ಕೋಲಾರ: ಮಹಾರಾಷ್ಟ್ರದ ಪುಣೆಯ ಬಸ್ ನಿಲ್ದಾಣದಲ್ಲಿ 26 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆದಿರುವುದು ಖಂಡನೀಯವಾಗಿದ್ದು ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ರೀದ್ ಮಹಾರಾಷ್ಟ್ರ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಪುಣೆಯ ಬಸ್ ನಿಲ್ದಾಣದಲ್ಲಿ 26 ವರ್ಷದ ಯುವತಿಯ ಮೇಲೆ ಆರೋಪಿ ದತ್ತಾತ್ರೇಯ ರಾಮ್ ದಾಸ್ ಎಂಬ ವ್ಯಕ್ತಿ ಅತ್ಯಾಚಾರದ ಮಾಡಿದ್ದು ಅತ್ಯಂತ ಹೇಯ ಹಾಗೂ ಅಮಾನವೀಯ ಘಟನೆಯಾಗಿದ್ದು ಸ್ತ್ರೀ ಕುಲಕ್ಕೆ ರಕ್ಷಣೆ ನೀಡಲು ಸಾಧ್ಯವಾಗದ ಪರಿಸ್ಥಿತಿಗೆ ಅಲ್ಲಿನ ಸರ್ಕಾರಗಳು ಬಂದಿವೆ ಎಂದರೆ ನಾಗರೀಕ ಸಮಾಜ ತಲೆತಗ್ಗಿಸುವಂತಾಗಿದೆ ಬಸ್ ನಿಲ್ದಾಣದಲ್ಲಿಯೇ ಅತ್ಯಾಚಾರ ಘಟನೆ ನಡೆದಿದ್ದು ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು ಮಹಿಳೆಯರಿಗೆ ಧೈರ್ಯ ತುಂಬುವಂತಾಗಬೇಕು ಎಂದು ತಿಳಿಸಿದರು.
ಕರ್ನಾಟಕ ರಾಜ್ಯದಲ್ಲಿಯು ಸಹ ಇಂತಹ ಘಟನೆಗಳು ನಡೆಯದ ರೀತಿ ಸರ್ಕಾರ, ಪೋಲಿಸ್ ಇಲಾಖೆ, ಹಾಗೂ ಕೆ.ಎಸ್.ಆರ್.ಟಿ.ಸಿ ಆಯುಕ್ತರು ಕ್ರಮ ವಹಿಸಬೇಕು ಹಾಗೂ ಮಹಿಳೆಯರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡಬೇಕು ಮಹಿಳೆಯರ ಮೇಲೆ ದೌರ್ಜನ್ಯ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಮುಂದೆ ಇಂತಹ ಘಟನೆಗಳು ಎಲ್ಲಿಯೂ ನಡೆಯದಂತೆ ಸೂಕ್ತ ಕ್ರಮ ವಹಿಸುವ ಜೊತೆಗೆ ಸಮಾಜಕ್ಕೆ ಒಂದು ಎಚ್ಚರಿಕೆಯ ಸಂದೇಶವನ್ನು ನೀಡುವಂತೆ ಯುವ ಕಾಂಗ್ರೆಸ್ ಸೈಯದ್ ಆಫ್ರೀದ್ ಒತ್ತಾಯಿಸಿದರು.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…