜ್ ಪೋರ್ಟಲ್ ನ್ನು ವಿನ್ಯಾಸಗೊಳಿಸಲಾಗಿದ್ದು, ಹಿಂದುಳಿದ ವರ್ಗ ಹಾಗೂ ಪರಿಶಿಷ್ಟ ಜಾತಿಯ ಜನತೆಯು ಈ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಿ, ವಿವಿಧ ಸಾಲ ಸೌಲಭ್ಯವನ್ನು ಪಡೆದು, ಸಬಲೀಕರಣಗೊಳ್ಳಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೀಡ್ ಬ್ಯಾಂಕ್ನ ಮುಖ್ಯ ಪ್ರಬಂಧಕರಾದ ಕೆ.ಮಧುಕರ್ ಅವರು ಕರೆ ನೀಡಿದರು.
ಪಿ.ಎಂ. ಸೂರಜ್ ಪೋರ್ಟಲ್ ಮೂಲಕ ಉದ್ಯಮಿಗಳಿಗೆ ಆತ್ಮನಿರ್ಭರ್ ಮತ್ತು ಸ್ವಾವಲಂಬಿಯಾಗಲು ಅನುಕರಣೀಯ. ಸಾಲದ ಬೆಂಬಲವನ್ನು ಒದಗಿಸಲಾಗುತ್ತಿದೆ. ಉದಯೋನ್ಮುಖ ಉದ್ಯಮಿಗಳಿಗೆ ತಡೆರಹಿತ ಕ್ರೆಡಿಟ್ ಬೆಂಬಲವನ್ನು ವೆಬ್ ಸೇವೆಯ ಪ್ರಾರಂಭದ ಮೂಲಕ ಒದಗಿಸಲಾಗುವುದು ಎಂದರಲ್ಲದೆ, ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲು ಮತ್ತು ಸಮಾಜದ ಅತ್ಯಂತ ಅಂಚಿನಲ್ಲಿರುವ ವರ್ಗಗಳನ್ನು ಉನ್ನತೀಕರಿಸುವ ಗುರಿಯನ್ನು ಈ ಯೋಜನೆ ಹೊಂದಿದೆ ಎಂದರು.
ಹಿಂದುಳಿದ ವರ್ಗಗಳ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ರಂಗನಾಥ್ ಅವರು ಮಾತನಾಡಿ ನಿಗಮ ವಿವಿಧ ಯೋಜನೆಗಳ ಕುರಿತು ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ನಿಂದ ಕೇಂದ್ರ ಸರಕಾರದ ಯೋಜನೆಗಳಡಿ ಸೌಲಭ್ಯ ಪಡೆದ ವಿವಿಧ ಫಲಾನುಭವಿಗಳಿಗೆ ಸಾಲ ಮಂಜೂರಾತಿ ಪತ್ರವನ್ನು ಸಹ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ನ ಹಿರಿಯ ವ್ಯವಸ್ಥಾಪಕರಾದ ಶ್ರೀನಿವಾಸಲು, ರಾಷ್ಟ್ರೀಯ ಮಾಹಿತಿ ಕೇಂದ್ರದ ಮಾಹಿತಿ ಅಧಿಕಾರಿ ಗೌರಿಶಂಕರ್, ರುಡ್ಸೆಟ್ ಸಂಸ್ಥೆಯ ನಿರ್ದೇಶಕ ರವಿಕುಮಾರ್, ವಿವಿಧ ಬ್ಯಾಂಕುಗಳ ಶಾಖಾ ಪ್ರಬಂಧಕರು, ಫಲಾನುಭವಿಗಳು, ರುಡ್ಸೆಟ್ ಸಂಸ್ಥೆಯ ಶಿಬಿರಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…