ಪೂರ್ವ ತಯಾರಿ ಇಲ್ಲದೇ ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಸ್ವಾಗತ ಕೋರಿದ ಆರೋಪ: ಹೆಗ್ಗಡಿಹಳ್ಳಿ ಗ್ರಾ.ಪಂ ಪಿಡಿಒ ಅವರನ್ನ ಅಮಾನತು ಮಾಡುವಂತೆ ಪ್ರಜಾ ವಿಮೋಚನಾ ಸಮಿತಿ ಆಗ್ರಹ

ಫೆ.10 ರಂದು ತಾಲ್ಲೂಕಿಗೆ ಪ್ರವೇಶ ಪಡೆದ ಸಂವಿಧಾನ ಜಾಗೃತಿ ಜಾಥಾ ರಥವನ್ನ ಯಾವ ಪೂರ್ವ ತಯಾರಿ ಇಲ್ಲದೇ ಕಾಟಾಚಾರಕ್ಕೆ ಸ್ವಾಗತ ಕೋರಿದ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಸೇವೆಯಿಂದ ಅಮಾನತು ಮಾಡಬೇಕು ಎಂದು ಪ್ರಜಾ ವಿಮೋಚನಾ ಸಮಿತಿ ರಾಜ್ಯ ಕಾರ್ಯಾಧ್ಯಕ್ಷ ಗೂಳ್ಯ ಹನುಮಣ್ಣ ಅವರು ಒತ್ತಾಯಿಸಿದ್ದಾರೆ.

ಈ ವೇಳೆ ಮಾತನಾಡಿದ ಗೂಳ್ಯ ಹನುಮಣ್ಣ ಅವರು, ಸಂವಿಧಾನ ಜಾಗೃತಿ ಸ್ವಾಗತ ವೇಳೆ ಕನಿಷ್ಠ 5 ಸಾವಿರ ಜನರನ್ನ ಸೇರಿಸಿ ಸಂವಿಧಾನದ ಮಹತ್ವ ಕುರಿತು ಅರಿವು ಮೂಡಿಸುವುದಾಗಿ ಅಧಿಕಾರಿಗಳು ಹೇಳಿದ್ದರು. ಆದರೆ, ಬೆರಳೆಣಿಕೆ ಮಾತ್ರ ಜನರನ್ನ ಒಗ್ಗೂಡಿಸಿ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸೌಮ್ಯ ಅವರು ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸೌಮ್ಯ ಅವರು ಈ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಬಂದು ಸುಮಾರು ಒಂದು ವರ್ಷಕ್ಕಿಂತ ಹೆಚ್ಚು ಸಮಯವಾಗಿದ್ದು, ಸಂವಿಧಾನ ಬದ್ಧವಾಗಿ ಯಾವುದೇ ಕಾರ್ಯಗಳನ್ನು ನಿರ್ವಹಿಸುತ್ತಿಲ್ಲ, ತಮ್ಮ ಕೆಲಸಗಳಿಗಾಗಿ ಸಾರ್ವಜನಿಕರು ಪಂಚಾಯತಿ ಕಚೇರಿ ಬಳಿ ಬಂದರೆ ನಿರ್ಲಕ್ಷ್ಯ ತೋರಿಸುತ್ತಿದ್ದು, ಅವರನ್ನು ನಾಲ್ಕೈದು ತಿಂಗಳುಗಳ ಕಾಲ ಅಲೆದಾಡುವಂತೆ ಮಾಡುತ್ತಿದ್ದಾರೆ ಎಂದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲ ಸಮುದಾಯದ ಜನರು ವಾಸಮಾಡುತ್ತಿದ್ದಾರೆ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರನ್ನು ಒಟ್ಟುಗೂಡಿಸಿ ಕಾರ್ಯ ನಿರ್ವಹಿಸಬೇಕಾದುದು ಅವರ ಜವಾಬ್ದಾರಿಯಾಗಿದೆ. ಆದರೆ, ಗ್ರಾ.ಪಂ.ಯಲ್ಲಿ ಸವರ್ಣೀಯ ಸಮುದಾಯದ ಜೊತೆಗೆ ಸೇರಿಕೊಂಡು ಕೆಲವೊಂದು ಜಾತಿಗೆ ಮಾತ್ರ ಪಂಚಾಯಿತಿಯನ್ನು ಸೀಮಿತಗೊಳಿಸಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಯಾವುದೇ ರೀತಿಯ ಕೆಲಸ ಕಾರ್ಯಗಳನ್ನು ಮಾಡಿಕೊಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಆಯೋಜನೆ ಮಾಡುತ್ತಿರುವ ಸಂವಿಧಾನ ಜಾಗೃತಿ ಜಾಥ ಕಾರ್ಯಕ್ರಮ ಫೆ.10‌ರಂದು ಹೆಗ್ಗಡಿಹಳ್ಳಿ ಮೂಲಕ ತಾಲ್ಲೂಕಿಗೆ ಪ್ರವೇಶ ಮಾಡಿದ್ದು, ಅಂದು ಎಲ್ಲಾ ಸಮುದಾಯಗಳನ್ನೂ ಒಟ್ಟಿಗೆ ಸೇರಿಸಿ ಪಿಡಿಒ ಅವರು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಿತ್ತು. ಆದರೆ, ಕಾರ್ಯಕ್ರಮವನ್ನು ಹಾಳು ಮಾಡುವ ಉದ್ದೇಶದಿಂದ ಯಾವುದೇ ಸಮುದಾಯದಗಳಿಗೂ ಸಂವಿಧಾನ ಜಾಗೃತಿ ಜಾಥಾದ ಬಗ್ಗೆ ತಿಳಿಸಿಲ್ಲ ಎಂದು ಆರೋಪಿಸಿದರು.

ಎಲ್ಲ ಸಮುದಾಯದ ಮುಖಂಡರನ್ನು ಸೇರಿಸಿ ಸಭೆ ನಡೆಸಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಬಗ್ಗೆ ತಿಳಿಸಿ ಸಮುದಾಯಗಳಲ್ಲಿ ಸಂವಿಧಾನದ ಬಗ್ಗೆ ಅರಿವು ಮೂಡಿಸಬೇಕಿದ್ದ ಪಿಡಿಒ ಅವರು, ಪರಿಶಿಷ್ಟ ಜಾತಿ / ಪಂಗಡ ಸೇರಿದಂತೆ ಯಾವುದೇ ಸಮುದಾಯದ ಸಭೆ ನಡೆಸದೆ, ಕಾರ್ಯಕ್ರಮದಲ್ಲಿ ಕೆಲವೆ ಜನರನ್ನು ಸೇರಿಸಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಾಳು ಮಾಡಿದ್ದಾರೆ. ದಲಿತ ವಿರೋಧಿ ನೀತಿ ಅನುಸರಿಸಿ ಸರ್ಕಾರಿ ಕಾರ್ಯಕ್ರಮವನ್ನು ಹಾಳು ಮಾಡಿರುವ ಗ್ರಾಮ ಪಂಚಾಯತಿ ಪಿಡಿಒ ಸೌಮ್ಯ ಅವರನ್ನು ಈ ಕೂಡಲೇ ಅಮಾನತು ಮಾಡಬೇಕೆಂದು ಒತ್ತಾಯಿಸಿದರು.

ಈ ಕುರಿತಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಅನುರಾಧ ಕೆ.ಎನ್ ಮತ್ತು ಗ್ರಾಮಾಂತರ ಜಿಲ್ಲಾ ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರಿಗೆ ಮನವಿ ಪತ್ರ ಸಲ್ಲಿಸುವ ಮೂಲಕ ಒತ್ತಾಯ‌ ಮಾಡಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

4 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

15 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

16 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

16 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

18 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

21 hours ago