ಇಂದು ಸಂಜೆ 6.45ಕ್ಕೆ ಸರಿಯಾಗಿ ಶಬರಿಮಲೆಯಿಂದ 5-8 ಕಿ.ಮೀ. ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿಯ ದರ್ಶನವಾಗಿದೆ.
ಲಕ್ಷಾಂತರ ಭಕ್ತರು ಶಬರಿಮಲೆಯ ಪೊನ್ನಂಬಲಮೇಡು ಬೆಟ್ಟದಲ್ಲಿ ಕಾಣುವ ಪವಿತ್ರವಾದ ಮಕರ ಜ್ಯೋತಿಯನ್ನು ವೀಕ್ಷಿಸಿದರು.
ಅಯ್ಯಪ್ಪ ಸ್ವಾಮಿ ಭಕ್ತರು ಕೈಜೋಡಿಸಿ, ಸ್ವಾಮಿ ಶರಣಂ ಅಯ್ಯಪ್ಪ ಎಂದು ಪಠಿಸುತ್ತಾ ಮಕರ ಜ್ಯೋತಿಯ ದರ್ಶನ ಪಡೆದರು.
ಈ ವೇಳೆ ನಕ್ಷತ್ರವು ಆಕಾಶದಲ್ಲಿ ಬೆಳಗಿ ಭಕ್ತರಿಗೆ ಆಶೀರ್ವಾದವನ್ನು ತಂದಿತು. ಆಕಾಶದಲ್ಲಿ ಬೇರೆ ಯಾವುದೇ ನಕ್ಷತ್ರಗಳಿಲ್ಲದೆ ಉತ್ರಮ ನಕ್ಷತ್ರದ ದರ್ಶನವನ್ನು ಪಡೆದ ಭಕ್ತರು ಧನ್ಯರಾದರು…
ಮಕರ ಸಂಕ್ರಾಂತಿಯನ್ನು ಶಬರಿಮಲೆ ಸನ್ನಿಧಾನದಲ್ಲಿ ಮಕರ ಜ್ಯೋತಿ ಮತ್ತು ಮಕರ ವಿಳಕ್ಕು ಎಂದು ಆಚರಿಸಲಾಗುತ್ತದೆ. ಇದು ಅಯ್ಯಪ್ಪ ಸ್ವಾಮಿಯ ಆಶೀರ್ವಾದವನ್ನು ಸೂಚಿಸುವ ಕ್ಷಣವಾಗಿದೆ.
ಪೊನ್ನಂಬಲಮೇಡು ಬೆಟ್ಟದ ಮೇಲೆ ಕಾಣಿಸಿಕೊಳ್ಳುವ ಪವಿತ್ರ ಜ್ಯೋತಿಯನ್ನೇ ಅಯ್ಯಪ್ಪ ಭಕ್ತರು ಮಕರ ಜ್ಯೋತಿ ಎಂದು ನಂಬುತ್ತಾರೆ.
ಈ ಕ್ಷಣವನ್ನು ಕಣ್ತುಂಬಿಕೊಳ್ಳುವುದಕ್ಕಾಗಿ ಅವರು ಉಪವಾಸ, ವ್ರತ ಇತ್ಯಾದಿಗಳನ್ನು ಮಾಡುವ ಮೂಲಕ ಅಯ್ಯಪ್ಪನ ಸನ್ನಿಧಾನವನ್ನು ಪ್ರವೇಶಿಸುತ್ತಾರೆ. ಮಾಲೆಯನ್ನು ಧರಿಸಿದ ಅಯ್ಯಪ್ಪ ಮಾಲಾಧಾರಿಗಳಿಗೆ ಈ ಕ್ಷಣ ಸಾಕ್ಷಾತ್ ಅಯ್ಯಪ್ಪ ಸ್ವಾಮಿಯೇ ದರ್ಶನ ನೀಡುವ ಅದ್ಭುತ ಕ್ಷಣವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…