ಪೂರ್ವ ವೈಷಮ್ಯದ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ

ದೊಡ್ಡಬಳ್ಳಾಪುರ: 2019ರ ಜನವರಿಯಲ್ಲಿ ದೊಡ್ಡಬಳ್ಳಾಪುರ ನಗರದ ಕೊರಚರಹಟ್ಟಿಯ ಪ್ರೀತಿ ವೈನ್ಸ್ ವೃತ್ತದ ಸಮೀಪ ನಡೆದಿದ್ದ ಗಂಗಾಧರ್ ಅಲಿಯಾಸ್ ದಾಸ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆನಂದ್ ಅಲಿಯಾಸ್ ಕಬಾಬ್ ಆನಂದ್‌ಗೆ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ನ್ಯಾಯಾಧೀಶರಾದ ನಿರ್ಮಲಾ ಕೆ. ಅವರು ಪ್ರಕರಣದ ವಿಚಾರಣೆ ಪೂರ್ಣಗೊಳಿಸಿ, ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 302ರಡಿ ಆರೋಪಿಯನ್ನು ದೋಷಿ ಎಂದು ಘೋಷಿಸಿ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ನಾಲ್ಕು ತಿಂಗಳ ಸರಳ ಕಾರಾಗೃಹ ಶಿಕ್ಷೆ ಅನುಭವಿಸಬೇಕೆಂದು ತೀರ್ಪಿನಲ್ಲಿ ತಿಳಿಸಿದ್ದಾರೆ.

2019ರ ಜನವರಿ 8ರಂದು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಐಪಿಸಿ ಕಲಂ 302 (ಕೊಲೆ), 324 (ಅಪಾಯಕಾರಿ ಆಯುಧದಿಂದ ಹಲ್ಲೆ) ಹಾಗೂ 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಹಣಕಾಸಿನ ವಿಚಾರದಿಂದ ವೈಮನಸ್ಸು

ಪೊಲೀಸ್ ತನಿಖೆ ಹಾಗೂ ದಾಖಲೆಗಳ ಪ್ರಕಾರ, ಮೃತ ಗಂಗಾಧರ್ ಮತ್ತು ಆರೋಪಿ ಆನಂದ್ ನಡುವೆ ಹಣಕಾಸಿನ ವಿಚಾರವಾಗಿ ಹಿಂದಿನಿಂದಲೂ ವೈಮನಸ್ಸು ಇತ್ತು. ಘಟನೆ ನಡೆದ ದಿನ ರಾತ್ರಿ ಸುಮಾರು 9.45ರ ವೇಳೆಗೆ ಪ್ರೀತಿ ವೈನ್ಸ್ ವೃತ್ತದ ಬಳಿ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ಈ ವೇಳೆ ಗಂಗಾಧರ್ ಮಚ್ಚು ಹಾಗೂ ಖಾರದ ಪುಡಿಯನ್ನು ತೆಗೆದುಕೊಂಡು ಹಲ್ಲೆ ಮಾಡಲು ಮುಂದಾಗಿದ್ದಾನೆ ಎನ್ನಲಾಗಿದ್ದು, ಆತ್ಮರಕ್ಷಣೆ ವೇಳೆ ಆರೋಪಿ ಅದೇ ಮಚ್ಚನ್ನು ಪಡೆದು ಗಂಗಾಧರ್ ಮೇಲೆ ಹಲ್ಲೆ ನಡೆಸಿದ್ದಾನೆ..

ಗಂಭೀರವಾಗಿ ಗಾಯಗೊಂಡ ಗಂಗಾಧರ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

36 ಸಾಕ್ಷಿದಾರರ ವಿಚಾರಣೆ

ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯ 36 ಸಾಕ್ಷಿದಾರರನ್ನು ಪರೀಕ್ಷಿಸಿತು. ವೈದ್ಯಕೀಯ ವರದಿಗಳು, ದಾಖಲೆ ಸಾಕ್ಷ್ಯಗಳು ಹಾಗೂ ವಸ್ತು ಸಾಕ್ಷ್ಯಗಳನ್ನು ಪರಿಶೀಲಿಸಿದ ಬಳಿಕ ಆರೋಪಿಯ ವಿರುದ್ಧದ ಆರೋಪ ಸಾಬೀತಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

ತನಿಖಾ ತಂಡದ ಪಾತ್ರ

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ನಟರಾಜ್ ಟಿ.ಎನ್. ಸರ್ಕಾರದ ಪರ ವಾದ ಮಂಡಿಸಿದರು. ತನಿಖಾಧಿಕಾರಿಯಾಗಿದ್ದ ಸಿಪಿಐ ಸಿದ್ದರಾಜು, ಕೋರ್ಟ್ ಪೊಲೀಸ್ ಸಿಬ್ಬಂದಿ ಶಿವಕುಮಾರ್ ಎ.ಜಿ. ಹಾಗೂ ಚಿತ್ರಲಿಂಗ ಬಿ. ಅವರು ತನಿಖೆಗೆ ಸಹಕರಿಸಿರುತ್ತಾರೆ.

ಏಳು ವರ್ಷಗಳ ಕಾಲ ನ್ಯಾಯಾಲಯದಲ್ಲಿ ನಡೆದಿದ್ದ ವಿಚಾರಣೆಗೆ ಇದೀಗ ಅಂತಿಮ ತೆರೆ ಬಿದ್ದಿದ್ದು, ದೊಡ್ಡಬಳ್ಳಾಪುರದಲ್ಲಿ ಬಹುಚರ್ಚೆಗೆ ಕಾರಣವಾಗಿದ್ದ ಈ ಕೊಲೆ ಪ್ರಕರಣಕ್ಕೆ ನ್ಯಾಯಾಂಗ ಅಂತಿಮ ತೀರ್ಪು ನೀಡಿದೆ.

Ramesh Babu

Journalist

Recent Posts

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

8 hours ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

20 hours ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

1 day ago

ಜು.25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…

1 day ago

ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು…..

ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…

1 day ago

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕ ಮುಕ್ತ – ಖಾಸಗಿ ಹೂಡಿಕೆದಾರರಿಗೆ ಸರ್ಕಾರದಿಂದ ಸಂಪೂರ್ಣ ಬೆಂಬಲ- ಸಚಿವ ಕೆ.ಜೆ. ಜಾರ್ಜ್

ಕರ್ನಾಟಕವನ್ನು ದೇಶದ ಹೂಡಿಕೆ ಸ್ನೇಹಿ ಪ್ರವಾಸೋದ್ಯಮ ರಾಜ್ಯವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಸರ್ಕಾರ ಪ್ರವಾಸೋದ್ಯಮ ನೀತಿಗಳನ್ನು ಮತ್ತಷ್ಟು ಸರಳೀಕರಿಸುತ್ತಿದ್ದು, ಖಾಸಗಿ ಹೂಡಿಕೆದಾರರಿಗೆ…

1 day ago