ಬೆಂಗಳೂರಿನಲ್ಲಿ ನಡೆದ ಆರ್ ಸಿಬಿ ಸಂಭ್ರಮಾಚರಣೆ ವೇಳೆ 11 ಮಂದಿ ಕಾಲ್ತುಳಿತಕ್ಕೆ ಒಳಗಾಗಿ ಸಾವನ್ನಪ್ಪಿರುವ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಘಟನೆಯಲ್ಲಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ಕನ್ನಡಿಗರ ರಕ್ಷಣಾ ವೇದಿಕೆ ವತಿಯಿಂದ ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕ ಕನ್ನಡಿಗರ ರಕ್ಷಣಾ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್ ಮಾತನಾಡಿ, ಬೆಂಗಳೂರಿನಲ್ಲಿ ಬುಧವಾರ ನಡೆದ ಐಪಿಎಲ್ ಕಪ್ ವಿಜೇತ ತಂಡ ಆರ್ ಸಿಬಿಯ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ, ರಾಜ್ಯ ಸರ್ಕಾರ ಯಾವುದೇ ಪೂರ್ವಸಿದ್ಧತೆ ಮಾಡಿಕೊಳ್ಳದೇ ತರಾತುರಿಯಲ್ಲಿ ಕಾರ್ಯಕ್ರಮನ್ನು ಆಯೋಜಿಸಿತ್ತು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ರಾಜ್ಯಪಾಲರು ಹಾಗೂ ಸಚಿವರು, ಅಧಿಕಾರಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮ ಪೂರ್ವಸಿದ್ಧತೆ ಮಾಡಿಕೊಂಡು ಕಾರ್ಯಕ್ರಮ ಆಯೋಜಿಸಿದ್ದರೆ ವ್ಯವಸ್ಥಿತವಾಗಿ ಮಾಡಬಹುದಾಗಿತ್ತು. ಆದರೆ, ಸರ್ಕಾರ ನಿರ್ಲಕ್ಷಿಸಿದ ಪರಿಣಾಮ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ 11 ಮಂದಿ ಬಲಿಯಾಗಿ, ಅವರ ಕುಟುಂಬಗಳು ಇಂದು ಶೋಕಸಾಗರದಲ್ಲಿ ಮುಳುಗಿವೆ. ಅವರ ಜೀವನ ಏನು ಎಂಬುದನ್ನ ರಾಜ್ಯ ಸರ್ಕಾರ ಯೋಚನೆ ಮಾಡಬೇಕಿದೆ ಎಂದು ಹೇಳಿದರು.
ಪ್ರಚಾರ ಗಿಟ್ಟಿಸಲು ಅವರ ಮಕ್ಕಳು ಹಾಗೂ ಬೇಕಾದವರಿಗೆ ವೇದಿಕೆ ಕಲ್ಪಿಸಲು ಕಾರ್ಯಕ್ರಮ ಆಯೋಜಿಸಿದ್ದು, ಇದಕ್ಕೆ ಅಮಾಯಕರು ಬಲಿಯಾಗಿದ್ದಾರೆ. ಈ ಪ್ರಕರಣದ ಆರೋಪವನ್ನು ಪೊಲೀಸ್ ಕಮಿಷನರ್ ದಯನಂದ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳ ಮೇಲೆ ಹಾಕಿ ಅವರನ್ನು ಅಮಾನತು ಮಾಡಿರುವುದು ಖಂಡನೀಯ. ಪೊಲೀಸರ ಎಚ್ಚರಿಕೆ ಲೆಕ್ಕಿಸದೇ ಕಾರ್ಯಕ್ರಮವನ್ನು ಆಯೋಜಿಸಿ ಈಗ ಪೊಲೀಸ್ ಅಧಿಕಾರಿಗಳ ಅಮಾನತು ಮಾಡಿರುವ ಸರ್ಕಾರದ ಕ್ರಮ ಖಂಡನೀಯವಾಗಿದ್ದು, ಕೂಡಲೇ ಈ ದಕ್ಷ ಅಧಿಕಾರಿಗಳನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದರು.
ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಸರ್ಕಾರ ಘೋಷಿಸಿರುವ ಪರಿಹಾರ ಅವರ ಕುಟುಂಬಗಳಿಗೆ ನೇರವಾಗಿ ತಲುಪಬೇಕು ಎಂದು ಕರವೇ ಒತ್ತಾಯಿಸಲಾಗುತ್ತಿದ್ದು, ಸರ್ಕಾರ ಪೊಲೀಸ್ ಅಧಿಕಾರಿಗಳ ಅಮಾನತು ವಾಪಸ್ ಪಡೆಯದಿದ್ದರೆ ಹಾಗೂ ಘಟನೆಯಲ್ಲಿ ಅನ್ಯಾಯವಾದವರಿಗೆ ನ್ಯಾಯ ದೊರಕಿಸಿಕೊಡದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಕರವೇ ಸಂಘಟನಾ ಕಾರ್ಯದರ್ಶಿ ಅರವಿಂದಪ್ಪ, ದೊಡ್ಡೇಗೌಡ, ರಾಜ್ಯ ಸಂಚಾಲಕ ಪಿ.ವಾಸು, ನರೇಂದ್ರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ರಂಜಿತ್, ತಾಲೂಕು ಘಟಕದ ಅಧ್ಯಕ್ಷ ವಿನಯ್, ಶಿವಣ್ಣ, ಉಪಾಧ್ಯಕ್ಷ ಅಂಬರೀಶ್, ಅಶ್ವತ್ಥ ನಾರಾಯಣ್, ಪ್ರದೀಪ್ ಕುಮಾರ್, ತಾಲೂಕು ಕಾರ್ಮಿಕ ಘಟಕದ ಅಧ್ಯಕ್ಷ ಶಿವಶಂಕರ ರೆಡ್ಡಿ, ಮುಖಂಡರಾದ ಶಿವಶಂಕರ್ ಮೊದಲಾದವರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…