Categories: ಕೋಲಾರ

ಪೆನ್‌ಡ್ರೈವ್‌ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಜೆಡಿಎಸ್-ಬಿಜೆಪಿ ಒತ್ತಾಯ

ಕೋಲಾರ: ಪ್ರಜ್ವಲ್ ರೇವಣ್ಣ ಅವರಿಗೆ ಮಸಿ ಬಳೆಯುವ ಉದ್ದೇಶದಿಂದ ಪೆನ್‌ಡ್ರೈವ್‌ ಪ್ರಕರಣವನ್ನು ಬೆಳಕಿಗೆ ತಂದು ರಾಜ್ಯದಲ್ಲಿ ಬೆಂಕಿಹಂಚಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಊಟಿಯಲ್ಲಿ ಮಜಾ ಮಾಡಲು ಹೊರಟಿದ್ದಾರೆ. ಘಟನೆಯ ನೈಜತೆ ಹೊರಬರಬೇಕಾದರೆ ಸಿಬಿಐ ತನಿಖೆಯಾಗಬೇಕು ಎಂದು ಎಂಎಲ್ಸಿ ಇಂಚರ ಗೋವಿಂದರಾಜು ಒತ್ತಾಯಿಸಿದರು

ನಗರದ ಹೊಸ ಬಸ್ ನಿಲ್ದಾಣದ ಬಳಿ ಪೆನ್ ಡ್ರೈವ್ ಘಟನೆಯ ವಿರುದ್ದ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷದಿಂದ ಮಂಗಳವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ 125 ವರ್ಷಗಳ ಇತಿಹಾಸವಿದೆ ಸುಮಾರು 57 ವರ್ಷ ಕಾಲ ಅಧಿಕಾರವನ್ನು ಅನುಭವಿಸಿದ್ದಾರೆ. ಇಂದು ಪ್ರಜಾಪ್ರಭುತ್ವದ ವ್ಯವಸ್ಥೆಯೇ ತಲೆತಗ್ಗಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷವು ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರವು ಪೆನ್ ಡ್ರೈವ್ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಿದೆ. ಈ ಘಟನೆಯ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೈವಾಡವಿದ್ದು, ಸಾಕ್ಷಿಗಳನ್ನು ತಮ್ಮ ಸರಕಾರದ ಪರವಾಗಿ ತಮಗೆ ಬೇಕಾದ ರೀತಿಯಲ್ಲಿ ತನಿಖೆ ನಡೆಸುತ್ತಾರೆ. ಯಾರನ್ನು ಬಂಧಿಸಬೇಕು, ಯಾರನ್ನು ಬಿಡಬೇಕು ಎಂದು ಸರಕಾರದ ಅಣತಿಯಂತೆ ಎಸ್‌ಐಟಿ ಅಧಿಕಾರಿಗಳು ನಡೆಯುತ್ತಿದ್ದಾರೆ. ಈ ಘಟನೆಯ ನೈಜತೆ ಹೊರಬರಬೇಕಾದರೆ ಸಿಬಿಐ ಮಧ್ಯಪ್ರವೇಶಿಸಿ ತನಿಖೆಗೆ ನಡೆಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರಕಾರವೇ ದೇವೇಗೌಡರ ಕುಟುಂಬದ ವಿರುದ್ದ ಕಪ್ಪು ಚುಕ್ಕೆ ತರುವ ಉದ್ದೇಶದಿಂದ ರಾಜ್ಯದ ಮಾನ ಹರಾಜು ಹಾಕಿದ್ದಾರೆ. ಪೆನ್ ಡ್ರೈವ್ ಪ್ರಕರಣದಲ್ಲಿ ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪಿಸಿರುವಂತೆ ಪೆನ್‌ಡ್ರೈವ್ ಬಿಡುಗಡೆಯಲ್ಲಿ ಡಿ.ಕೆ.ಶಿವಕುಮಾರ್ ಪಾತ್ರವೇ ಪ್ರಮುಖವಾಗಿದೆ. ಹೀಗಾಗಿ ಅವರು ಕೂಡಲೇ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಜೊತೆಗೆ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ, ಡಿಕೆಶಿ ಆಡಿಯೊ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಈ ಘಟನೆಯಲ್ಲಿ ಭಾಗವಹಿಸಿದವರು ಯಾರೇ ಆಗಲಿ ಅವರನ್ನು ಕಠಿಣ ಶಿಕ್ಷೆಗೆ ಒಳಪಡಿಸಲಿ. ಅದು ಬಿಟ್ಟು ವಿನಾಕಾರಣ ಸಂತ್ರಸ್ತ ಮಹಿಳೆಯನ್ನು ಬೀದಿಗೆ ತಂದು ಅವಮಾನ ಮಾಡಲು ಹೊರಟಿದ್ದು ಮಹಿಳೆಯರಿಗೆ ಸರಕಾರ ಮಾಡಿದ ಅವಮಾನವಾಗಿದೆ. ಎಸ್ಐಟಿಯ ಕೆಲವು ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ‌ ಕೆಲಸ ಮಾಡುತ್ತಿದ್ದಾರೆ. ಜೆಡಿಎಸ್‌ ಪಕ್ಷವನ್ನು ಮುಗಿಸುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಹಾಗೂ ಪೊಲೀಸ್‌ ಅಧಿಕಾರಿಗಳು ಸೇರಿಕೊಂಡು ಮಾಡುತ್ತಿದ್ದಾರೆ ಇದಕ್ಕೆ ಉತ್ತರವನ್ನು ಮುಂದಿನ ಜೂನ್ 4 ರಂದು ರಾಜ್ಯದ ಜನತೆ ತಕ್ಕ ಉತ್ತರವನ್ನು ನೀಡಲಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಮಾಜಿ ಜಿಲ್ಲಾಧ್ಯಕ್ಷ ಬಣಕನಹಳ್ಳಿ ನಟರಾಜ್, ತಾಲೂಕು ಅಧ್ಯಕ್ಷ ಬಾಬು ಮೌನಿ, ಕೋಚಿಮುಲ್ ನಿರ್ದೇಶಕ ಡಿ.ವಿ ಹರೀಶ್, ಮುಖಂಡರಾದ ವಡಗೂರು ರಾಮು, ಕಡಗಟ್ಟೂರು ದಯಾನಂದ್, ಖಾಜಿಕಲ್ಲಹಳ್ಳಿ ಹರೀಶ್, ಲೋಕೇಶ್ ಮರಿಯಪ್ಪ, ಶಬರೀಷ್, ಚಂಬೆ ರಾಜೇಶ್, ತೋಟಗಳ ಅಶೋಕ್, ಮುದುವಾಡಿ ಮಂಜು, ಅರಾಭಿಕೊತ್ತನೂರು ನಂಜುಂಡಗೌಡ, ರಾಕೇಶ್, ಜನಪನಹಳ್ಳಿ ಆನಂದ್, ದಿಂಬ ನಾಗರಾಜಗೌಡ, ಯಲುವಗುಳಿ ನಾಗರಾಜ್, ಅಮ್ಮನಲ್ಲೂರು ರಮೇಶ್, ಸುಗಟೂರು ಚಲಪತಿ, ನರೇಂದ್ರ ಬಾಬು, ಮುಂತಾದವರು ಇದ್ದರು

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

10 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

11 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

11 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

13 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

16 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

17 hours ago