ನಗರದ ರೈಲ್ವೆ ನಿಲ್ದಾಣ ಹಾಗೂ ಡಿಕ್ರಾಸ್ ಬಳಿ ಟ್ರಾಫಿಕ್ ಸಿಗ್ನಲ್ ಹಾಗೂ ಸ್ಕೈವಾಕ್ ಅಳವಡಿಸಿ ಸಂಚಾರ ದಟ್ಟಣೆ ನಿಯಂತ್ರಿಸುವಂತೆ ಒತ್ತಾಯಿಸಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶಾಸಕ ಧೀರಜ್ ಮುನಿರಾಜ್ ಹಾಗೂ ಡಿವೈಎಸ್ಪಿ ನಾಗರಾಜ್, ನಗರಸಭೆ ಪೌರಾಯುಕ್ತ ಶಿವಶಂಕರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಮನವಿ ಪತ್ರ ಸಲ್ಲಿಸಿದ ನಂತರ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಸತೀಶ್ ಮಾತನಾಡಿ, ನಗರದ ಬಾಶೆಟ್ಟಿಹಳ್ಳಿಯ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳಲ್ಲಿ ಕೆಲಸಕ್ಕೆಂದು ವಿವಿಧ ಜಿಲ್ಲೆ, ತಾಲೂಕಿನಿಂದ ಪ್ರತಿನಿತ್ಯ ಸಾವಿರಾರು ಮಂದಿ ರೈಲ್ವೆ ನಿಲ್ದಾಣಕ್ಕೆ ಬಂದು ಹೋಗುತ್ತಾರೆ, ನೂರಾರು ಮಂದಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಸ್ಥರು, ವಿವಿಧ ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಲು ರೈಲ್ವೆ ನಿಲ್ದಾಣ ಬಳಸಿ ಹೋಗುತ್ತಾರೆ ಇದರಿಂದ ವಾಹನ ದಟ್ಟಣೆ ಇಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಇಲ್ಲಿ ಯಾವ ಟ್ರಾಫಿಕ್ ಸಿಗ್ನಲ್, ಸ್ಕೈವಾಕ್ ಇಲ್ಲದೆ ವಾಹನ ಸವಾರರು, ಪ್ರಯಾಣಿಕರು, ನಗರ ನಿವಾಸಿಗಳು ನಿತ್ಯ ಪರದಾಡುವಂತಾಗಿದೆ. ಅದೇರೀತಿ ಅಪಘಾತ ಪ್ರಕರಣಗಳು ಇಲ್ಲಿ ಹೆಚ್ಚಾಗಿವೆ. ಆದ್ದರಿಂದ ಇಲ್ಲಿ ಟ್ರಾಫಿಕ್ ಸಿಗ್ನಲ್ ಹಾಗೂ ಸ್ಕೈವಾಕ್ ಅಳವಡಿಸಿ ಸಂಚಾರ ದಟ್ಟಣೆ ನಿಯಂತ್ರಿಸಿ ಅಪಘಾತ ತಪ್ಪಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…