Categories: ಲೇಖನ

ಪುನಃ ತಾಯ ಗರ್ಭ ಸೇರುವ ಮನಸ್ಸಾಯಿತು….

ತಾಯ ಗರ್ಭದಿಂದುದಿಸಿದ ಕ್ಷಣದಿಂದ,

ಕರುಳು ಬಳ್ಳಿ ಕತ್ತರಿಸಿದ ಘಳಿಗೆಯಿಂದ,
ಅಂತರಂಗದ ಅರಿವಿನೊಂದಿಗೆ ಬೆಳೆಯತೊಡಗಿದೆ…..

ಹಸಿವು ಅಳು ನಗು ಮೊದಲಿನಾ ಅನುಭವಗಳು,

ತಾಯ ಅಪ್ಪುಗೆ ತಂದೆಯ ಧ್ವನಿ ಗ್ರಹಿಸತೊಡಗಿದೆ,

ಮತ್ತಷ್ಟು ಚಲಿಸುವ ಆಕೃತಿಗಳನ್ನು ಕಂಡೆ,

ಅಕ್ಕ ಅಣ್ಣ ಅಜ್ಜ ಅಜ್ಜಿ ಎಂದರಿವಾಗತೊಡಗಿತು,

ಹಸು ಕರು ಕುರಿ ಕೋಳಿ ನಾಯಿ ಬೆಕ್ಕು ನನ್ನವೆಂದೇ ಭಾವಿಸಿದೆ,

ಅಮ್ಮಾ…ಅಪ್ಪಾ…ಅಜ್ಜೀ…ತಾತಾ….ಅಣ್ಣಾ..ಅಕ್ಕಾ…ಎಂದು ತೊದಲತೊಡಗಿದೆ,

ಹಾಲು ಅನ್ನ ಸಿಹಿ ಕಹಿ ಖಾರ ಒಗರು ರುಚಿಸತೊಡಗಿತು,

ಅ ಆ ಇ ಈ A B C D 1 2 3 4 ಅರ್ಥಮಾಡಿಕೊಳ್ಳತೊಡಗಿದೆ,

ಕಪ್ಪು ಬಿಳಿ ನೀಲಿ ಹಸಿರು ಕೆಂಪು ಗುರುತಿಸತೊಡಗಿದೆ,

ಟೀಚರು ಆಯಾ ಡಾಕ್ಟರು ಗೊತ್ತಾಗ ತೊಡಗಿದರು,

ಬೆಳಕು ನೀರು ಗಿಡ ಮರ ಹೂವು ನನ್ನೊಳಗಿಳಿಯತೊಡಗಿತು,

ಚಳಿ ಗಾಳಿ ಮಳೆ ಬಿಸಿಲು ತಿಳಿಯತೊಡಗಿತು,

ಸೈಕಲ್ಲು ಬೈಕು ಕಾರು ಬಸ್ಸು ರೈಲು ವಿಮಾನ ಆಶ್ಚರ್ಯವನ್ನುಂಟುಮಾಡತೊಡಗಿತು,

ರೇಡಿಯೋ ಟಿವಿ ಕಂಪ್ಯೂಟರು ಮೊಬೈಲುಗಳು ಕುತೂಹಲ ಕೆರಳಿಸತೊಡಗಿತು,

ಕೋಪ ಅಸೂಯೆ ಭಯ ಕರುಣೆ ಪ್ರತಿಕ್ಷಣದ ಭಾವನೆಯಾಗತೊಡಗಿತು,

ಗಂಡು ಹೆಣ್ಣಿನ ವ್ಯತ್ಯಾಸ ಅಂತರ್ಗತವಾಗತೊಡಗಿತು.

ಕನ್ನಡ ಇಂಗ್ಲೀಷ್ ಹಿಂದಿ ತೆಲುಗು ತಮಿಳು ಮಲಯಾಳಂ ಭಾಷೆಗಳ ಭಿನ್ನತೆಯೂ ಸ್ಪಷ್ಟವಾಗತೊಡಗಿತು,

ಗೆಳೆಯ ಗೆಳತಿಯರು ಓದು ಆಟ ನೃತ್ಯ ಸಂಗೀತ ಖುಷಿಕೊಡತೊಡಗಿತು.

ಆಸ್ಪತ್ರೆ ಬ್ಯಾಂಕು ಅಂಗಡಿ ಹೋಟೆಲು ಸಿನಿಮಾ ಮಂದಿರ ಗಮನಕ್ಕೆ ಬರತೊಡಗಿತು,

ನನ್ನೂರು – ಬೆಂಗಳೂರು, ಕರ್ನಾಟಕ ಭಾರತ ಏಷ್ಯಾ ವಿಶ್ವ ಹತ್ತಿರ ಬಂದಂತಾಗತೊಡಗಿತು,

ಕಣ್ಣು ಕಿವಿ ಮೂಗು ಬಾಯಿ ಅದು ಇದು ಅಂಗಗಳ ಬೇಕು ಬೇಡಗಳು ಅನುಭವವಾಗತೊಡಗಿದವು,

ತತ್ವ ಸಿದ್ದಾಂತ ಮೌಲ್ಯ ಕೆಚ್ಚು ಹೋರಾಟ ಗಲಾಟೆ ಪ್ರಚಾರ ಮಹತ್ವಪಡೆಯತೊಡಗಿತು,

ಪ್ರೀತಿಯ ಭಾವ ಚಿಗುರತೊಡಗಿತು,

ಸಂಗಾತಿಯ ಸಾಮಿಪ್ಯಕ್ಕೆ ಮನಸ್ಸು ಜಾರತೊಡಗಿತು,

ಉದ್ಯೋಗ ಜವಾಬ್ದಾರಿ ಭವಿಷ್ಯ ಕಾಡತೊಡಗಿತು,

ಹಣ ಅಂತಸ್ತು ಅಧಿಕಾರ ಐಶ್ವರ್ಯಗಳ ಮೋಹ ಉಂಟಾಗತೊಡಗಿತು,

ನಾನು ನನ್ನದು ನನ್ನವರೆಂಬ ಕುಟುಂಬ ಬೇಕೆನಿಸತೊಡಗಿತು,

ಕಾಮ ಕ್ರೋದ ಲೋಭ ಮೋಹ ಮದ ಮತ್ಸರಗಳ ಸಮ್ಮಿಳಿತವಾಗತೊಡಗಿತು,

ವಂಶಾಭಿವೃದ್ಧಿಯೇ ಒಂದು ಘನಕಾರ್ಯವೆಂದು ಭಾಸವಾಗತೊಡಗಿತು,

ಮಗ ಮಗಳ ಶಿಕ್ಣಣ ಭವಿಷ್ಯ ಸುಖಸಂತೋಷ ಉದ್ಯೋಗವೇ ಬದುಕಿನ ಧ್ಯೇಯವೆಂದೆನಿಸತೊಡಗಿತು,

ಮಗಳಿಗೊಂದು – ಮಗನಿಗೊಂದು ಮದುವೆಯೇ ಪ್ರಾಮುಖ್ಯತೆ ಪಡೆಯುವಂತಾಯಿತು,

ಮಗಳು ಅಮೆರಿಕಾ ಮಗ ಆಸ್ಟ್ರೇಲಿಯಾ ಪಾಲಾದರು,

ರಕ್ತಸಂಬಂದಿಗಳು ಬಂಧುಬಳಗದವರು ಸ್ನೇಹಿತರು ಇದ್ದರೂ ಎಲ್ಲವೂ ದೂರವಾದಂತೆನಿಸತೊಡಗಿತು,

ಮತ್ತೆ ತಾಯ ಗರ್ಭದಿಂದ ಹೊರಬಂದಾಗ ಕರುಳು ಕತ್ತರಿಸಿದಾಗ ಮೂಡಿದ ಅನಾಥಭಾವ ಆವರಿಸಿಕೊಳ್ಳತೊಡಗಿತು,

ಸಾವಿನ ಭಯ ಕಾಡತೊಡಗಿತು,

ಪುನಃ ತಾಯ ಗರ್ಭ ಸೇರುವ ಮನಸ್ಸಾಯಿತು……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

6 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

7 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

13 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago