Categories: ಲೇಖನ

ಪುನಃ ತಾಯ ಗರ್ಭ ಸೇರುವ ಮನಸ್ಸಾಯಿತು….

ತಾಯ ಗರ್ಭದಿಂದುದಿಸಿದ ಕ್ಷಣದಿಂದ,

ಕರುಳು ಬಳ್ಳಿ ಕತ್ತರಿಸಿದ ಘಳಿಗೆಯಿಂದ,
ಅಂತರಂಗದ ಅರಿವಿನೊಂದಿಗೆ ಬೆಳೆಯತೊಡಗಿದೆ…..

ಹಸಿವು ಅಳು ನಗು ಮೊದಲಿನಾ ಅನುಭವಗಳು,

ತಾಯ ಅಪ್ಪುಗೆ ತಂದೆಯ ಧ್ವನಿ ಗ್ರಹಿಸತೊಡಗಿದೆ,

ಮತ್ತಷ್ಟು ಚಲಿಸುವ ಆಕೃತಿಗಳನ್ನು ಕಂಡೆ,

ಅಕ್ಕ ಅಣ್ಣ ಅಜ್ಜ ಅಜ್ಜಿ ಎಂದರಿವಾಗತೊಡಗಿತು,

ಹಸು ಕರು ಕುರಿ ಕೋಳಿ ನಾಯಿ ಬೆಕ್ಕು ನನ್ನವೆಂದೇ ಭಾವಿಸಿದೆ,

ಅಮ್ಮಾ…ಅಪ್ಪಾ…ಅಜ್ಜೀ…ತಾತಾ….ಅಣ್ಣಾ..ಅಕ್ಕಾ…ಎಂದು ತೊದಲತೊಡಗಿದೆ,

ಹಾಲು ಅನ್ನ ಸಿಹಿ ಕಹಿ ಖಾರ ಒಗರು ರುಚಿಸತೊಡಗಿತು,

ಅ ಆ ಇ ಈ A B C D 1 2 3 4 ಅರ್ಥಮಾಡಿಕೊಳ್ಳತೊಡಗಿದೆ,

ಕಪ್ಪು ಬಿಳಿ ನೀಲಿ ಹಸಿರು ಕೆಂಪು ಗುರುತಿಸತೊಡಗಿದೆ,

ಟೀಚರು ಆಯಾ ಡಾಕ್ಟರು ಗೊತ್ತಾಗ ತೊಡಗಿದರು,

ಬೆಳಕು ನೀರು ಗಿಡ ಮರ ಹೂವು ನನ್ನೊಳಗಿಳಿಯತೊಡಗಿತು,

ಚಳಿ ಗಾಳಿ ಮಳೆ ಬಿಸಿಲು ತಿಳಿಯತೊಡಗಿತು,

ಸೈಕಲ್ಲು ಬೈಕು ಕಾರು ಬಸ್ಸು ರೈಲು ವಿಮಾನ ಆಶ್ಚರ್ಯವನ್ನುಂಟುಮಾಡತೊಡಗಿತು,

ರೇಡಿಯೋ ಟಿವಿ ಕಂಪ್ಯೂಟರು ಮೊಬೈಲುಗಳು ಕುತೂಹಲ ಕೆರಳಿಸತೊಡಗಿತು,

ಕೋಪ ಅಸೂಯೆ ಭಯ ಕರುಣೆ ಪ್ರತಿಕ್ಷಣದ ಭಾವನೆಯಾಗತೊಡಗಿತು,

ಗಂಡು ಹೆಣ್ಣಿನ ವ್ಯತ್ಯಾಸ ಅಂತರ್ಗತವಾಗತೊಡಗಿತು.

ಕನ್ನಡ ಇಂಗ್ಲೀಷ್ ಹಿಂದಿ ತೆಲುಗು ತಮಿಳು ಮಲಯಾಳಂ ಭಾಷೆಗಳ ಭಿನ್ನತೆಯೂ ಸ್ಪಷ್ಟವಾಗತೊಡಗಿತು,

ಗೆಳೆಯ ಗೆಳತಿಯರು ಓದು ಆಟ ನೃತ್ಯ ಸಂಗೀತ ಖುಷಿಕೊಡತೊಡಗಿತು.

ಆಸ್ಪತ್ರೆ ಬ್ಯಾಂಕು ಅಂಗಡಿ ಹೋಟೆಲು ಸಿನಿಮಾ ಮಂದಿರ ಗಮನಕ್ಕೆ ಬರತೊಡಗಿತು,

ನನ್ನೂರು – ಬೆಂಗಳೂರು, ಕರ್ನಾಟಕ ಭಾರತ ಏಷ್ಯಾ ವಿಶ್ವ ಹತ್ತಿರ ಬಂದಂತಾಗತೊಡಗಿತು,

ಕಣ್ಣು ಕಿವಿ ಮೂಗು ಬಾಯಿ ಅದು ಇದು ಅಂಗಗಳ ಬೇಕು ಬೇಡಗಳು ಅನುಭವವಾಗತೊಡಗಿದವು,

ತತ್ವ ಸಿದ್ದಾಂತ ಮೌಲ್ಯ ಕೆಚ್ಚು ಹೋರಾಟ ಗಲಾಟೆ ಪ್ರಚಾರ ಮಹತ್ವಪಡೆಯತೊಡಗಿತು,

ಪ್ರೀತಿಯ ಭಾವ ಚಿಗುರತೊಡಗಿತು,

ಸಂಗಾತಿಯ ಸಾಮಿಪ್ಯಕ್ಕೆ ಮನಸ್ಸು ಜಾರತೊಡಗಿತು,

ಉದ್ಯೋಗ ಜವಾಬ್ದಾರಿ ಭವಿಷ್ಯ ಕಾಡತೊಡಗಿತು,

ಹಣ ಅಂತಸ್ತು ಅಧಿಕಾರ ಐಶ್ವರ್ಯಗಳ ಮೋಹ ಉಂಟಾಗತೊಡಗಿತು,

ನಾನು ನನ್ನದು ನನ್ನವರೆಂಬ ಕುಟುಂಬ ಬೇಕೆನಿಸತೊಡಗಿತು,

ಕಾಮ ಕ್ರೋದ ಲೋಭ ಮೋಹ ಮದ ಮತ್ಸರಗಳ ಸಮ್ಮಿಳಿತವಾಗತೊಡಗಿತು,

ವಂಶಾಭಿವೃದ್ಧಿಯೇ ಒಂದು ಘನಕಾರ್ಯವೆಂದು ಭಾಸವಾಗತೊಡಗಿತು,

ಮಗ ಮಗಳ ಶಿಕ್ಣಣ ಭವಿಷ್ಯ ಸುಖಸಂತೋಷ ಉದ್ಯೋಗವೇ ಬದುಕಿನ ಧ್ಯೇಯವೆಂದೆನಿಸತೊಡಗಿತು,

ಮಗಳಿಗೊಂದು – ಮಗನಿಗೊಂದು ಮದುವೆಯೇ ಪ್ರಾಮುಖ್ಯತೆ ಪಡೆಯುವಂತಾಯಿತು,

ಮಗಳು ಅಮೆರಿಕಾ ಮಗ ಆಸ್ಟ್ರೇಲಿಯಾ ಪಾಲಾದರು,

ರಕ್ತಸಂಬಂದಿಗಳು ಬಂಧುಬಳಗದವರು ಸ್ನೇಹಿತರು ಇದ್ದರೂ ಎಲ್ಲವೂ ದೂರವಾದಂತೆನಿಸತೊಡಗಿತು,

ಮತ್ತೆ ತಾಯ ಗರ್ಭದಿಂದ ಹೊರಬಂದಾಗ ಕರುಳು ಕತ್ತರಿಸಿದಾಗ ಮೂಡಿದ ಅನಾಥಭಾವ ಆವರಿಸಿಕೊಳ್ಳತೊಡಗಿತು,

ಸಾವಿನ ಭಯ ಕಾಡತೊಡಗಿತು,

ಪುನಃ ತಾಯ ಗರ್ಭ ಸೇರುವ ಮನಸ್ಸಾಯಿತು……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

5 hours ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

15 hours ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

17 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

22 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

23 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

24 hours ago