ಪೀಕ್ ಅವರ್ ನಲ್ಲಿ ರೈಲ್ವೆ ನಿಲ್ದಾಣ ಹಾಗೂ ಡಿಕ್ರಾಸ್ ವೃತ್ತದಲ್ಲಿ ಸಂಚಾರ ದಟ್ಟಣೆ: ಟ್ರಾಫಿಕ್ ಸಿಗ್ನಲ್, ಸ್ಕೈವಾಕ್ ಅಳವಡಿಸಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮನವಿ

ನಗರದ ರೈಲ್ವೆ ನಿಲ್ದಾಣ ಹಾಗೂ ಡಿಕ್ರಾಸ್ ಬಳಿ ಟ್ರಾಫಿಕ್ ಸಿಗ್ನಲ್ ಹಾಗೂ ಸ್ಕೈವಾಕ್ ಅಳವಡಿಸಿ ಸಂಚಾರ ದಟ್ಟಣೆ ನಿಯಂತ್ರಿಸುವಂತೆ ಒತ್ತಾಯಿಸಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶಾಸಕ ಧೀರಜ್‌ ಮುನಿರಾಜ್ ಹಾಗೂ ಡಿವೈಎಸ್ಪಿ ನಾಗರಾಜ್, ನಗರಸಭೆ ಪೌರಾಯುಕ್ತ ಶಿವಶಂಕರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಮನವಿ ಪತ್ರ ಸಲ್ಲಿಸಿದ ನಂತರ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಸತೀಶ್ ಮಾತನಾಡಿ, ನಗರದ ಬಾಶೆಟ್ಟಿಹಳ್ಳಿಯ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳಲ್ಲಿ ಕೆಲಸಕ್ಕೆಂದು ವಿವಿಧ ಜಿಲ್ಲೆ, ತಾಲೂಕಿನಿಂದ ಪ್ರತಿನಿತ್ಯ ಸಾವಿರಾರು ಮಂದಿ ರೈಲ್ವೆ ನಿಲ್ದಾಣಕ್ಕೆ ಬಂದು ಹೋಗುತ್ತಾರೆ, ನೂರಾರು ಮಂದಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಸ್ಥರು, ವಿವಿಧ ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಲು ರೈಲ್ವೆ ನಿಲ್ದಾಣ ಬಳಸಿ ಹೋಗುತ್ತಾರೆ ಇದರಿಂದ ವಾಹನ ದಟ್ಟಣೆ ಇಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಇಲ್ಲಿ ಯಾವ ಟ್ರಾಫಿಕ್ ಸಿಗ್ನಲ್, ಸ್ಕೈವಾಕ್ ಇಲ್ಲದೆ ವಾಹನ ಸವಾರರು, ಪ್ರಯಾಣಿಕರು, ನಗರ ನಿವಾಸಿಗಳು ನಿತ್ಯ ಪರದಾಡುವಂತಾಗಿದೆ. ಅದೇರೀತಿ ಅಪಘಾತ ಪ್ರಕರಣಗಳು ಇಲ್ಲಿ ಹೆಚ್ಚಾಗಿವೆ. ಆದ್ದರಿಂದ ಇಲ್ಲಿ ಟ್ರಾಫಿಕ್ ಸಿಗ್ನಲ್ ಹಾಗೂ ಸ್ಕೈವಾಕ್ ಅಳವಡಿಸಿ ಸಂಚಾರ ದಟ್ಟಣೆ ನಿಯಂತ್ರಿಸಿ ಅಪಘಾತ ತಪ್ಪಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದರು.

ನಂತರ ಮಾತನಾಡಿದ ಉಪಾಧ್ಯಕ್ಷ ವಿನಯ್ ಮಾತನಾಡಿ, ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾತ್ರ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಮಾಡಲಾಗಿದೆ. ಬೇರೆಲ್ಲೂ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಮಾಡಿಲ್ಲ, ರೈಲ್ವೆ‌ನಿಲ್ದಾಣ, ಡಿಕ್ರಾಸ್ ನಲ್ಲೂ ಹೆಚ್ಚು ಅಪಘಾತ, ವಾಹನ ದಟ್ಟಣೆ ಉಂಟಾಗುತ್ತವೆ ಅಲ್ಲಿಯೂ ಸಹ ಟ್ರಾಫಿಕ್ ಸಿಗ್ನಲ್ ಅತ್ಯವಶ್ಯಕ, ಜೊತೆಗೆ ಸಿಸಿಟಿವಿ ಅಳವಡಿಕೆ, ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಬೇಕು. ಎಲ್ಲರ ಜೀವ ಮತ್ತು ಸಮಯ ಅತ್ಯಮೂಲ್ಯ. ಆದ್ದರಿಂದ ಎಲ್ಲರ ಜೀವ ಮತ್ತು ಸಮಯ ಕಾಪಾಡುವ ಸಲುವಾಗಿ ಸಂಚಾರ ನಿಯಮಗಳನ್ನು ಅಳವಡಿಸಿ ಪಾಲನೆ ಮಾಡುವಂತೆ ಮಾಡುವುದು ಸಂಬಂಧಪಟ್ಟ ಇಲಾಖೆಗಳ ಕರ್ತವ್ಯ ಎಂದು ತಿಳಿಸಿದರು.

ನಮ್ಮ ಮನವಿಗೆ ಸ್ಪಂದಿಸದೇ ಇದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ಸಹ ನೀಡಿದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

9 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

13 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

20 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

21 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago