ಪೊಲೀಸ್ ಅಧಿಕಾರಿಯಿಂದಲೇ ಮುಖ್ಯಪೇದೆ ಮೇಲೆ‌ ಮಾರಣಾಂತಿಕ ಹಲ್ಲೆ

ಆನೇಕಲ್ : ಕಾನೂನು ರಕ್ಷಣೆ ಮಾಡುವ ಪೊಲೀಸರೇ ತಮ್ಮ ಕರ್ತವ್ಯ ಮರೆತು ಪರಸ್ಪರ ಹೊಡೆದಾಡಿಕೊಂಡರೆ ಯಾರನ್ನೂ ಕೇಳುವುದು.. ಇದೀಗ ಅಂತಹದ್ದೇ ಒಂದು ಘಟನೆ ರಾಜ್ಯ ಗಡಿಭಾಗ ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ.

ಗೋವಿಂದರಾಜನಗರ ಪೊಲೀಸರಿಂದ ಅತ್ತಿಬೆಲೆ ಪೊಲೀಸ್‌ ಠಾಣೆಯ ಮುಖ್ಯಪೇದೆ ಆದ ಅಪ್ರೋಜ್ ಖಾನ್ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಇದೀಗ ಹಲ್ಲೆ ನಡೆಸಿದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರಿನ ಗೋವಿಂದರಾಜನಗರ ಠಾಣೆಯ ಪೊಲೀಸರು ಅತ್ತಿಬೆಲೆ ಟೋಲ್ ಬಳಿ ಇನೋವಾ ಮತ್ತು ಸ್ವಿಫ್ಟ್ ಕಾರಿನಲ್ಲಿ ಎಂಟಕ್ಕೂ ಅಧಿಕ ಪೊಲೀಸರು ನಿಲ್ಲಿಸಿಕೊಂಡಿದ್ದರು. ಈ ವೇಳೆ ಮುಖ್ಯಪೇದೆ ಅಪ್ರೋಜ್ ಖಾನ್ ಅವರ ಮಗ ಅಲಿಅಜಗರ್ ಖಾನ್ ಬೇಕರಿಗೆ ಬೈಕ್‌ನಲ್ಲಿ ಬಂದಿದ್ದ..

ಅಲಿಅಜಗ‌ರ್ ಖಾನ್‌ನ ಬರುತ್ತಿದ್ದಂತೆ ಬೈಕ್‌ ಅಡ್ಡಗಟ್ಟಿದ ಗೋವಿಂದರಾಜನಗರ ಪೊಲೀಸರು ದಾಖಲಾತಿ  ನೀಡುವಂತೆ ಕೇಳಿದ್ದಾರೆ. ಅಲ್ಲದೇ ಅಲಿಅಜಗ‌ರ್ ಖಾನ್‌ನ ಕತ್ತಿನ ಪಟ್ಟಿಯನ್ನು ಹಿಡಿದು ಹಲ್ಲೆ ಮಾಡಿದ್ದಾರೆ.

ಈ ವೇಳೆ ಪೊಲೀಸರು ಹಲ್ಲೆ ನಡೆಸುತ್ತಿದ್ದಂತೆ ಅಲಿ ನನ್ನ ತಂದೆ ಪೊಲೀಸ್ ಎಂದು ಹೇಳಿದ್ದಾನೆ. ಇದರಿಂದ ಇನ್ನಷ್ಟು ಸಿಟ್ಟಾದ ಪೊಲೀಸರು ಇನ್ನಷ್ಟು ಹಲ್ಲೆ ನಡೆಸಿದ್ದಾರೆ. ಈ ವೇಳೆ ಸ್ಥಳಕ್ಕೆ ಅಪ್ರೋಜ್ ಖಾನ್ ಬಂದು ನನ್ನ ಮಗನನ್ನು ಏಕೆ ಹೊಡೆಯುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ನೀನು ಯಾವ ಪೊಲೀಸ್‌ ಎಂದು ಮೊಬೈಲ್‌ ಕಿತ್ತುಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ ಕಾರಿನಲ್ಲಿ ಕಿಡ್ನಾಪ್ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಈ ಬಗ್ಗೆ ಅತ್ತಿಬೆಲೆ ಪೊಲೀಸ್‌ ಠಾಣೆಯಲ್ಲಿ ಅಪ್ರೋಜ್ ಖಾನ್ ದೂರು ನೀಡಲು ಹೋಗಿದ್ದಾರೆ. ಆದರೆ, ಡಿವೈಎಸ್ಪಿ ಮೋಹನ್ ಕುಮಾ‌ರ್, ಇನ್ಸ್ ಪೆಕ್ಟರ್ ರಾಘವ್ ರಿಂದ ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂಬ ಆರೋಪ ಸಹ ಕೇಳಿಬಂದಿದೆ.

Ramesh Babu

Journalist

Recent Posts

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

2 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

12 hours ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

12 hours ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

23 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

1 day ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

1 day ago