ಕೋಲಾರ: ಮಹಾರಾಷ್ಟ್ರದ ಪುಣೆಯ ಬಸ್ ನಿಲ್ದಾಣದಲ್ಲಿ 26 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆದಿರುವುದು ಖಂಡನೀಯವಾಗಿದ್ದು ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ರೀದ್ ಮಹಾರಾಷ್ಟ್ರ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಪುಣೆಯ ಬಸ್ ನಿಲ್ದಾಣದಲ್ಲಿ 26 ವರ್ಷದ ಯುವತಿಯ ಮೇಲೆ ಆರೋಪಿ ದತ್ತಾತ್ರೇಯ ರಾಮ್ ದಾಸ್ ಎಂಬ ವ್ಯಕ್ತಿ ಅತ್ಯಾಚಾರದ ಮಾಡಿದ್ದು ಅತ್ಯಂತ ಹೇಯ ಹಾಗೂ ಅಮಾನವೀಯ ಘಟನೆಯಾಗಿದ್ದು ಸ್ತ್ರೀ ಕುಲಕ್ಕೆ ರಕ್ಷಣೆ ನೀಡಲು ಸಾಧ್ಯವಾಗದ ಪರಿಸ್ಥಿತಿಗೆ ಅಲ್ಲಿನ ಸರ್ಕಾರಗಳು ಬಂದಿವೆ ಎಂದರೆ ನಾಗರೀಕ ಸಮಾಜ ತಲೆತಗ್ಗಿಸುವಂತಾಗಿದೆ ಬಸ್ ನಿಲ್ದಾಣದಲ್ಲಿಯೇ ಅತ್ಯಾಚಾರ ಘಟನೆ ನಡೆದಿದ್ದು ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು ಮಹಿಳೆಯರಿಗೆ ಧೈರ್ಯ ತುಂಬುವಂತಾಗಬೇಕು ಎಂದು ತಿಳಿಸಿದರು.
ಕರ್ನಾಟಕ ರಾಜ್ಯದಲ್ಲಿಯು ಸಹ ಇಂತಹ ಘಟನೆಗಳು ನಡೆಯದ ರೀತಿ ಸರ್ಕಾರ, ಪೋಲಿಸ್ ಇಲಾಖೆ, ಹಾಗೂ ಕೆ.ಎಸ್.ಆರ್.ಟಿ.ಸಿ ಆಯುಕ್ತರು ಕ್ರಮ ವಹಿಸಬೇಕು ಹಾಗೂ ಮಹಿಳೆಯರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡಬೇಕು ಮಹಿಳೆಯರ ಮೇಲೆ ದೌರ್ಜನ್ಯ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಮುಂದೆ ಇಂತಹ ಘಟನೆಗಳು ಎಲ್ಲಿಯೂ ನಡೆಯದಂತೆ ಸೂಕ್ತ ಕ್ರಮ ವಹಿಸುವ ಜೊತೆಗೆ ಸಮಾಜಕ್ಕೆ ಒಂದು ಎಚ್ಚರಿಕೆಯ ಸಂದೇಶವನ್ನು ನೀಡುವಂತೆ ಯುವ ಕಾಂಗ್ರೆಸ್ ಸೈಯದ್ ಆಫ್ರೀದ್ ಒತ್ತಾಯಿಸಿದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…