ಉತ್ತರ ಪ್ರದೇಶದ ಗಾಜಿಯಾಬಾದ್ನ ಪೊದೆಗಳಲ್ಲಿ ಅನಾಥವಾಗಿ ಇದ್ದ ನವಜಾತ ಹೆಣ್ಣು ಮಗುವನ್ನು ಶನಿವಾರ ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ರಕ್ಷಣೆ ಮಾಡಿ ದತ್ತು ಪಡೆದಿದ್ದಾರೆ.
ಪೊದೆಯಿಂದ ನವಜಾತ ಮಗುವೊಂದು ಅಳುವ ಸದ್ದು ಕೇಳಿಸಿತ್ತು. ಇದನ್ನು ಆಲಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಸಬ್ ಇನ್ಸ್ಪೆಕ್ಟರ್ ಪುಷ್ಪೇಂದ್ರ ಸಿಂಗ್ ಅವರು ನವಜಾತ ಹೆಣ್ಣು ಮಗುವನ್ನು ರಕ್ಷಿಸಿ ತಕ್ಷಣವೇ ಆಸ್ಪತ್ರೆ ದಾಖಲಿಸಿದ್ದಾರೆ.
ಸಬ್ ಇನ್ಸ್ಪೆಕ್ಟರ್ ಪುಷ್ಪೇಂದ್ರ ಸಿಂಗ್ ಅವರು ಮಗುವಿನ ಪೋಷಕರಿಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ, ಪೋಷಕರ ಮಾಹಿತಿ ದೊರಕಲಿಲ್ಲ. ಇಷ್ಟೇ ಅಲ್ಲ ಮಗುವಿನ ಆರೈಕೆಗೆ ಯಾರೂ ಮುಂದೆ ಬರಲಿಲ್ಲ. ಕೊನೆಯದಾಗಿ ಸಬ್ ಇನ್ಸ್ಪೆಕ್ಟರ್ ಪೊದೆಯಿಂದ ರಕ್ಷಿಸಿದ ಮಗುವನ್ನು ಕಾನೂನಿನ ಪ್ರಕ್ರಿಯೆ ಪೂರ್ಣಗೊಳಿಸಿ ದತ್ತು ಪಡೆದಿದ್ದಾರೆ. ದತ್ತು ಪಡೆದಿದ್ದಾರೆ. ಇದೀಗ ದತ್ತು ಪಡೆದು ನವಜಾತ ಮಗುವಿನ ಜೊತೆ ದಸರಾ ಹಬ್ಬ ಆಚರಿಸಿದ ಅವರು, ನವರಾತ್ರಿ ಹಬ್ಬಕ್ಕೆ ಲಕ್ಷ್ಮಿ ಮನೆಗೆ ಆಗಮಿಸಿದ್ದಾಳೆ. ಇದಕ್ಕಿಂತ ಸಂತೋಷ ಇನ್ನೇನಿದೆ ಎಂದು ಪುಷ್ಪೇಂದ್ರ ಸಿಂಗ್ ಹೇಳಿದ್ದಾರೆ.
2018ರಲ್ಲಿ ಮದುವೆಯಾಗಿರುವ ಪುಷ್ಪೇಂದ್ರ ಸಿಂಗ್ಗೆ ಮಕ್ಕಳಿಲ್ಲ. ಪತ್ನಿ ಜೊತೆ ಮಾತುಕತೆ ಬಳಿಕ ರಕ್ಷಿಸಿದ ಹೆಣ್ಣು ಮಗುವನ್ನು ಕಾನೂನು ಪ್ರಕ್ರಿಯೆ ಮೂಲಕ ದತ್ತು ಪಡೆದಿದ್ದಾರೆ.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…