ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿಯ ದರ್ಶನ: ಅಯ್ಯಪ್ಪ ಸ್ವಾಮಿ ಭಕ್ತರು ಕೈಜೋಡಿಸಿ, ಸ್ವಾಮಿ ಶರಣಂ ಅಯ್ಯಪ್ಪ ಎಂದು ಪಠಿಸುತ್ತಾ ಮಕರ ಜ್ಯೋತಿಯ ದರ್ಶನ ಪಡೆದ ಲಕ್ಷಾಂತರ ಭಕ್ತರು

ಇಂದು ಸಂಜೆ 6.45ಕ್ಕೆ ಸರಿಯಾಗಿ ಶಬರಿಮಲೆಯಿಂದ 5-8 ಕಿ.ಮೀ. ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿಯ ದರ್ಶನವಾಗಿದೆ.

ಲಕ್ಷಾಂತರ ಭಕ್ತರು ಶಬರಿಮಲೆಯ ಪೊನ್ನಂಬಲಮೇಡು ಬೆಟ್ಟದಲ್ಲಿ ಕಾಣುವ ಪವಿತ್ರವಾದ ಮಕರ ಜ್ಯೋತಿಯನ್ನು ವೀಕ್ಷಿಸಿದರು.

ಅಯ್ಯಪ್ಪ ಸ್ವಾಮಿ ಭಕ್ತರು ಕೈಜೋಡಿಸಿ, ಸ್ವಾಮಿ ಶರಣಂ ಅಯ್ಯಪ್ಪ ಎಂದು ಪಠಿಸುತ್ತಾ ಮಕರ ಜ್ಯೋತಿಯ ದರ್ಶನ ಪಡೆದರು.

ಈ ವೇಳೆ ನಕ್ಷತ್ರವು ಆಕಾಶದಲ್ಲಿ ಬೆಳಗಿ ಭಕ್ತರಿಗೆ ಆಶೀರ್ವಾದವನ್ನು ತಂದಿತು. ಆಕಾಶದಲ್ಲಿ ಬೇರೆ ಯಾವುದೇ ನಕ್ಷತ್ರಗಳಿಲ್ಲದೆ ಉತ್ರಮ ನಕ್ಷತ್ರದ ದರ್ಶನವನ್ನು ಪಡೆದ ಭಕ್ತರು ಧನ್ಯರಾದರು…

ಮಕರ ಸಂಕ್ರಾಂತಿಯನ್ನು ಶಬರಿಮಲೆ ಸನ್ನಿಧಾನದಲ್ಲಿ ಮಕರ ಜ್ಯೋತಿ ಮತ್ತು ಮಕರ ವಿಳಕ್ಕು ಎಂದು ಆಚರಿಸಲಾಗುತ್ತದೆ. ಇದು ಅಯ್ಯಪ್ಪ ಸ್ವಾಮಿಯ ಆಶೀರ್ವಾದವನ್ನು ಸೂಚಿಸುವ ಕ್ಷಣವಾಗಿದೆ.
ಪೊನ್ನಂಬಲಮೇಡು ಬೆಟ್ಟದ ಮೇಲೆ ಕಾಣಿಸಿಕೊಳ್ಳುವ ಪವಿತ್ರ ಜ್ಯೋತಿಯನ್ನೇ ಅಯ್ಯಪ್ಪ ಭಕ್ತರು ಮಕರ ಜ್ಯೋತಿ ಎಂದು ನಂಬುತ್ತಾರೆ.

ಈ ಕ್ಷಣವನ್ನು ಕಣ್ತುಂಬಿಕೊಳ್ಳುವುದಕ್ಕಾಗಿ ಅವರು ಉಪವಾಸ, ವ್ರತ ಇತ್ಯಾದಿಗಳನ್ನು ಮಾಡುವ ಮೂಲಕ ಅಯ್ಯಪ್ಪನ ಸನ್ನಿಧಾನವನ್ನು ಪ್ರವೇಶಿಸುತ್ತಾರೆ. ಮಾಲೆಯನ್ನು ಧರಿಸಿದ ಅಯ್ಯಪ್ಪ ಮಾಲಾಧಾರಿಗಳಿಗೆ ಈ ಕ್ಷಣ ಸಾಕ್ಷಾತ್‌ ಅಯ್ಯಪ್ಪ ಸ್ವಾಮಿಯೇ ದರ್ಶನ ನೀಡುವ ಅದ್ಭುತ ಕ್ಷಣವಾಗಿದೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

11 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

13 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

14 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

18 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

20 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago