ನಗರದ ರೈಲ್ವೆ ನಿಲ್ದಾಣ ಹಾಗೂ ಡಿಕ್ರಾಸ್ ಬಳಿ ಟ್ರಾಫಿಕ್ ಸಿಗ್ನಲ್ ಹಾಗೂ ಸ್ಕೈವಾಕ್ ಅಳವಡಿಸಿ ಸಂಚಾರ ದಟ್ಟಣೆ ನಿಯಂತ್ರಿಸುವಂತೆ ಒತ್ತಾಯಿಸಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶಾಸಕ ಧೀರಜ್ ಮುನಿರಾಜ್ ಹಾಗೂ ಡಿವೈಎಸ್ಪಿ ನಾಗರಾಜ್, ನಗರಸಭೆ ಪೌರಾಯುಕ್ತ ಶಿವಶಂಕರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಮನವಿ ಪತ್ರ ಸಲ್ಲಿಸಿದ ನಂತರ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಸತೀಶ್ ಮಾತನಾಡಿ, ನಗರದ ಬಾಶೆಟ್ಟಿಹಳ್ಳಿಯ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳಲ್ಲಿ ಕೆಲಸಕ್ಕೆಂದು ವಿವಿಧ ಜಿಲ್ಲೆ, ತಾಲೂಕಿನಿಂದ ಪ್ರತಿನಿತ್ಯ ಸಾವಿರಾರು ಮಂದಿ ರೈಲ್ವೆ ನಿಲ್ದಾಣಕ್ಕೆ ಬಂದು ಹೋಗುತ್ತಾರೆ, ನೂರಾರು ಮಂದಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಸ್ಥರು, ವಿವಿಧ ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಲು ರೈಲ್ವೆ ನಿಲ್ದಾಣ ಬಳಸಿ ಹೋಗುತ್ತಾರೆ ಇದರಿಂದ ವಾಹನ ದಟ್ಟಣೆ ಇಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಇಲ್ಲಿ ಯಾವ ಟ್ರಾಫಿಕ್ ಸಿಗ್ನಲ್, ಸ್ಕೈವಾಕ್ ಇಲ್ಲದೆ ವಾಹನ ಸವಾರರು, ಪ್ರಯಾಣಿಕರು, ನಗರ ನಿವಾಸಿಗಳು ನಿತ್ಯ ಪರದಾಡುವಂತಾಗಿದೆ. ಅದೇರೀತಿ ಅಪಘಾತ ಪ್ರಕರಣಗಳು ಇಲ್ಲಿ ಹೆಚ್ಚಾಗಿವೆ. ಆದ್ದರಿಂದ ಇಲ್ಲಿ ಟ್ರಾಫಿಕ್ ಸಿಗ್ನಲ್ ಹಾಗೂ ಸ್ಕೈವಾಕ್ ಅಳವಡಿಸಿ ಸಂಚಾರ ದಟ್ಟಣೆ ನಿಯಂತ್ರಿಸಿ ಅಪಘಾತ ತಪ್ಪಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…