ಪೊಲೀಸ್ ಅಧಿಕಾರಿಯಿಂದಲೇ ಮುಖ್ಯಪೇದೆ ಮೇಲೆ‌ ಮಾರಣಾಂತಿಕ ಹಲ್ಲೆ

ಆನೇಕಲ್ : ಕಾನೂನು ರಕ್ಷಣೆ ಮಾಡುವ ಪೊಲೀಸರೇ ತಮ್ಮ ಕರ್ತವ್ಯ ಮರೆತು ಪರಸ್ಪರ ಹೊಡೆದಾಡಿಕೊಂಡರೆ ಯಾರನ್ನೂ ಕೇಳುವುದು.. ಇದೀಗ ಅಂತಹದ್ದೇ ಒಂದು ಘಟನೆ ರಾಜ್ಯ ಗಡಿಭಾಗ ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ.

ಗೋವಿಂದರಾಜನಗರ ಪೊಲೀಸರಿಂದ ಅತ್ತಿಬೆಲೆ ಪೊಲೀಸ್‌ ಠಾಣೆಯ ಮುಖ್ಯಪೇದೆ ಆದ ಅಪ್ರೋಜ್ ಖಾನ್ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಇದೀಗ ಹಲ್ಲೆ ನಡೆಸಿದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರಿನ ಗೋವಿಂದರಾಜನಗರ ಠಾಣೆಯ ಪೊಲೀಸರು ಅತ್ತಿಬೆಲೆ ಟೋಲ್ ಬಳಿ ಇನೋವಾ ಮತ್ತು ಸ್ವಿಫ್ಟ್ ಕಾರಿನಲ್ಲಿ ಎಂಟಕ್ಕೂ ಅಧಿಕ ಪೊಲೀಸರು ನಿಲ್ಲಿಸಿಕೊಂಡಿದ್ದರು. ಈ ವೇಳೆ ಮುಖ್ಯಪೇದೆ ಅಪ್ರೋಜ್ ಖಾನ್ ಅವರ ಮಗ ಅಲಿಅಜಗರ್ ಖಾನ್ ಬೇಕರಿಗೆ ಬೈಕ್‌ನಲ್ಲಿ ಬಂದಿದ್ದ..

ಅಲಿಅಜಗ‌ರ್ ಖಾನ್‌ನ ಬರುತ್ತಿದ್ದಂತೆ ಬೈಕ್‌ ಅಡ್ಡಗಟ್ಟಿದ ಗೋವಿಂದರಾಜನಗರ ಪೊಲೀಸರು ದಾಖಲಾತಿ  ನೀಡುವಂತೆ ಕೇಳಿದ್ದಾರೆ. ಅಲ್ಲದೇ ಅಲಿಅಜಗ‌ರ್ ಖಾನ್‌ನ ಕತ್ತಿನ ಪಟ್ಟಿಯನ್ನು ಹಿಡಿದು ಹಲ್ಲೆ ಮಾಡಿದ್ದಾರೆ.

ಈ ವೇಳೆ ಪೊಲೀಸರು ಹಲ್ಲೆ ನಡೆಸುತ್ತಿದ್ದಂತೆ ಅಲಿ ನನ್ನ ತಂದೆ ಪೊಲೀಸ್ ಎಂದು ಹೇಳಿದ್ದಾನೆ. ಇದರಿಂದ ಇನ್ನಷ್ಟು ಸಿಟ್ಟಾದ ಪೊಲೀಸರು ಇನ್ನಷ್ಟು ಹಲ್ಲೆ ನಡೆಸಿದ್ದಾರೆ. ಈ ವೇಳೆ ಸ್ಥಳಕ್ಕೆ ಅಪ್ರೋಜ್ ಖಾನ್ ಬಂದು ನನ್ನ ಮಗನನ್ನು ಏಕೆ ಹೊಡೆಯುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ನೀನು ಯಾವ ಪೊಲೀಸ್‌ ಎಂದು ಮೊಬೈಲ್‌ ಕಿತ್ತುಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ ಕಾರಿನಲ್ಲಿ ಕಿಡ್ನಾಪ್ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಈ ಬಗ್ಗೆ ಅತ್ತಿಬೆಲೆ ಪೊಲೀಸ್‌ ಠಾಣೆಯಲ್ಲಿ ಅಪ್ರೋಜ್ ಖಾನ್ ದೂರು ನೀಡಲು ಹೋಗಿದ್ದಾರೆ. ಆದರೆ, ಡಿವೈಎಸ್ಪಿ ಮೋಹನ್ ಕುಮಾ‌ರ್, ಇನ್ಸ್ ಪೆಕ್ಟರ್ ರಾಘವ್ ರಿಂದ ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂಬ ಆರೋಪ ಸಹ ಕೇಳಿಬಂದಿದೆ.

Ramesh Babu

Journalist

Recent Posts

ಪ್ರತಿಭಟನೆ – ಮುಷ್ಕರ – ಮುತ್ತಿಗೆ – ಚಳವಳಿ – ಬಂದ್ – ಸತ್ಯಾಗ್ರಹ – ಹರತಾಳ – ಅಮರಣಾಂತ ಉಪವಾಸ – ಜೈಲ್ ಭರೋ ..

ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…

4 hours ago

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

14 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

15 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

20 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

22 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

1 day ago