ಬೆಂಗಳೂರಿನಲ್ಲಿ ನಡೆದ ಆರ್ ಸಿಬಿ ಸಂಭ್ರಮಾಚರಣೆ ವೇಳೆ 11 ಮಂದಿ ಕಾಲ್ತುಳಿತಕ್ಕೆ ಒಳಗಾಗಿ ಸಾವನ್ನಪ್ಪಿರುವ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಘಟನೆಯಲ್ಲಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ಕನ್ನಡಿಗರ ರಕ್ಷಣಾ ವೇದಿಕೆ ವತಿಯಿಂದ ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ಕನ್ನಡಿಗರ ರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್ ಮಾತನಾಡಿ, ಬೆಂಗಳೂರಿನಲ್ಲಿ ಬುಧವಾರ ನಡೆದ ಐಪಿಎಲ್ ಕಪ್ ವಿಜೇತ ತಂಡ ಆರ್ ಸಿಬಿಯ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ, ರಾಜ್ಯ ಸರ್ಕಾರ ಯಾವುದೇ ಪೂರ್ವಸಿದ್ಧತೆ ಮಾಡಿಕೊಳ್ಳದೇ ತರಾತುರಿಯಲ್ಲಿ ಕಾರ್ಯಕ್ರಮನ್ನು ಆಯೋಜಿಸಿತ್ತು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ರಾಜ್ಯಪಾಲರು ಹಾಗೂ ಸಚಿವರು, ಅಧಿಕಾರಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮ ಪೂರ್ವಸಿದ್ಧತೆ ಮಾಡಿಕೊಂಡು ಕಾರ್ಯಕ್ರಮ ಆಯೋಜಿಸಿದ್ದರೆ ವ್ಯವಸ್ಥಿತವಾಗಿ ಮಾಡಬಹುದಾಗಿತ್ತು. ಆದರೆ, ಸರ್ಕಾರ ನಿರ್ಲಕ್ಷಿಸಿದ ಪರಿಣಾಮ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ 11 ಮಂದಿ ಬಲಿಯಾಗಿ, ಅವರ ಕುಟುಂಬಗಳು ಇಂದು ಶೋಕಸಾಗರದಲ್ಲಿ ಮುಳುಗಿವೆ. ಅವರ ಜೀವನ ಏನು ಎಂಬುದನ್ನ ರಾಜ್ಯ ಸರ್ಕಾರ ಯೋಚನೆ ಮಾಡಬೇಕಿದೆ ಎಂದು ಹೇಳಿದರು.
ಪ್ರಚಾರ ಗಿಟ್ಟಿಸಲು ಅವರ ಮಕ್ಕಳು ಹಾಗೂ ಬೇಕಾದವರಿಗೆ ವೇದಿಕೆ ಕಲ್ಪಿಸಲು ಕಾರ್ಯಕ್ರಮ ಆಯೋಜಿಸಿದ್ದು, ಇದಕ್ಕೆ ಅಮಾಯಕರು ಬಲಿಯಾಗಿದ್ದಾರೆ. ಈ ಪ್ರಕರಣದ ಆರೋಪವನ್ನು ಪೊಲೀಸ್ ಕಮಿಷನರ್ ದಯನಂದ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳ ಮೇಲೆ ಹಾಕಿ ಅವರನ್ನು ಅಮಾನತು ಮಾಡಿರುವುದು ಖಂಡನೀಯ. ಪೊಲೀಸರ ಎಚ್ಚರಿಕೆ ಲೆಕ್ಕಿಸದೇ ಕಾರ್ಯಕ್ರಮವನ್ನು ಆಯೋಜಿಸಿ ಈಗ ಪೊಲೀಸ್ ಅಧಿಕಾರಿಗಳ ಅಮಾನತು ಮಾಡಿರುವ ಸರ್ಕಾರದ ಕ್ರಮ ಖಂಡನೀಯವಾಗಿದ್ದು, ಕೂಡಲೇ ಈ ದಕ್ಷ ಅಧಿಕಾರಿಗಳನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದರು.
ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಸರ್ಕಾರ ಘೋಷಿಸಿರುವ ಪರಿಹಾರ ಅವರ ಕುಟುಂಬಗಳಿಗೆ ನೇರವಾಗಿ ತಲುಪಬೇಕು ಎಂದು ಕರವೇ ಒತ್ತಾಯಿಸಲಾಗುತ್ತಿದ್ದು, ಸರ್ಕಾರ ಪೊಲೀಸ್ ಅಧಿಕಾರಿಗಳ ಅಮಾನತು ವಾಪಸ್ ಪಡೆಯದಿದ್ದರೆ ಹಾಗೂ ಘಟನೆಯಲ್ಲಿ ಅನ್ಯಾಯವಾದವರಿಗೆ ನ್ಯಾಯ ದೊರಕಿಸಿಕೊಡದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಕರವೇ ಸಂಘಟನಾ ಕಾರ್ಯದರ್ಶಿ ಅರವಿಂದಪ್ಪ, ದೊಡ್ಡೇಗೌಡ, ರಾಜ್ಯ ಸಂಚಾಲಕ ಪಿ.ವಾಸು, ನರೇಂದ್ರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ರಂಜಿತ್, ತಾಲೂಕು ಘಟಕದ ಅಧ್ಯಕ್ಷ ವಿನಯ್, ಶಿವಣ್ಣ, ಉಪಾಧ್ಯಕ್ಷ ಅಂಬರೀಶ್, ಅಶ್ವತ್ಥ ನಾರಾಯಣ್, ಪ್ರದೀಪ್ ಕುಮಾರ್, ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷ ಶಿವಶಂಕರ ರೆಡ್ಡಿ, ಮುಖಂಡರಾದ ಶಿವಶಂಕರ್ ಮೊದಲಾದವರು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…