ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿಯ ದರ್ಶನ: ಅಯ್ಯಪ್ಪ ಸ್ವಾಮಿ ಭಕ್ತರು ಕೈಜೋಡಿಸಿ, ಸ್ವಾಮಿ ಶರಣಂ ಅಯ್ಯಪ್ಪ ಎಂದು ಪಠಿಸುತ್ತಾ ಮಕರ ಜ್ಯೋತಿಯ ದರ್ಶನ ಪಡೆದ ಲಕ್ಷಾಂತರ ಭಕ್ತರು

ಇಂದು ಸಂಜೆ 6.45ಕ್ಕೆ ಸರಿಯಾಗಿ ಶಬರಿಮಲೆಯಿಂದ 5-8 ಕಿ.ಮೀ. ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿಯ ದರ್ಶನವಾಗಿದೆ.

ಲಕ್ಷಾಂತರ ಭಕ್ತರು ಶಬರಿಮಲೆಯ ಪೊನ್ನಂಬಲಮೇಡು ಬೆಟ್ಟದಲ್ಲಿ ಕಾಣುವ ಪವಿತ್ರವಾದ ಮಕರ ಜ್ಯೋತಿಯನ್ನು ವೀಕ್ಷಿಸಿದರು.

ಅಯ್ಯಪ್ಪ ಸ್ವಾಮಿ ಭಕ್ತರು ಕೈಜೋಡಿಸಿ, ಸ್ವಾಮಿ ಶರಣಂ ಅಯ್ಯಪ್ಪ ಎಂದು ಪಠಿಸುತ್ತಾ ಮಕರ ಜ್ಯೋತಿಯ ದರ್ಶನ ಪಡೆದರು.

ಈ ವೇಳೆ ನಕ್ಷತ್ರವು ಆಕಾಶದಲ್ಲಿ ಬೆಳಗಿ ಭಕ್ತರಿಗೆ ಆಶೀರ್ವಾದವನ್ನು ತಂದಿತು. ಆಕಾಶದಲ್ಲಿ ಬೇರೆ ಯಾವುದೇ ನಕ್ಷತ್ರಗಳಿಲ್ಲದೆ ಉತ್ರಮ ನಕ್ಷತ್ರದ ದರ್ಶನವನ್ನು ಪಡೆದ ಭಕ್ತರು ಧನ್ಯರಾದರು…

ಮಕರ ಸಂಕ್ರಾಂತಿಯನ್ನು ಶಬರಿಮಲೆ ಸನ್ನಿಧಾನದಲ್ಲಿ ಮಕರ ಜ್ಯೋತಿ ಮತ್ತು ಮಕರ ವಿಳಕ್ಕು ಎಂದು ಆಚರಿಸಲಾಗುತ್ತದೆ. ಇದು ಅಯ್ಯಪ್ಪ ಸ್ವಾಮಿಯ ಆಶೀರ್ವಾದವನ್ನು ಸೂಚಿಸುವ ಕ್ಷಣವಾಗಿದೆ.
ಪೊನ್ನಂಬಲಮೇಡು ಬೆಟ್ಟದ ಮೇಲೆ ಕಾಣಿಸಿಕೊಳ್ಳುವ ಪವಿತ್ರ ಜ್ಯೋತಿಯನ್ನೇ ಅಯ್ಯಪ್ಪ ಭಕ್ತರು ಮಕರ ಜ್ಯೋತಿ ಎಂದು ನಂಬುತ್ತಾರೆ.

ಈ ಕ್ಷಣವನ್ನು ಕಣ್ತುಂಬಿಕೊಳ್ಳುವುದಕ್ಕಾಗಿ ಅವರು ಉಪವಾಸ, ವ್ರತ ಇತ್ಯಾದಿಗಳನ್ನು ಮಾಡುವ ಮೂಲಕ ಅಯ್ಯಪ್ಪನ ಸನ್ನಿಧಾನವನ್ನು ಪ್ರವೇಶಿಸುತ್ತಾರೆ. ಮಾಲೆಯನ್ನು ಧರಿಸಿದ ಅಯ್ಯಪ್ಪ ಮಾಲಾಧಾರಿಗಳಿಗೆ ಈ ಕ್ಷಣ ಸಾಕ್ಷಾತ್‌ ಅಯ್ಯಪ್ಪ ಸ್ವಾಮಿಯೇ ದರ್ಶನ ನೀಡುವ ಅದ್ಭುತ ಕ್ಷಣವಾಗಿದೆ.

Ramesh Babu

Journalist

Recent Posts

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

50 minutes ago

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…

1 hour ago

ಡಾ.ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ.?: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಸುಳಿವು

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…

1 hour ago

ಪ್ರಮಾಣ ವಚನ ಅಥವಾ ಪ್ರತಿಜ್ಞಾ ವಿಧಿ……. ಇವು ಆತ್ಮಸಾಕ್ಷಿಯ ನುಡಿಗಳೇ – ಸಂವಿಧಾನಾತ್ಮಕ ಕರ್ತವ್ಯವೇ – ಒಂದು ಒಣ ವಿಧಿ ವಿಧಾನವೇ…….

ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…

5 hours ago

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

19 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

19 hours ago