ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಕರವೇ ಪ್ರತಿಭಟನೆ

ಬೆಂಗಳೂರಿನಲ್ಲಿ ನಡೆದ ಆರ್ ಸಿಬಿ ಸಂಭ್ರಮಾಚರಣೆ ವೇಳೆ 11 ಮಂದಿ ಕಾಲ್ತುಳಿತಕ್ಕೆ ಒಳಗಾಗಿ ಸಾವನ್ನಪ್ಪಿರುವ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಘಟನೆಯಲ್ಲಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ಕನ್ನಡಿಗರ ರಕ್ಷಣಾ ವೇದಿಕೆ ವತಿಯಿಂದ ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ಕನ್ನಡಿಗರ ರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್ ಮಾತನಾಡಿ, ಬೆಂಗಳೂರಿನಲ್ಲಿ ಬುಧವಾರ ನಡೆದ ಐಪಿಎಲ್ ಕಪ್ ವಿಜೇತ ತಂಡ ಆರ್ ಸಿಬಿಯ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ, ರಾಜ್ಯ ಸರ್ಕಾರ ಯಾವುದೇ ಪೂರ್ವಸಿದ್ಧತೆ ಮಾಡಿಕೊಳ್ಳದೇ ತರಾತುರಿಯಲ್ಲಿ ಕಾರ್ಯಕ್ರಮನ್ನು ಆಯೋಜಿಸಿತ್ತು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ರಾಜ್ಯಪಾಲರು ಹಾಗೂ ಸಚಿವರು, ಅಧಿಕಾರಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮ ಪೂರ್ವಸಿದ್ಧತೆ ಮಾಡಿಕೊಂಡು ಕಾರ್ಯಕ್ರಮ ಆಯೋಜಿಸಿದ್ದರೆ ವ್ಯವಸ್ಥಿತವಾಗಿ ಮಾಡಬಹುದಾಗಿತ್ತು. ಆದರೆ, ಸರ್ಕಾರ ನಿರ್ಲಕ್ಷಿಸಿದ ಪರಿಣಾಮ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ 11 ಮಂದಿ ಬಲಿಯಾಗಿ, ಅವರ ಕುಟುಂಬಗಳು  ಇಂದು ಶೋಕಸಾಗರದಲ್ಲಿ ಮುಳುಗಿವೆ. ಅವರ ಜೀವನ ಏನು ಎಂಬುದನ್ನ ರಾಜ್ಯ ಸರ್ಕಾರ ಯೋಚನೆ ಮಾಡಬೇಕಿದೆ ಎಂದು ಹೇಳಿದರು.

ಪ್ರಚಾರ ಗಿಟ್ಟಿಸಲು ಅವರ ಮಕ್ಕಳು ಹಾಗೂ ಬೇಕಾದವರಿಗೆ ವೇದಿಕೆ ಕಲ್ಪಿಸಲು ಕಾರ್ಯಕ್ರಮ ಆಯೋಜಿಸಿದ್ದು, ಇದಕ್ಕೆ ಅಮಾಯಕರು ಬಲಿಯಾಗಿದ್ದಾರೆ. ಈ ಪ್ರಕರಣದ ಆರೋಪವನ್ನು ಪೊಲೀಸ್ ಕಮಿಷನರ್ ದಯನಂದ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳ ಮೇಲೆ ಹಾಕಿ ಅವರನ್ನು ಅಮಾನತು ಮಾಡಿರುವುದು ಖಂಡನೀಯ. ಪೊಲೀಸರ ಎಚ್ಚರಿಕೆ ಲೆಕ್ಕಿಸದೇ ಕಾರ್ಯಕ್ರಮವನ್ನು ಆಯೋಜಿಸಿ ಈಗ ಪೊಲೀಸ್ ಅಧಿಕಾರಿಗಳ ಅಮಾನತು  ಮಾಡಿರುವ ಸರ್ಕಾರದ ಕ್ರಮ ಖಂಡನೀಯವಾಗಿದ್ದು, ಕೂಡಲೇ ಈ ದಕ್ಷ ಅಧಿಕಾರಿಗಳನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದರು.

ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಸರ್ಕಾರ ಘೋಷಿಸಿರುವ ಪರಿಹಾರ ಅವರ ಕುಟುಂಬಗಳಿಗೆ ನೇರವಾಗಿ ತಲುಪಬೇಕು ಎಂದು ಕರವೇ ಒತ್ತಾಯಿಸಲಾಗುತ್ತಿದ್ದು, ಸರ್ಕಾರ  ಪೊಲೀಸ್ ಅಧಿಕಾರಿಗಳ ಅಮಾನತು ವಾಪಸ್ ಪಡೆಯದಿದ್ದರೆ ಹಾಗೂ ಘಟನೆಯಲ್ಲಿ ಅನ್ಯಾಯವಾದವರಿಗೆ ನ್ಯಾಯ ದೊರಕಿಸಿಕೊಡದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಕರವೇ ಸಂಘಟನಾ ಕಾರ್ಯದರ್ಶಿ ಅರವಿಂದಪ್ಪ, ದೊಡ್ಡೇಗೌಡ, ರಾಜ್ಯ ಸಂಚಾಲಕ ಪಿ.ವಾಸು, ನರೇಂದ್ರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ರಂಜಿತ್, ತಾಲೂಕು ಘಟಕದ ಅಧ್ಯಕ್ಷ ವಿನಯ್, ಶಿವಣ್ಣ, ಉಪಾಧ್ಯಕ್ಷ ಅಂಬರೀಶ್, ಅಶ್ವತ್ಥ ನಾರಾಯಣ್, ಪ್ರದೀಪ್ ಕುಮಾರ್, ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷ ಶಿವಶಂಕರ ರೆಡ್ಡಿ, ಮುಖಂಡರಾದ ಶಿವಶಂಕರ್ ಮೊದಲಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

6 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

7 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

8 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

9 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

16 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago