Categories: ಲೇಖನ

ಪುನಃ ತಾಯ ಗರ್ಭ ಸೇರುವ ಮನಸ್ಸಾಯಿತು….

ತಾಯ ಗರ್ಭದಿಂದುದಿಸಿದ ಕ್ಷಣದಿಂದ,

ಕರುಳು ಬಳ್ಳಿ ಕತ್ತರಿಸಿದ ಘಳಿಗೆಯಿಂದ,
ಅಂತರಂಗದ ಅರಿವಿನೊಂದಿಗೆ ಬೆಳೆಯತೊಡಗಿದೆ…..

ಹಸಿವು ಅಳು ನಗು ಮೊದಲಿನಾ ಅನುಭವಗಳು,

ತಾಯ ಅಪ್ಪುಗೆ ತಂದೆಯ ಧ್ವನಿ ಗ್ರಹಿಸತೊಡಗಿದೆ,

ಮತ್ತಷ್ಟು ಚಲಿಸುವ ಆಕೃತಿಗಳನ್ನು ಕಂಡೆ,

ಅಕ್ಕ ಅಣ್ಣ ಅಜ್ಜ ಅಜ್ಜಿ ಎಂದರಿವಾಗತೊಡಗಿತು,

ಹಸು ಕರು ಕುರಿ ಕೋಳಿ ನಾಯಿ ಬೆಕ್ಕು ನನ್ನವೆಂದೇ ಭಾವಿಸಿದೆ,

ಅಮ್ಮಾ…ಅಪ್ಪಾ…ಅಜ್ಜೀ…ತಾತಾ….ಅಣ್ಣಾ..ಅಕ್ಕಾ…ಎಂದು ತೊದಲತೊಡಗಿದೆ,

ಹಾಲು ಅನ್ನ ಸಿಹಿ ಕಹಿ ಖಾರ ಒಗರು ರುಚಿಸತೊಡಗಿತು,

ಅ ಆ ಇ ಈ A B C D 1 2 3 4 ಅರ್ಥಮಾಡಿಕೊಳ್ಳತೊಡಗಿದೆ,

ಕಪ್ಪು ಬಿಳಿ ನೀಲಿ ಹಸಿರು ಕೆಂಪು ಗುರುತಿಸತೊಡಗಿದೆ,

ಟೀಚರು ಆಯಾ ಡಾಕ್ಟರು ಗೊತ್ತಾಗ ತೊಡಗಿದರು,

ಬೆಳಕು ನೀರು ಗಿಡ ಮರ ಹೂವು ನನ್ನೊಳಗಿಳಿಯತೊಡಗಿತು,

ಚಳಿ ಗಾಳಿ ಮಳೆ ಬಿಸಿಲು ತಿಳಿಯತೊಡಗಿತು,

ಸೈಕಲ್ಲು ಬೈಕು ಕಾರು ಬಸ್ಸು ರೈಲು ವಿಮಾನ ಆಶ್ಚರ್ಯವನ್ನುಂಟುಮಾಡತೊಡಗಿತು,

ರೇಡಿಯೋ ಟಿವಿ ಕಂಪ್ಯೂಟರು ಮೊಬೈಲುಗಳು ಕುತೂಹಲ ಕೆರಳಿಸತೊಡಗಿತು,

ಕೋಪ ಅಸೂಯೆ ಭಯ ಕರುಣೆ ಪ್ರತಿಕ್ಷಣದ ಭಾವನೆಯಾಗತೊಡಗಿತು,

ಗಂಡು ಹೆಣ್ಣಿನ ವ್ಯತ್ಯಾಸ ಅಂತರ್ಗತವಾಗತೊಡಗಿತು.

ಕನ್ನಡ ಇಂಗ್ಲೀಷ್ ಹಿಂದಿ ತೆಲುಗು ತಮಿಳು ಮಲಯಾಳಂ ಭಾಷೆಗಳ ಭಿನ್ನತೆಯೂ ಸ್ಪಷ್ಟವಾಗತೊಡಗಿತು,

ಗೆಳೆಯ ಗೆಳತಿಯರು ಓದು ಆಟ ನೃತ್ಯ ಸಂಗೀತ ಖುಷಿಕೊಡತೊಡಗಿತು.

ಆಸ್ಪತ್ರೆ ಬ್ಯಾಂಕು ಅಂಗಡಿ ಹೋಟೆಲು ಸಿನಿಮಾ ಮಂದಿರ ಗಮನಕ್ಕೆ ಬರತೊಡಗಿತು,

ನನ್ನೂರು – ಬೆಂಗಳೂರು, ಕರ್ನಾಟಕ ಭಾರತ ಏಷ್ಯಾ ವಿಶ್ವ ಹತ್ತಿರ ಬಂದಂತಾಗತೊಡಗಿತು,

ಕಣ್ಣು ಕಿವಿ ಮೂಗು ಬಾಯಿ ಅದು ಇದು ಅಂಗಗಳ ಬೇಕು ಬೇಡಗಳು ಅನುಭವವಾಗತೊಡಗಿದವು,

ತತ್ವ ಸಿದ್ದಾಂತ ಮೌಲ್ಯ ಕೆಚ್ಚು ಹೋರಾಟ ಗಲಾಟೆ ಪ್ರಚಾರ ಮಹತ್ವಪಡೆಯತೊಡಗಿತು,

ಪ್ರೀತಿಯ ಭಾವ ಚಿಗುರತೊಡಗಿತು,

ಸಂಗಾತಿಯ ಸಾಮಿಪ್ಯಕ್ಕೆ ಮನಸ್ಸು ಜಾರತೊಡಗಿತು,

ಉದ್ಯೋಗ ಜವಾಬ್ದಾರಿ ಭವಿಷ್ಯ ಕಾಡತೊಡಗಿತು,

ಹಣ ಅಂತಸ್ತು ಅಧಿಕಾರ ಐಶ್ವರ್ಯಗಳ ಮೋಹ ಉಂಟಾಗತೊಡಗಿತು,

ನಾನು ನನ್ನದು ನನ್ನವರೆಂಬ ಕುಟುಂಬ ಬೇಕೆನಿಸತೊಡಗಿತು,

ಕಾಮ ಕ್ರೋದ ಲೋಭ ಮೋಹ ಮದ ಮತ್ಸರಗಳ ಸಮ್ಮಿಳಿತವಾಗತೊಡಗಿತು,

ವಂಶಾಭಿವೃದ್ಧಿಯೇ ಒಂದು ಘನಕಾರ್ಯವೆಂದು ಭಾಸವಾಗತೊಡಗಿತು,

ಮಗ ಮಗಳ ಶಿಕ್ಣಣ ಭವಿಷ್ಯ ಸುಖಸಂತೋಷ ಉದ್ಯೋಗವೇ ಬದುಕಿನ ಧ್ಯೇಯವೆಂದೆನಿಸತೊಡಗಿತು,

ಮಗಳಿಗೊಂದು – ಮಗನಿಗೊಂದು ಮದುವೆಯೇ ಪ್ರಾಮುಖ್ಯತೆ ಪಡೆಯುವಂತಾಯಿತು,

ಮಗಳು ಅಮೆರಿಕಾ ಮಗ ಆಸ್ಟ್ರೇಲಿಯಾ ಪಾಲಾದರು,

ರಕ್ತಸಂಬಂದಿಗಳು ಬಂಧುಬಳಗದವರು ಸ್ನೇಹಿತರು ಇದ್ದರೂ ಎಲ್ಲವೂ ದೂರವಾದಂತೆನಿಸತೊಡಗಿತು,

ಮತ್ತೆ ತಾಯ ಗರ್ಭದಿಂದ ಹೊರಬಂದಾಗ ಕರುಳು ಕತ್ತರಿಸಿದಾಗ ಮೂಡಿದ ಅನಾಥಭಾವ ಆವರಿಸಿಕೊಳ್ಳತೊಡಗಿತು,

ಸಾವಿನ ಭಯ ಕಾಡತೊಡಗಿತು,

ಪುನಃ ತಾಯ ಗರ್ಭ ಸೇರುವ ಮನಸ್ಸಾಯಿತು……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

13 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago