ಪುಟ್ಟಲಿಂಗಯ್ಯನ ಪಾಳ್ಯದಲ್ಲಿ ಪ್ರತಿಭಾ ಕಾರಂಜಿ: ಪ್ರತಿಭಾ ಕಾರಂಜಿ ಕಾರ್ಯಕ್ರಮವು ಮಕ್ಕಳ ಪ್ರತಿಭೆಗಳನ್ನು ಅನಾವರಣ ಮಾಡುವ ವೇದಿಕೆ- ಕ್ಷೇತ್ರ ಶಿಕ್ಷಣಾಧಿಕಾರಿ ಸೈಯಿದಾ ಅನೀಸ್

ಪ್ರತಿಭಾ ಕಾರಂಜಿ ಕಾರ್ಯಕ್ರಮವು ಮಕ್ಕಳ ಪ್ರತಿಭೆಗಳನ್ನು ಅನಾವರಣ ಮಾಡುವ ವೇದಿಕೆಯಾಗಿದ್ದು, ಈ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಸಾಸಲು ಹೋಬಳಿಯ ಪುಟ್ಟಲಿಂಗಯ್ಯನ ಪಾಳ್ಯದಲ್ಲಿ ನಡೆಯುತ್ತಿರುವುದು ಸಂತಸ ತಂದಿದೆ. ಮಕ್ಕಳಲ್ಲಿ ಕ್ರೀಡೆ, ಕಲೆ, ಸಾಹಿತ್ಯಗಳಲ್ಲಿ ಅಭಿವೃದ್ದಿ ಹೊಂದಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೈಯಿದಾ ಅನೀಸ್ ತಿಳಿಸಿದರು.

ತಾಲ್ಲೂಕಿನ ಸಾಸಲು ಹೋಬಳಿಯ ಪುಟ್ಟಲಿಂಗಯ್ಯನ ಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾಸಲು ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ದೀಪಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಗಾಯನ, ನೃತ್ಯ , ಏಕಪಾತ್ರಾಭಿನಯ, ನಾಟಕ, ಚರ್ಚಾ ಸ್ಪರ್ಧೆ, ಜಾನಪದ ನೃತ್ಯ, ಭಾವಗೀತೆ, ,ಪ್ರಬಂಧ ಸ್ಪರ್ಧೆ, ಸೇರಿದಂತೆ ಹಲವು ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಗಳ ಪ್ರದರ್ಶನ ಮಾಡಿದರು.

ಸ್ಪರ್ಧೆಗಳಲ್ಲಿ ಭಾಗವಹಿಸಿ ಗೆಲುವು ಸಾಧಿಸಿದ  ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಣೆ ಮಾಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಎಂ ರವಿಕುಮಾರ್, ಪ್ರತಿಭಾಕಾರಂಜಿಯ ಅಧ್ಯಕ್ಷರಾದ ರಾಮಚಂದ್ರಯ್ಯ ವಿ, ಇಸಿಒಗಳಾದ ಭೀಮರಾಜ್ ಮತ್ತು ಜಯಶ್ರೀ ಕೆ.ಜೆ, ಎಸ್ ಡಿ ಎಂ ಸಿ ಅಧ್ಯಕ್ಷರಾದ ದೇವರಾಜ್ , ದೊಡ್ಡಬಳ್ಳಾಪುರ ಶಿಕ್ಷಕರ ಸಂಘದ ಪದಾಧಿಕಾರಿಗಳು, ಮತ್ತು ಪುಟ್ಟಲಿಂಗಯ್ಯನಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು, ಸಾಸಲು ಕ್ಲಸ್ಟರ್ ಹಂತದ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

8 minutes ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

3 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

4 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

12 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

22 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

23 hours ago