ಪೂರ್ವ ವೈಷಮ್ಯದ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ದೊಡ್ಡಬಳ್ಳಾಪುರ: 2019ರ ಜನವರಿಯಲ್ಲಿ ದೊಡ್ಡಬಳ್ಳಾಪುರ ನಗರದ ಕೊರಚರಹಟ್ಟಿಯ ಪ್ರೀತಿ ವೈನ್ಸ್ ವೃತ್ತದ ಸಮೀಪ ನಡೆದಿದ್ದ ಗಂಗಾಧರ್ ಅಲಿಯಾಸ್ ದಾಸ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆನಂದ್ ಅಲಿಯಾಸ್ ಕಬಾಬ್ ಆನಂದ್‌ಗೆ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ನ್ಯಾಯಾಧೀಶರಾದ ನಿರ್ಮಲಾ ಕೆ. ಅವರು ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ, ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 302ರಡಿ ಆರೋಪಿಯನ್ನು ದೋಷಿ ಎಂದು ಘೋಷಿಸಿ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ನಾಲ್ಕು ತಿಂಗಳ ಸರಳ ಕಾರಾಗೃಹ ಶಿಕ್ಷೆ ಅನುಭವಿಸಬೇಕೆಂದು ತೀರ್ಪಿನಲ್ಲಿ ತಿಳಿಸಿದ್ದಾರೆ.

2019ರ ಜನವರಿ 8ರಂದು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಐಪಿಸಿ ಕಲಂ 302 (ಕೊಲೆ), 324 (ಅಪಾಯಕಾರಿ ಆಯುಧದಿಂದ ಹಲ್ಲೆ) ಹಾಗೂ 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಹಣಕಾಸಿನ ವಿಚಾರದಿಂದ ವೈಮನಸ್ಸು

ಪೊಲೀಸ್ ತನಿಖೆ ಹಾಗೂ ದಾಖಲೆಗಳ ಪ್ರಕಾರ, ಮೃತ ಗಂಗಾಧರ್ ಮತ್ತು ಆರೋಪಿ ಆನಂದ್ ನಡುವೆ ಹಣಕಾಸಿನ ವಿಚಾರವಾಗಿ ಹಿಂದಿನಿಂದಲೂ ವೈಮನಸ್ಸು ಇತ್ತು. ಘಟನೆ ನಡೆದ ದಿನ ರಾತ್ರಿ ಸುಮಾರು 9.45ರ ವೇಳೆಗೆ ಪ್ರೀತಿ ವೈನ್ಸ್ ವೃತ್ತದ ಬಳಿ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ಈ ವೇಳೆ ಗಂಗಾಧರ್ ಮಚ್ಚು ಹಾಗೂ ಖಾರದ ಪುಡಿಯನ್ನು ತೆಗೆದುಕೊಂಡು ಹಲ್ಲೆ ಮಾಡಲು ಮುಂದಾಗಿದ್ದಾನೆ ಎನ್ನಲಾಗಿದ್ದು, ಆತ್ಮರಕ್ಷಣೆ ವೇಳೆ ಆರೋಪಿ ಅದೇ ಮಚ್ಚನ್ನು ಪಡೆದು ಗಂಗಾಧರ್ ಮೇಲೆ ಹಲ್ಲೆ ನಡೆಸಿದ್ದಾನೆ..

ಗಂಭೀರವಾಗಿ ಗಾಯಗೊಂಡ ಗಂಗಾಧರ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

36 ಸಾಕ್ಷಿದಾರರ ವಿಚಾರಣೆ

ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯ 36 ಸಾಕ್ಷಿದಾರರನ್ನು ಪರೀಕ್ಷಿಸಿತು. ವೈದ್ಯಕೀಯ ವರದಿಗಳು, ದಾಖಲೆ ಸಾಕ್ಷ್ಯಗಳು ಹಾಗೂ ವಸ್ತು ಸಾಕ್ಷ್ಯಗಳನ್ನು ಪರಿಶೀಲಿಸಿದ ಬಳಿಕ ಆರೋಪಿಯ ವಿರುದ್ಧದ ಆರೋಪ ಸಾಬೀತಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

ತನಿಖಾ ತಂಡದ ಪಾತ್ರ

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ನಟರಾಜ್ ಟಿ.ಎನ್. ಸರ್ಕಾರದ ಪರ ವಾದ ಮಂಡಿಸಿದರು. ತನಿಖಾಧಿಕಾರಿಯಾಗಿದ್ದ ಸಿಪಿಐ ಸಿದ್ದರಾಜು, ಕೋರ್ಟ್ ಪೊಲೀಸ್ ಸಿಬ್ಬಂದಿ ಶಿವಕುಮಾರ್ ಎ.ಜಿ. ಹಾಗೂ ಚಿತ್ರಲಿಂಗ ಬಿ. ಅವರು ತನಿಖೆಗೆ ಸಹಕರಿಸಿರುತ್ತಾರೆ.

ಏಳು ವರ್ಷಗಳ ಕಾಲ ನ್ಯಾಯಾಲಯದಲ್ಲಿ ನಡೆದಿದ್ದ ವಿಚಾರಣೆಗೆ ಇದೀಗ ಅಂತಿಮ ತೆರೆ ಬಿದ್ದಿದ್ದು, ದೊಡ್ಡಬಳ್ಳಾಪುರದಲ್ಲಿ ಬಹುಚರ್ಚೆಗೆ ಕಾರಣವಾಗಿದ್ದ ಈ ಕೊಲೆ ಪ್ರಕರಣಕ್ಕೆ ನ್ಯಾಯಾಂಗ ಅಂತಿಮ ತೀರ್ಪು ನೀಡಿದೆ.

Ramesh Babu

Journalist

Recent Posts

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

5 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

11 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

12 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

1 day ago

ಶ್ರಾವಣದ ಹಬ್ಬಗಳಿಗೆ ಮುನ್ನವೇ ಹೂವಿನ ದರದ ಬಿಸಿ! ಇಳುವರಿ ಶೇ.30–40ರಷ್ಟು ಕುಸಿತ: ಹವಾಮಾನ ವೈಪರೀತ್ಯದ ಪರಿಣಾಮ: ಸಾಲುಸಾಲು ಹಬ್ಬಗಳಿಂದ ಬೇಡಿಕೆ ಹೆಚ್ಚಳ

  ಬೆಂಗಳೂರು: ಹಬ್ಬಗಳ ಸೀಸನ್‌ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…

1 day ago