ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ ಸಾರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಚಪಟ್ಟಣದಲ್ಲಿ ನಡೆದಿದೆ.

ಗುರುವಾರ ಬೀರೂರು ಪಟ್ಟಣದಲ್ಲಿ ಭಾವಸಾರ ಸಮಾಜದ ವಿಶ್ವನಾಥ ಎಂಬುವವರು ನಿಧನರಾಗಿದ್ದರು. ಮೃತ ವಿಶ್ವನಾಥ್ ಅವರಿಗೆ ಮಕ್ಕಳೇ ಇರಲಿಲ್ಲ. ಅವರ ಸಹೋದರರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು. ಹೀಗಾಗಿ ಮೃತ ವಿಶ್ವನಾಥ್ ಸಹೋದರನ ಮಗಳು ಐಶ್ವರ್ಯ ಅವರೂ ನನ್ನ ತಂದೆ. ಅದಕ್ಕೆ ಅವರ ಅಂತ್ಯಸಂಸ್ಕಾರದ ಅಂತಿಮ ವಿಧಿ-ವಿಧಾನವನ್ನ ತಾನೇ ಮಾಡೋದಾಗಿ ಕುಟುಂಬದವರಿಗೆ ತಿಳಿಸಿದ್ದಳು. ಕುಟುಂಬ ಹಾಗೂ ಭಾವಸಾರ ಸಮಾಜದ ಎಲ್ಲಾ ಮುಖಂಡರು ಒಪ್ಪಿಗೆ ನೀಡಿದರು.

ಅದರಂತೆ ಸಹೋದರಿ ಭಾವನಳನ್ನೂ ಜೊತೆ ಸೇರಿಸಿಕೊಂಡು ಶುಕ್ರವಾರ (ಮಾ.13) ಅಂತ್ಯಕ್ರಿಯೆ ನಡೆಸಿಕೊಟ್ಟಿದ್ದಾರೆ. ಹೆಗಲ ಮೇಲೆ ಕುಡಿಕೆ ಹೊತ್ತು ಮೃತದೇಹದ ಸುತ್ತ ಮೂರು ಸುತ್ತು ಹಾಕಿ ತಂದೆ (ಚಿಕ್ಕಪ್ಪ) ಅಂತ್ಯಕ್ರಿಯೆ ನಡೆಸಿದ್ದಾರೆ.

Ramesh Babu

Journalist

Recent Posts

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

47 minutes ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

7 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

8 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

19 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

19 hours ago

ಹೊರಗುತ್ತಿಗೆ ನೇಮಕಾತಿಯಲ್ಲೂ ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಕಡ್ಡಾಯ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…

19 hours ago