Categories: ಲೇಖನ

ಪುನಃ ತಾಯ ಗರ್ಭ ಸೇರುವ ಮನಸ್ಸಾಯಿತು….

ತಾಯ ಗರ್ಭದಿಂದುದಿಸಿದ ಕ್ಷಣದಿಂದ,

ಕರುಳು ಬಳ್ಳಿ ಕತ್ತರಿಸಿದ ಘಳಿಗೆಯಿಂದ,
ಅಂತರಂಗದ ಅರಿವಿನೊಂದಿಗೆ ಬೆಳೆಯತೊಡಗಿದೆ…..

ಹಸಿವು ಅಳು ನಗು ಮೊದಲಿನಾ ಅನುಭವಗಳು,

ತಾಯ ಅಪ್ಪುಗೆ ತಂದೆಯ ಧ್ವನಿ ಗ್ರಹಿಸತೊಡಗಿದೆ,

ಮತ್ತಷ್ಟು ಚಲಿಸುವ ಆಕೃತಿಗಳನ್ನು ಕಂಡೆ,

ಅಕ್ಕ ಅಣ್ಣ ಅಜ್ಜ ಅಜ್ಜಿ ಎಂದರಿವಾಗತೊಡಗಿತು,

ಹಸು ಕರು ಕುರಿ ಕೋಳಿ ನಾಯಿ ಬೆಕ್ಕು ನನ್ನವೆಂದೇ ಭಾವಿಸಿದೆ,

ಅಮ್ಮಾ…ಅಪ್ಪಾ…ಅಜ್ಜೀ…ತಾತಾ….ಅಣ್ಣಾ..ಅಕ್ಕಾ…ಎಂದು ತೊದಲತೊಡಗಿದೆ,

ಹಾಲು ಅನ್ನ ಸಿಹಿ ಕಹಿ ಖಾರ ಒಗರು ರುಚಿಸತೊಡಗಿತು,

ಅ ಆ ಇ ಈ A B C D 1 2 3 4 ಅರ್ಥಮಾಡಿಕೊಳ್ಳತೊಡಗಿದೆ,

ಕಪ್ಪು ಬಿಳಿ ನೀಲಿ ಹಸಿರು ಕೆಂಪು ಗುರುತಿಸತೊಡಗಿದೆ,

ಟೀಚರು ಆಯಾ ಡಾಕ್ಟರು ಗೊತ್ತಾಗ ತೊಡಗಿದರು,

ಬೆಳಕು ನೀರು ಗಿಡ ಮರ ಹೂವು ನನ್ನೊಳಗಿಳಿಯತೊಡಗಿತು,

ಚಳಿ ಗಾಳಿ ಮಳೆ ಬಿಸಿಲು ತಿಳಿಯತೊಡಗಿತು,

ಸೈಕಲ್ಲು ಬೈಕು ಕಾರು ಬಸ್ಸು ರೈಲು ವಿಮಾನ ಆಶ್ಚರ್ಯವನ್ನುಂಟುಮಾಡತೊಡಗಿತು,

ರೇಡಿಯೋ ಟಿವಿ ಕಂಪ್ಯೂಟರು ಮೊಬೈಲುಗಳು ಕುತೂಹಲ ಕೆರಳಿಸತೊಡಗಿತು,

ಕೋಪ ಅಸೂಯೆ ಭಯ ಕರುಣೆ ಪ್ರತಿಕ್ಷಣದ ಭಾವನೆಯಾಗತೊಡಗಿತು,

ಗಂಡು ಹೆಣ್ಣಿನ ವ್ಯತ್ಯಾಸ ಅಂತರ್ಗತವಾಗತೊಡಗಿತು.

ಕನ್ನಡ ಇಂಗ್ಲೀಷ್ ಹಿಂದಿ ತೆಲುಗು ತಮಿಳು ಮಲಯಾಳಂ ಭಾಷೆಗಳ ಭಿನ್ನತೆಯೂ ಸ್ಪಷ್ಟವಾಗತೊಡಗಿತು,

ಗೆಳೆಯ ಗೆಳತಿಯರು ಓದು ಆಟ ನೃತ್ಯ ಸಂಗೀತ ಖುಷಿಕೊಡತೊಡಗಿತು.

ಆಸ್ಪತ್ರೆ ಬ್ಯಾಂಕು ಅಂಗಡಿ ಹೋಟೆಲು ಸಿನಿಮಾ ಮಂದಿರ ಗಮನಕ್ಕೆ ಬರತೊಡಗಿತು,

ನನ್ನೂರು – ಬೆಂಗಳೂರು, ಕರ್ನಾಟಕ ಭಾರತ ಏಷ್ಯಾ ವಿಶ್ವ ಹತ್ತಿರ ಬಂದಂತಾಗತೊಡಗಿತು,

ಕಣ್ಣು ಕಿವಿ ಮೂಗು ಬಾಯಿ ಅದು ಇದು ಅಂಗಗಳ ಬೇಕು ಬೇಡಗಳು ಅನುಭವವಾಗತೊಡಗಿದವು,

ತತ್ವ ಸಿದ್ದಾಂತ ಮೌಲ್ಯ ಕೆಚ್ಚು ಹೋರಾಟ ಗಲಾಟೆ ಪ್ರಚಾರ ಮಹತ್ವಪಡೆಯತೊಡಗಿತು,

ಪ್ರೀತಿಯ ಭಾವ ಚಿಗುರತೊಡಗಿತು,

ಸಂಗಾತಿಯ ಸಾಮಿಪ್ಯಕ್ಕೆ ಮನಸ್ಸು ಜಾರತೊಡಗಿತು,

ಉದ್ಯೋಗ ಜವಾಬ್ದಾರಿ ಭವಿಷ್ಯ ಕಾಡತೊಡಗಿತು,

ಹಣ ಅಂತಸ್ತು ಅಧಿಕಾರ ಐಶ್ವರ್ಯಗಳ ಮೋಹ ಉಂಟಾಗತೊಡಗಿತು,

ನಾನು ನನ್ನದು ನನ್ನವರೆಂಬ ಕುಟುಂಬ ಬೇಕೆನಿಸತೊಡಗಿತು,

ಕಾಮ ಕ್ರೋದ ಲೋಭ ಮೋಹ ಮದ ಮತ್ಸರಗಳ ಸಮ್ಮಿಳಿತವಾಗತೊಡಗಿತು,

ವಂಶಾಭಿವೃದ್ಧಿಯೇ ಒಂದು ಘನಕಾರ್ಯವೆಂದು ಭಾಸವಾಗತೊಡಗಿತು,

ಮಗ ಮಗಳ ಶಿಕ್ಣಣ ಭವಿಷ್ಯ ಸುಖಸಂತೋಷ ಉದ್ಯೋಗವೇ ಬದುಕಿನ ಧ್ಯೇಯವೆಂದೆನಿಸತೊಡಗಿತು,

ಮಗಳಿಗೊಂದು – ಮಗನಿಗೊಂದು ಮದುವೆಯೇ ಪ್ರಾಮುಖ್ಯತೆ ಪಡೆಯುವಂತಾಯಿತು,

ಮಗಳು ಅಮೆರಿಕಾ ಮಗ ಆಸ್ಟ್ರೇಲಿಯಾ ಪಾಲಾದರು,

ರಕ್ತಸಂಬಂದಿಗಳು ಬಂಧುಬಳಗದವರು ಸ್ನೇಹಿತರು ಇದ್ದರೂ ಎಲ್ಲವೂ ದೂರವಾದಂತೆನಿಸತೊಡಗಿತು,

ಮತ್ತೆ ತಾಯ ಗರ್ಭದಿಂದ ಹೊರಬಂದಾಗ ಕರುಳು ಕತ್ತರಿಸಿದಾಗ ಮೂಡಿದ ಅನಾಥಭಾವ ಆವರಿಸಿಕೊಳ್ಳತೊಡಗಿತು,

ಸಾವಿನ ಭಯ ಕಾಡತೊಡಗಿತು,

ಪುನಃ ತಾಯ ಗರ್ಭ ಸೇರುವ ಮನಸ್ಸಾಯಿತು……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಚಳಿಗಾಲದ ಪಾರ್ಟಿಗಳಿಂದ ಹೊಟ್ಟೆಗೆ ಕಾಟ: ಗ್ಯಾಸ್ಟ್ರೋ ಪ್ರಕರಣಗಳಲ್ಲಿ 25% ಏರಿಕೆ

ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು…

50 minutes ago

ಕೇರಳದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾದ ದೊಡ್ಡಬಳ್ಳಾಪುರ ಕಾಂಗ್ರೆಸ್ ಮುಖಂಡರು….

ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್‌ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ…

3 hours ago

ಮಡಿಕೇರಿ ಹನಿ ಟ್ರ್ಯಾಪ್ ಪ್ರಕರಣ: ಬಲೆಗೆ ಬಿದ್ದರಾ ಗಣ್ಯರು?

ಇತ್ತೀಚೆಗೆ ಮಂಡ್ಯ ಮೂಲಕ ವ್ಯಕ್ತಿ ಮಹಿಳೆ ಮತ್ತು ಆಕೆಯ ಸಹಚರರ ಜಾಲಕ್ಕೆ ಸಿಲುಕಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ನಂತರ ಅರೆ…

4 hours ago

ನೇಣಿಗೆ ಶರಣಾಗಿರೋ ವ್ಯಕ್ತಿ

ಮನನೊಂದ ವ್ಯಕ್ತಿಯೋರ್ವ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮುಕ್ತಾಂಭಿಕಾ ಬಡಾವಣೆಯಲ್ಲಿ ನಿನ್ನೆ ರಾತ್ರಿ ಸುಮಾರು 10ಗಂಟೆಯಲ್ಲಿ ನಡೆದಿದೆ....…

5 hours ago

” ಹೊಸ ವರುಷ ಎಂಬುದೇನಿಲ್ಲ ಅರಿತವಗೆ…”

2026ಕ್ಕೆ ಕೆಲವೇ ಗಂಟೆಗಳು ಇರುವಾಗ.......... ಒಂದು ಜೀವನದ ಇಲ್ಲಿಯವರೆಗಿನ ನೆನಪಿನ ಪಯಣ......... " ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಲ…

10 hours ago

ಪರಿಶಿಷ್ಟರ ಮೇಲಿನ ದೌರ್ಜನ್ಯವನ್ನು ಆಯೋಗ ಸಹಿಸುವುದಿಲ್ಲ-ಡಾ.ಎಲ್ ಮೂರ್ತಿ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲಿನ ಶೋಷಣೆ, ದೌರ್ಜನ್ಯಗಳನ್ನು ಆಯೋಗವು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಕರ್ನಾಟಕ…

21 hours ago