ನಗರದ ರೈಲ್ವೆ ನಿಲ್ದಾಣ ಹಾಗೂ ಡಿಕ್ರಾಸ್ ಬಳಿ ಟ್ರಾಫಿಕ್ ಸಿಗ್ನಲ್ ಹಾಗೂ ಸ್ಕೈವಾಕ್ ಅಳವಡಿಸಿ ಸಂಚಾರ ದಟ್ಟಣೆ ನಿಯಂತ್ರಿಸುವಂತೆ ಒತ್ತಾಯಿಸಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶಾಸಕ ಧೀರಜ್ ಮುನಿರಾಜ್ ಹಾಗೂ ಡಿವೈಎಸ್ಪಿ ನಾಗರಾಜ್, ನಗರಸಭೆ ಪೌರಾಯುಕ್ತ ಶಿವಶಂಕರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಮನವಿ ಪತ್ರ ಸಲ್ಲಿಸಿದ ನಂತರ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಸತೀಶ್ ಮಾತನಾಡಿ, ನಗರದ ಬಾಶೆಟ್ಟಿಹಳ್ಳಿಯ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳಲ್ಲಿ ಕೆಲಸಕ್ಕೆಂದು ವಿವಿಧ ಜಿಲ್ಲೆ, ತಾಲೂಕಿನಿಂದ ಪ್ರತಿನಿತ್ಯ ಸಾವಿರಾರು ಮಂದಿ ರೈಲ್ವೆ ನಿಲ್ದಾಣಕ್ಕೆ ಬಂದು ಹೋಗುತ್ತಾರೆ, ನೂರಾರು ಮಂದಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಸ್ಥರು, ವಿವಿಧ ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗಲು ರೈಲ್ವೆ ನಿಲ್ದಾಣ ಬಳಸಿ ಹೋಗುತ್ತಾರೆ ಇದರಿಂದ ವಾಹನ ದಟ್ಟಣೆ ಇಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಆದರೆ ಇಲ್ಲಿ ಯಾವ ಟ್ರಾಫಿಕ್ ಸಿಗ್ನಲ್, ಸ್ಕೈವಾಕ್ ಇಲ್ಲದೆ ವಾಹನ ಸವಾರರು, ಪ್ರಯಾಣಿಕರು, ನಗರ ನಿವಾಸಿಗಳು ನಿತ್ಯ ಪರದಾಡುವಂತಾಗಿದೆ. ಅದೇರೀತಿ ಅಪಘಾತ ಪ್ರಕರಣಗಳು ಇಲ್ಲಿ ಹೆಚ್ಚಾಗಿವೆ. ಆದ್ದರಿಂದ ಇಲ್ಲಿ ಟ್ರಾಫಿಕ್ ಸಿಗ್ನಲ್ ಹಾಗೂ ಸ್ಕೈವಾಕ್ ಅಳವಡಿಸಿ ಸಂಚಾರ ದಟ್ಟಣೆ ನಿಯಂತ್ರಿಸಿ ಅಪಘಾತ ತಪ್ಪಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…