ಉತ್ತರ ಪ್ರದೇಶದ ಗಾಜಿಯಾಬಾದ್ನ ಪೊದೆಗಳಲ್ಲಿ ಅನಾಥವಾಗಿ ಇದ್ದ ನವಜಾತ ಹೆಣ್ಣು ಮಗುವನ್ನು ಶನಿವಾರ ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ರಕ್ಷಣೆ ಮಾಡಿ ದತ್ತು ಪಡೆದಿದ್ದಾರೆ.
ಪೊದೆಯಿಂದ ನವಜಾತ ಮಗುವೊಂದು ಅಳುವ ಸದ್ದು ಕೇಳಿಸಿತ್ತು. ಇದನ್ನು ಆಲಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಸಬ್ ಇನ್ಸ್ಪೆಕ್ಟರ್ ಪುಷ್ಪೇಂದ್ರ ಸಿಂಗ್ ಅವರು ನವಜಾತ ಹೆಣ್ಣು ಮಗುವನ್ನು ರಕ್ಷಿಸಿ ತಕ್ಷಣವೇ ಆಸ್ಪತ್ರೆ ದಾಖಲಿಸಿದ್ದಾರೆ.
ಸಬ್ ಇನ್ಸ್ಪೆಕ್ಟರ್ ಪುಷ್ಪೇಂದ್ರ ಸಿಂಗ್ ಅವರು ಮಗುವಿನ ಪೋಷಕರಿಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ, ಪೋಷಕರ ಮಾಹಿತಿ ದೊರಕಲಿಲ್ಲ. ಇಷ್ಟೇ ಅಲ್ಲ ಮಗುವಿನ ಆರೈಕೆಗೆ ಯಾರೂ ಮುಂದೆ ಬರಲಿಲ್ಲ. ಕೊನೆಯದಾಗಿ ಸಬ್ ಇನ್ಸ್ಪೆಕ್ಟರ್ ಪೊದೆಯಿಂದ ರಕ್ಷಿಸಿದ ಮಗುವನ್ನು ಕಾನೂನಿನ ಪ್ರಕ್ರಿಯೆ ಪೂರ್ಣಗೊಳಿಸಿ ದತ್ತು ಪಡೆದಿದ್ದಾರೆ. ದತ್ತು ಪಡೆದಿದ್ದಾರೆ. ಇದೀಗ ದತ್ತು ಪಡೆದು ನವಜಾತ ಮಗುವಿನ ಜೊತೆ ದಸರಾ ಹಬ್ಬ ಆಚರಿಸಿದ ಅವರು, ನವರಾತ್ರಿ ಹಬ್ಬಕ್ಕೆ ಲಕ್ಷ್ಮಿ ಮನೆಗೆ ಆಗಮಿಸಿದ್ದಾಳೆ. ಇದಕ್ಕಿಂತ ಸಂತೋಷ ಇನ್ನೇನಿದೆ ಎಂದು ಪುಷ್ಪೇಂದ್ರ ಸಿಂಗ್ ಹೇಳಿದ್ದಾರೆ.
2018ರಲ್ಲಿ ಮದುವೆಯಾಗಿರುವ ಪುಷ್ಪೇಂದ್ರ ಸಿಂಗ್ಗೆ ಮಕ್ಕಳಿಲ್ಲ. ಪತ್ನಿ ಜೊತೆ ಮಾತುಕತೆ ಬಳಿಕ ರಕ್ಷಿಸಿದ ಹೆಣ್ಣು ಮಗುವನ್ನು ಕಾನೂನು ಪ್ರಕ್ರಿಯೆ ಮೂಲಕ ದತ್ತು ಪಡೆದಿದ್ದಾರೆ.
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…
ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…