ಕೋಲಾರ: ಮಹಾರಾಷ್ಟ್ರದ ಪುಣೆಯ ಬಸ್ ನಿಲ್ದಾಣದಲ್ಲಿ 26 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆದಿರುವುದು ಖಂಡನೀಯವಾಗಿದ್ದು ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ರೀದ್ ಮಹಾರಾಷ್ಟ್ರ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಪುಣೆಯ ಬಸ್ ನಿಲ್ದಾಣದಲ್ಲಿ 26 ವರ್ಷದ ಯುವತಿಯ ಮೇಲೆ ಆರೋಪಿ ದತ್ತಾತ್ರೇಯ ರಾಮ್ ದಾಸ್ ಎಂಬ ವ್ಯಕ್ತಿ ಅತ್ಯಾಚಾರದ ಮಾಡಿದ್ದು ಅತ್ಯಂತ ಹೇಯ ಹಾಗೂ ಅಮಾನವೀಯ ಘಟನೆಯಾಗಿದ್ದು ಸ್ತ್ರೀ ಕುಲಕ್ಕೆ ರಕ್ಷಣೆ ನೀಡಲು ಸಾಧ್ಯವಾಗದ ಪರಿಸ್ಥಿತಿಗೆ ಅಲ್ಲಿನ ಸರ್ಕಾರಗಳು ಬಂದಿವೆ ಎಂದರೆ ನಾಗರೀಕ ಸಮಾಜ ತಲೆತಗ್ಗಿಸುವಂತಾಗಿದೆ ಬಸ್ ನಿಲ್ದಾಣದಲ್ಲಿಯೇ ಅತ್ಯಾಚಾರ ಘಟನೆ ನಡೆದಿದ್ದು ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು ಮಹಿಳೆಯರಿಗೆ ಧೈರ್ಯ ತುಂಬುವಂತಾಗಬೇಕು ಎಂದು ತಿಳಿಸಿದರು.
ಕರ್ನಾಟಕ ರಾಜ್ಯದಲ್ಲಿಯು ಸಹ ಇಂತಹ ಘಟನೆಗಳು ನಡೆಯದ ರೀತಿ ಸರ್ಕಾರ, ಪೋಲಿಸ್ ಇಲಾಖೆ, ಹಾಗೂ ಕೆ.ಎಸ್.ಆರ್.ಟಿ.ಸಿ ಆಯುಕ್ತರು ಕ್ರಮ ವಹಿಸಬೇಕು ಹಾಗೂ ಮಹಿಳೆಯರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡಬೇಕು ಮಹಿಳೆಯರ ಮೇಲೆ ದೌರ್ಜನ್ಯ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಮುಂದೆ ಇಂತಹ ಘಟನೆಗಳು ಎಲ್ಲಿಯೂ ನಡೆಯದಂತೆ ಸೂಕ್ತ ಕ್ರಮ ವಹಿಸುವ ಜೊತೆಗೆ ಸಮಾಜಕ್ಕೆ ಒಂದು ಎಚ್ಚರಿಕೆಯ ಸಂದೇಶವನ್ನು ನೀಡುವಂತೆ ಯುವ ಕಾಂಗ್ರೆಸ್ ಸೈಯದ್ ಆಫ್ರೀದ್ ಒತ್ತಾಯಿಸಿದರು.
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…
ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…
ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…