ಪೀಕ್ ಅವರ್ ನಲ್ಲಿ ರೈಲ್ವೆ ನಿಲ್ದಾಣ ಹಾಗೂ ಡಿಕ್ರಾಸ್ ವೃತ್ತದಲ್ಲಿ ಸಂಚಾರ ದಟ್ಟಣೆ: ಟ್ರಾಫಿಕ್ ಸಿಗ್ನಲ್, ಸ್ಕೈವಾಕ್ ಅಳವಡಿಸಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮನವಿ

ನಗರದ ರೈಲ್ವೆ ನಿಲ್ದಾಣ ಹಾಗೂ ಡಿಕ್ರಾಸ್ ಬಳಿ ಟ್ರಾಫಿಕ್ ಸಿಗ್ನಲ್ ಹಾಗೂ ಸ್ಕೈವಾಕ್ ಅಳವಡಿಸಿ ಸಂಚಾರ ದಟ್ಟಣೆ ನಿಯಂತ್ರಿಸುವಂತೆ ಒತ್ತಾಯಿಸಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶಾಸಕ ಧೀರಜ್‌ ಮುನಿರಾಜ್ ಹಾಗೂ ಡಿವೈಎಸ್ಪಿ ನಾಗರಾಜ್, ನಗರಸಭೆ ಪೌರಾಯುಕ್ತ ಶಿವಶಂಕರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಮನವಿ ಪತ್ರ ಸಲ್ಲಿಸಿದ ನಂತರ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಸತೀಶ್ ಮಾತನಾಡಿ, ನಗರದ ಬಾಶೆಟ್ಟಿಹಳ್ಳಿಯ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳಲ್ಲಿ ಕೆಲಸಕ್ಕೆಂದು ವಿವಿಧ ಜಿಲ್ಲೆ, ತಾಲೂಕಿನಿಂದ ಪ್ರತಿನಿತ್ಯ ಸಾವಿರಾರು ಮಂದಿ ರೈಲ್ವೆ ನಿಲ್ದಾಣಕ್ಕೆ ಬಂದು ಹೋಗುತ್ತಾರೆ, ನೂರಾರು ಮಂದಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಸ್ಥರು, ವಿವಿಧ ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಲು ರೈಲ್ವೆ ನಿಲ್ದಾಣ ಬಳಸಿ ಹೋಗುತ್ತಾರೆ ಇದರಿಂದ ವಾಹನ ದಟ್ಟಣೆ ಇಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಇಲ್ಲಿ ಯಾವ ಟ್ರಾಫಿಕ್ ಸಿಗ್ನಲ್, ಸ್ಕೈವಾಕ್ ಇಲ್ಲದೆ ವಾಹನ ಸವಾರರು, ಪ್ರಯಾಣಿಕರು, ನಗರ ನಿವಾಸಿಗಳು ನಿತ್ಯ ಪರದಾಡುವಂತಾಗಿದೆ. ಅದೇರೀತಿ ಅಪಘಾತ ಪ್ರಕರಣಗಳು ಇಲ್ಲಿ ಹೆಚ್ಚಾಗಿವೆ. ಆದ್ದರಿಂದ ಇಲ್ಲಿ ಟ್ರಾಫಿಕ್ ಸಿಗ್ನಲ್ ಹಾಗೂ ಸ್ಕೈವಾಕ್ ಅಳವಡಿಸಿ ಸಂಚಾರ ದಟ್ಟಣೆ ನಿಯಂತ್ರಿಸಿ ಅಪಘಾತ ತಪ್ಪಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದರು.

ನಂತರ ಮಾತನಾಡಿದ ಉಪಾಧ್ಯಕ್ಷ ವಿನಯ್ ಮಾತನಾಡಿ, ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾತ್ರ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಮಾಡಲಾಗಿದೆ. ಬೇರೆಲ್ಲೂ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಮಾಡಿಲ್ಲ, ರೈಲ್ವೆ‌ನಿಲ್ದಾಣ, ಡಿಕ್ರಾಸ್ ನಲ್ಲೂ ಹೆಚ್ಚು ಅಪಘಾತ, ವಾಹನ ದಟ್ಟಣೆ ಉಂಟಾಗುತ್ತವೆ ಅಲ್ಲಿಯೂ ಸಹ ಟ್ರಾಫಿಕ್ ಸಿಗ್ನಲ್ ಅತ್ಯವಶ್ಯಕ, ಜೊತೆಗೆ ಸಿಸಿಟಿವಿ ಅಳವಡಿಕೆ, ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಬೇಕು. ಎಲ್ಲರ ಜೀವ ಮತ್ತು ಸಮಯ ಅತ್ಯಮೂಲ್ಯ. ಆದ್ದರಿಂದ ಎಲ್ಲರ ಜೀವ ಮತ್ತು ಸಮಯ ಕಾಪಾಡುವ ಸಲುವಾಗಿ ಸಂಚಾರ ನಿಯಮಗಳನ್ನು ಅಳವಡಿಸಿ ಪಾಲನೆ ಮಾಡುವಂತೆ ಮಾಡುವುದು ಸಂಬಂಧಪಟ್ಟ ಇಲಾಖೆಗಳ ಕರ್ತವ್ಯ ಎಂದು ತಿಳಿಸಿದರು.

ನಮ್ಮ ಮನವಿಗೆ ಸ್ಪಂದಿಸದೇ ಇದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ಸಹ ನೀಡಿದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 hour ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

6 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

15 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

21 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

22 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago