ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಕರವೇ ಪ್ರತಿಭಟನೆ

ಬೆಂಗಳೂರಿನಲ್ಲಿ ನಡೆದ ಆರ್ ಸಿಬಿ ಸಂಭ್ರಮಾಚರಣೆ ವೇಳೆ 11 ಮಂದಿ ಕಾಲ್ತುಳಿತಕ್ಕೆ ಒಳಗಾಗಿ ಸಾವನ್ನಪ್ಪಿರುವ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಘಟನೆಯಲ್ಲಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ಕನ್ನಡಿಗರ ರಕ್ಷಣಾ ವೇದಿಕೆ ವತಿಯಿಂದ ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ಕನ್ನಡಿಗರ ರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್ ಮಾತನಾಡಿ, ಬೆಂಗಳೂರಿನಲ್ಲಿ ಬುಧವಾರ ನಡೆದ ಐಪಿಎಲ್ ಕಪ್ ವಿಜೇತ ತಂಡ ಆರ್ ಸಿಬಿಯ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ, ರಾಜ್ಯ ಸರ್ಕಾರ ಯಾವುದೇ ಪೂರ್ವಸಿದ್ಧತೆ ಮಾಡಿಕೊಳ್ಳದೇ ತರಾತುರಿಯಲ್ಲಿ ಕಾರ್ಯಕ್ರಮನ್ನು ಆಯೋಜಿಸಿತ್ತು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ರಾಜ್ಯಪಾಲರು ಹಾಗೂ ಸಚಿವರು, ಅಧಿಕಾರಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮ ಪೂರ್ವಸಿದ್ಧತೆ ಮಾಡಿಕೊಂಡು ಕಾರ್ಯಕ್ರಮ ಆಯೋಜಿಸಿದ್ದರೆ ವ್ಯವಸ್ಥಿತವಾಗಿ ಮಾಡಬಹುದಾಗಿತ್ತು. ಆದರೆ, ಸರ್ಕಾರ ನಿರ್ಲಕ್ಷಿಸಿದ ಪರಿಣಾಮ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ 11 ಮಂದಿ ಬಲಿಯಾಗಿ, ಅವರ ಕುಟುಂಬಗಳು  ಇಂದು ಶೋಕಸಾಗರದಲ್ಲಿ ಮುಳುಗಿವೆ. ಅವರ ಜೀವನ ಏನು ಎಂಬುದನ್ನ ರಾಜ್ಯ ಸರ್ಕಾರ ಯೋಚನೆ ಮಾಡಬೇಕಿದೆ ಎಂದು ಹೇಳಿದರು.

ಪ್ರಚಾರ ಗಿಟ್ಟಿಸಲು ಅವರ ಮಕ್ಕಳು ಹಾಗೂ ಬೇಕಾದವರಿಗೆ ವೇದಿಕೆ ಕಲ್ಪಿಸಲು ಕಾರ್ಯಕ್ರಮ ಆಯೋಜಿಸಿದ್ದು, ಇದಕ್ಕೆ ಅಮಾಯಕರು ಬಲಿಯಾಗಿದ್ದಾರೆ. ಈ ಪ್ರಕರಣದ ಆರೋಪವನ್ನು ಪೊಲೀಸ್ ಕಮಿಷನರ್ ದಯನಂದ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳ ಮೇಲೆ ಹಾಕಿ ಅವರನ್ನು ಅಮಾನತು ಮಾಡಿರುವುದು ಖಂಡನೀಯ. ಪೊಲೀಸರ ಎಚ್ಚರಿಕೆ ಲೆಕ್ಕಿಸದೇ ಕಾರ್ಯಕ್ರಮವನ್ನು ಆಯೋಜಿಸಿ ಈಗ ಪೊಲೀಸ್ ಅಧಿಕಾರಿಗಳ ಅಮಾನತು  ಮಾಡಿರುವ ಸರ್ಕಾರದ ಕ್ರಮ ಖಂಡನೀಯವಾಗಿದ್ದು, ಕೂಡಲೇ ಈ ದಕ್ಷ ಅಧಿಕಾರಿಗಳನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದರು.

ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಸರ್ಕಾರ ಘೋಷಿಸಿರುವ ಪರಿಹಾರ ಅವರ ಕುಟುಂಬಗಳಿಗೆ ನೇರವಾಗಿ ತಲುಪಬೇಕು ಎಂದು ಕರವೇ ಒತ್ತಾಯಿಸಲಾಗುತ್ತಿದ್ದು, ಸರ್ಕಾರ  ಪೊಲೀಸ್ ಅಧಿಕಾರಿಗಳ ಅಮಾನತು ವಾಪಸ್ ಪಡೆಯದಿದ್ದರೆ ಹಾಗೂ ಘಟನೆಯಲ್ಲಿ ಅನ್ಯಾಯವಾದವರಿಗೆ ನ್ಯಾಯ ದೊರಕಿಸಿಕೊಡದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಕರವೇ ಸಂಘಟನಾ ಕಾರ್ಯದರ್ಶಿ ಅರವಿಂದಪ್ಪ, ದೊಡ್ಡೇಗೌಡ, ರಾಜ್ಯ ಸಂಚಾಲಕ ಪಿ.ವಾಸು, ನರೇಂದ್ರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ರಂಜಿತ್, ತಾಲೂಕು ಘಟಕದ ಅಧ್ಯಕ್ಷ ವಿನಯ್, ಶಿವಣ್ಣ, ಉಪಾಧ್ಯಕ್ಷ ಅಂಬರೀಶ್, ಅಶ್ವತ್ಥ ನಾರಾಯಣ್, ಪ್ರದೀಪ್ ಕುಮಾರ್, ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷ ಶಿವಶಂಕರ ರೆಡ್ಡಿ, ಮುಖಂಡರಾದ ಶಿವಶಂಕರ್ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

3 minutes ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

5 hours ago

ಅಕ್ರಮ ಸಂಬಂಧ.. ಪ್ರಿಯತಮೆಯನ್ನ ಬ*ರ್ಬರವಾಗಿ ಕೊಂ*ದು ನೇ*ಣಿಗೆ ಶರಣಾದ ಪ್ರಿಯಕರ.!

ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…

5 hours ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ವೈದ್ಯ, ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

1 day ago

ಭಗತ್ ಸಿಂಗ್ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ: ಪತ್ರಕರ್ತ, ಪೊಲೀಸ್, ಪೌರಕಾರ್ಮಿಕರು ಸೇರಿದಂತೆ ಇತರೆ ಸಾಧಕರಿಗೆ ಸನ್ಮಾನ

"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…

1 day ago

ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ₹400 ಕೋಟಿ ದರೋಡೆ ಪ್ರಕರಣ: ದಟ್ಟಾರಣ್ಯದ ಮೌನದಲ್ಲಿ ಅಡಗಿದ್ದ ಭೀಕರ ರಹಸ್ಯ..ಬೆಚ್ಚಿಬೀಳಿಸುವ ಪ್ರಮುಖ ಅಂಶಗಳು…ಇಲ್ಲಿವೆ ಓದಿ…

ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…

1 day ago