ನಗರದ ರೈಲ್ವೆ ನಿಲ್ದಾಣ ಹಾಗೂ ಡಿಕ್ರಾಸ್ ಬಳಿ ಟ್ರಾಫಿಕ್ ಸಿಗ್ನಲ್ ಹಾಗೂ ಸ್ಕೈವಾಕ್ ಅಳವಡಿಸಿ ಸಂಚಾರ ದಟ್ಟಣೆ ನಿಯಂತ್ರಿಸುವಂತೆ ಒತ್ತಾಯಿಸಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶಾಸಕ ಧೀರಜ್ ಮುನಿರಾಜ್ ಹಾಗೂ ಡಿವೈಎಸ್ಪಿ ನಾಗರಾಜ್, ನಗರಸಭೆ ಪೌರಾಯುಕ್ತ ಶಿವಶಂಕರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಮನವಿ ಪತ್ರ ಸಲ್ಲಿಸಿದ ನಂತರ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಸತೀಶ್ ಮಾತನಾಡಿ, ನಗರದ ಬಾಶೆಟ್ಟಿಹಳ್ಳಿಯ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳಲ್ಲಿ ಕೆಲಸಕ್ಕೆಂದು ವಿವಿಧ ಜಿಲ್ಲೆ, ತಾಲೂಕಿನಿಂದ ಪ್ರತಿನಿತ್ಯ ಸಾವಿರಾರು ಮಂದಿ ರೈಲ್ವೆ ನಿಲ್ದಾಣಕ್ಕೆ ಬಂದು ಹೋಗುತ್ತಾರೆ, ನೂರಾರು ಮಂದಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಸ್ಥರು, ವಿವಿಧ ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಲು ರೈಲ್ವೆ ನಿಲ್ದಾಣ ಬಳಸಿ ಹೋಗುತ್ತಾರೆ ಇದರಿಂದ ವಾಹನ ದಟ್ಟಣೆ ಇಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಇಲ್ಲಿ ಯಾವ ಟ್ರಾಫಿಕ್ ಸಿಗ್ನಲ್, ಸ್ಕೈವಾಕ್ ಇಲ್ಲದೆ ವಾಹನ ಸವಾರರು, ಪ್ರಯಾಣಿಕರು, ನಗರ ನಿವಾಸಿಗಳು ನಿತ್ಯ ಪರದಾಡುವಂತಾಗಿದೆ. ಅದೇರೀತಿ ಅಪಘಾತ ಪ್ರಕರಣಗಳು ಇಲ್ಲಿ ಹೆಚ್ಚಾಗಿವೆ. ಆದ್ದರಿಂದ ಇಲ್ಲಿ ಟ್ರಾಫಿಕ್ ಸಿಗ್ನಲ್ ಹಾಗೂ ಸ್ಕೈವಾಕ್ ಅಳವಡಿಸಿ ಸಂಚಾರ ದಟ್ಟಣೆ ನಿಯಂತ್ರಿಸಿ ಅಪಘಾತ ತಪ್ಪಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದರು.
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…