ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ ಸಾರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಚಪಟ್ಟಣದಲ್ಲಿ ನಡೆದಿದೆ.
ಗುರುವಾರ ಬೀರೂರು ಪಟ್ಟಣದಲ್ಲಿ ಭಾವಸಾರ ಸಮಾಜದ ವಿಶ್ವನಾಥ ಎಂಬುವವರು ನಿಧನರಾಗಿದ್ದರು. ಮೃತ ವಿಶ್ವನಾಥ್ ಅವರಿಗೆ ಮಕ್ಕಳೇ ಇರಲಿಲ್ಲ. ಅವರ ಸಹೋದರರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು. ಹೀಗಾಗಿ ಮೃತ ವಿಶ್ವನಾಥ್ ಸಹೋದರನ ಮಗಳು ಐಶ್ವರ್ಯ ಅವರೂ ನನ್ನ ತಂದೆ. ಅದಕ್ಕೆ ಅವರ ಅಂತ್ಯಸಂಸ್ಕಾರದ ಅಂತಿಮ ವಿಧಿ-ವಿಧಾನವನ್ನ ತಾನೇ ಮಾಡೋದಾಗಿ ಕುಟುಂಬದವರಿಗೆ ತಿಳಿಸಿದ್ದಳು. ಕುಟುಂಬ ಹಾಗೂ ಭಾವಸಾರ ಸಮಾಜದ ಎಲ್ಲಾ ಮುಖಂಡರು ಒಪ್ಪಿಗೆ ನೀಡಿದರು.
ಅದರಂತೆ ಸಹೋದರಿ ಭಾವನಳನ್ನೂ ಜೊತೆ ಸೇರಿಸಿಕೊಂಡು ಶುಕ್ರವಾರ (ಮಾ.13) ಅಂತ್ಯಕ್ರಿಯೆ ನಡೆಸಿಕೊಟ್ಟಿದ್ದಾರೆ. ಹೆಗಲ ಮೇಲೆ ಕುಡಿಕೆ ಹೊತ್ತು ಮೃತದೇಹದ ಸುತ್ತ ಮೂರು ಸುತ್ತು ಹಾಕಿ ತಂದೆ (ಚಿಕ್ಕಪ್ಪ) ಅಂತ್ಯಕ್ರಿಯೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…