ಕೋಲಾರ: ಮಹಾರಾಷ್ಟ್ರದ ಪುಣೆಯ ಬಸ್ ನಿಲ್ದಾಣದಲ್ಲಿ 26 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆದಿರುವುದು ಖಂಡನೀಯವಾಗಿದ್ದು ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ರೀದ್ ಮಹಾರಾಷ್ಟ್ರ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಪುಣೆಯ ಬಸ್ ನಿಲ್ದಾಣದಲ್ಲಿ 26 ವರ್ಷದ ಯುವತಿಯ ಮೇಲೆ ಆರೋಪಿ ದತ್ತಾತ್ರೇಯ ರಾಮ್ ದಾಸ್ ಎಂಬ ವ್ಯಕ್ತಿ ಅತ್ಯಾಚಾರದ ಮಾಡಿದ್ದು ಅತ್ಯಂತ ಹೇಯ ಹಾಗೂ ಅಮಾನವೀಯ ಘಟನೆಯಾಗಿದ್ದು ಸ್ತ್ರೀ ಕುಲಕ್ಕೆ ರಕ್ಷಣೆ ನೀಡಲು ಸಾಧ್ಯವಾಗದ ಪರಿಸ್ಥಿತಿಗೆ ಅಲ್ಲಿನ ಸರ್ಕಾರಗಳು ಬಂದಿವೆ ಎಂದರೆ ನಾಗರೀಕ ಸಮಾಜ ತಲೆತಗ್ಗಿಸುವಂತಾಗಿದೆ ಬಸ್ ನಿಲ್ದಾಣದಲ್ಲಿಯೇ ಅತ್ಯಾಚಾರ ಘಟನೆ ನಡೆದಿದ್ದು ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು ಮಹಿಳೆಯರಿಗೆ ಧೈರ್ಯ ತುಂಬುವಂತಾಗಬೇಕು ಎಂದು ತಿಳಿಸಿದರು.
ಕರ್ನಾಟಕ ರಾಜ್ಯದಲ್ಲಿಯು ಸಹ ಇಂತಹ ಘಟನೆಗಳು ನಡೆಯದ ರೀತಿ ಸರ್ಕಾರ, ಪೋಲಿಸ್ ಇಲಾಖೆ, ಹಾಗೂ ಕೆ.ಎಸ್.ಆರ್.ಟಿ.ಸಿ ಆಯುಕ್ತರು ಕ್ರಮ ವಹಿಸಬೇಕು ಹಾಗೂ ಮಹಿಳೆಯರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡಬೇಕು ಮಹಿಳೆಯರ ಮೇಲೆ ದೌರ್ಜನ್ಯ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಮುಂದೆ ಇಂತಹ ಘಟನೆಗಳು ಎಲ್ಲಿಯೂ ನಡೆಯದಂತೆ ಸೂಕ್ತ ಕ್ರಮ ವಹಿಸುವ ಜೊತೆಗೆ ಸಮಾಜಕ್ಕೆ ಒಂದು ಎಚ್ಚರಿಕೆಯ ಸಂದೇಶವನ್ನು ನೀಡುವಂತೆ ಯುವ ಕಾಂಗ್ರೆಸ್ ಸೈಯದ್ ಆಫ್ರೀದ್ ಒತ್ತಾಯಿಸಿದರು.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…