ಪೊದೆಯಲ್ಲಿ ಅನಾಥವಾಗಿ ಇದ್ದ ನವಜಾತ ಹೆಣ್ಣು ಮಗುವಿನ ರಕ್ಷಣೆ: ರಕ್ಷಣೆ ಮಾಡಿ ಮಗುವನ್ನ ದತ್ತು ಪಡೆದ ಪೊಲೀಸ್ ಅಧಿಕಾರಿ: ಮಗುವಿನ ಜೊತೆ ದಸರಾ ಹಬ್ಬ ಆಚರಿಸಿದ ಸಬ್ ಇನ್ಸ್‌ಪೆಕ್ಟರ್ ಪುಷ್ಪೇಂದ್ರ ಸಿಂಗ್

ಉತ್ತರ ಪ್ರದೇಶದ ಗಾಜಿಯಾಬಾದ್‌ನ ಪೊದೆಗಳಲ್ಲಿ ಅನಾಥವಾಗಿ ಇದ್ದ ನವಜಾತ ಹೆಣ್ಣು ಮಗುವನ್ನು ಶನಿವಾರ ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ರಕ್ಷಣೆ ಮಾಡಿ ದತ್ತು ಪಡೆದಿದ್ದಾರೆ.

ಪೊದೆಯಿಂದ ನವಜಾತ ಮಗುವೊಂದು ಅಳುವ ಸದ್ದು ಕೇಳಿಸಿತ್ತು. ಇದನ್ನು ಆಲಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಸಬ್ ಇನ್ಸ್‌ಪೆಕ್ಟರ್ ಪುಷ್ಪೇಂದ್ರ ಸಿಂಗ್ ಅವರು ನವಜಾತ ಹೆಣ್ಣು ಮಗುವನ್ನು ರಕ್ಷಿಸಿ ತಕ್ಷಣವೇ ಆಸ್ಪತ್ರೆ ದಾಖಲಿಸಿದ್ದಾರೆ.

ಸಬ್ ಇನ್ಸ್‌ಪೆಕ್ಟರ್ ಪುಷ್ಪೇಂದ್ರ ಸಿಂಗ್ ಅವರು ಮಗುವಿನ ಪೋಷಕರಿಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ, ಪೋಷಕರ ಮಾಹಿತಿ ದೊರಕಲಿಲ್ಲ. ಇಷ್ಟೇ ಅಲ್ಲ ಮಗುವಿನ ಆರೈಕೆಗೆ ಯಾರೂ ಮುಂದೆ ಬರಲಿಲ್ಲ. ಕೊನೆಯದಾಗಿ ಸಬ್ ಇನ್ಸ್‌ಪೆಕ್ಟರ್ ಪೊದೆಯಿಂದ ರಕ್ಷಿಸಿದ ಮಗುವನ್ನು ಕಾನೂನಿನ ಪ್ರಕ್ರಿಯೆ ಪೂರ್ಣಗೊಳಿಸಿ ದತ್ತು ಪಡೆದಿದ್ದಾರೆ. ದತ್ತು ಪಡೆದಿದ್ದಾರೆ. ಇದೀಗ ದತ್ತು ಪಡೆದು ನವಜಾತ ಮಗುವಿನ ಜೊತೆ ದಸರಾ ಹಬ್ಬ ಆಚರಿಸಿದ ಅವರು, ನವರಾತ್ರಿ ಹಬ್ಬಕ್ಕೆ ಲಕ್ಷ್ಮಿ ಮನೆಗೆ ಆಗಮಿಸಿದ್ದಾಳೆ. ಇದಕ್ಕಿಂತ ಸಂತೋಷ ಇನ್ನೇನಿದೆ ಎಂದು ಪುಷ್ಪೇಂದ್ರ ಸಿಂಗ್ ಹೇಳಿದ್ದಾರೆ.

2018ರಲ್ಲಿ ಮದುವೆಯಾಗಿರುವ ಪುಷ್ಪೇಂದ್ರ ಸಿಂಗ್‌ಗೆ ಮಕ್ಕಳಿಲ್ಲ. ಪತ್ನಿ ಜೊತೆ ಮಾತುಕತೆ ಬಳಿಕ ರಕ್ಷಿಸಿದ ಹೆಣ್ಣು ಮಗುವನ್ನು ಕಾನೂನು ಪ್ರಕ್ರಿಯೆ ಮೂಲಕ ದತ್ತು ಪಡೆದಿದ್ದಾರೆ.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

17 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

23 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

3 days ago