ಪೀಕ್ ಅವರ್ ನಲ್ಲಿ ರೈಲ್ವೆ ನಿಲ್ದಾಣ ಹಾಗೂ ಡಿಕ್ರಾಸ್ ವೃತ್ತದಲ್ಲಿ ಸಂಚಾರ ದಟ್ಟಣೆ: ಟ್ರಾಫಿಕ್ ಸಿಗ್ನಲ್, ಸ್ಕೈವಾಕ್ ಅಳವಡಿಸಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮನವಿ

ನಗರದ ರೈಲ್ವೆ ನಿಲ್ದಾಣ ಹಾಗೂ ಡಿಕ್ರಾಸ್ ಬಳಿ ಟ್ರಾಫಿಕ್ ಸಿಗ್ನಲ್ ಹಾಗೂ ಸ್ಕೈವಾಕ್ ಅಳವಡಿಸಿ ಸಂಚಾರ ದಟ್ಟಣೆ ನಿಯಂತ್ರಿಸುವಂತೆ ಒತ್ತಾಯಿಸಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶಾಸಕ ಧೀರಜ್‌ ಮುನಿರಾಜ್ ಹಾಗೂ ಡಿವೈಎಸ್ಪಿ ನಾಗರಾಜ್, ನಗರಸಭೆ ಪೌರಾಯುಕ್ತ ಶಿವಶಂಕರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಮನವಿ ಪತ್ರ ಸಲ್ಲಿಸಿದ ನಂತರ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಸತೀಶ್ ಮಾತನಾಡಿ, ನಗರದ ಬಾಶೆಟ್ಟಿಹಳ್ಳಿಯ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳಲ್ಲಿ ಕೆಲಸಕ್ಕೆಂದು ವಿವಿಧ ಜಿಲ್ಲೆ, ತಾಲೂಕಿನಿಂದ ಪ್ರತಿನಿತ್ಯ ಸಾವಿರಾರು ಮಂದಿ ರೈಲ್ವೆ ನಿಲ್ದಾಣಕ್ಕೆ ಬಂದು ಹೋಗುತ್ತಾರೆ, ನೂರಾರು ಮಂದಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಸ್ಥರು, ವಿವಿಧ ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಲು ರೈಲ್ವೆ ನಿಲ್ದಾಣ ಬಳಸಿ ಹೋಗುತ್ತಾರೆ ಇದರಿಂದ ವಾಹನ ದಟ್ಟಣೆ ಇಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಇಲ್ಲಿ ಯಾವ ಟ್ರಾಫಿಕ್ ಸಿಗ್ನಲ್, ಸ್ಕೈವಾಕ್ ಇಲ್ಲದೆ ವಾಹನ ಸವಾರರು, ಪ್ರಯಾಣಿಕರು, ನಗರ ನಿವಾಸಿಗಳು ನಿತ್ಯ ಪರದಾಡುವಂತಾಗಿದೆ. ಅದೇರೀತಿ ಅಪಘಾತ ಪ್ರಕರಣಗಳು ಇಲ್ಲಿ ಹೆಚ್ಚಾಗಿವೆ. ಆದ್ದರಿಂದ ಇಲ್ಲಿ ಟ್ರಾಫಿಕ್ ಸಿಗ್ನಲ್ ಹಾಗೂ ಸ್ಕೈವಾಕ್ ಅಳವಡಿಸಿ ಸಂಚಾರ ದಟ್ಟಣೆ ನಿಯಂತ್ರಿಸಿ ಅಪಘಾತ ತಪ್ಪಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದರು.

ನಂತರ ಮಾತನಾಡಿದ ಉಪಾಧ್ಯಕ್ಷ ವಿನಯ್ ಮಾತನಾಡಿ, ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾತ್ರ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಮಾಡಲಾಗಿದೆ. ಬೇರೆಲ್ಲೂ ಟ್ರಾಫಿಕ್ ಸಿಗ್ನಲ್ ಅಳವಡಿಕೆ ಮಾಡಿಲ್ಲ, ರೈಲ್ವೆ‌ನಿಲ್ದಾಣ, ಡಿಕ್ರಾಸ್ ನಲ್ಲೂ ಹೆಚ್ಚು ಅಪಘಾತ, ವಾಹನ ದಟ್ಟಣೆ ಉಂಟಾಗುತ್ತವೆ ಅಲ್ಲಿಯೂ ಸಹ ಟ್ರಾಫಿಕ್ ಸಿಗ್ನಲ್ ಅತ್ಯವಶ್ಯಕ, ಜೊತೆಗೆ ಸಿಸಿಟಿವಿ ಅಳವಡಿಕೆ, ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಬೇಕು. ಎಲ್ಲರ ಜೀವ ಮತ್ತು ಸಮಯ ಅತ್ಯಮೂಲ್ಯ. ಆದ್ದರಿಂದ ಎಲ್ಲರ ಜೀವ ಮತ್ತು ಸಮಯ ಕಾಪಾಡುವ ಸಲುವಾಗಿ ಸಂಚಾರ ನಿಯಮಗಳನ್ನು ಅಳವಡಿಸಿ ಪಾಲನೆ ಮಾಡುವಂತೆ ಮಾಡುವುದು ಸಂಬಂಧಪಟ್ಟ ಇಲಾಖೆಗಳ ಕರ್ತವ್ಯ ಎಂದು ತಿಳಿಸಿದರು.

ನಮ್ಮ ಮನವಿಗೆ ಸ್ಪಂದಿಸದೇ ಇದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ಸಹ ನೀಡಿದರು.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 hour ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

5 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

6 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

8 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

8 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

12 hours ago