ಆನೇಕಲ್ : ಕಾನೂನು ರಕ್ಷಣೆ ಮಾಡುವ ಪೊಲೀಸರೇ ತಮ್ಮ ಕರ್ತವ್ಯ ಮರೆತು ಪರಸ್ಪರ ಹೊಡೆದಾಡಿಕೊಂಡರೆ ಯಾರನ್ನೂ ಕೇಳುವುದು.. ಇದೀಗ ಅಂತಹದ್ದೇ ಒಂದು ಘಟನೆ ರಾಜ್ಯ ಗಡಿಭಾಗ ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ.
ಗೋವಿಂದರಾಜನಗರ ಪೊಲೀಸರಿಂದ ಅತ್ತಿಬೆಲೆ ಪೊಲೀಸ್ ಠಾಣೆಯ ಮುಖ್ಯಪೇದೆ ಆದ ಅಪ್ರೋಜ್ ಖಾನ್ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಇದೀಗ ಹಲ್ಲೆ ನಡೆಸಿದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೆಂಗಳೂರಿನ ಗೋವಿಂದರಾಜನಗರ ಠಾಣೆಯ ಪೊಲೀಸರು ಅತ್ತಿಬೆಲೆ ಟೋಲ್ ಬಳಿ ಇನೋವಾ ಮತ್ತು ಸ್ವಿಫ್ಟ್ ಕಾರಿನಲ್ಲಿ ಎಂಟಕ್ಕೂ ಅಧಿಕ ಪೊಲೀಸರು ನಿಲ್ಲಿಸಿಕೊಂಡಿದ್ದರು. ಈ ವೇಳೆ ಮುಖ್ಯಪೇದೆ ಅಪ್ರೋಜ್ ಖಾನ್ ಅವರ ಮಗ ಅಲಿಅಜಗರ್ ಖಾನ್ ಬೇಕರಿಗೆ ಬೈಕ್ನಲ್ಲಿ ಬಂದಿದ್ದ..
ಅಲಿಅಜಗರ್ ಖಾನ್ನ ಬರುತ್ತಿದ್ದಂತೆ ಬೈಕ್ ಅಡ್ಡಗಟ್ಟಿದ ಗೋವಿಂದರಾಜನಗರ ಪೊಲೀಸರು ದಾಖಲಾತಿ ನೀಡುವಂತೆ ಕೇಳಿದ್ದಾರೆ. ಅಲ್ಲದೇ ಅಲಿಅಜಗರ್ ಖಾನ್ನ ಕತ್ತಿನ ಪಟ್ಟಿಯನ್ನು ಹಿಡಿದು ಹಲ್ಲೆ ಮಾಡಿದ್ದಾರೆ.
ಈ ವೇಳೆ ಪೊಲೀಸರು ಹಲ್ಲೆ ನಡೆಸುತ್ತಿದ್ದಂತೆ ಅಲಿ ನನ್ನ ತಂದೆ ಪೊಲೀಸ್ ಎಂದು ಹೇಳಿದ್ದಾನೆ. ಇದರಿಂದ ಇನ್ನಷ್ಟು ಸಿಟ್ಟಾದ ಪೊಲೀಸರು ಇನ್ನಷ್ಟು ಹಲ್ಲೆ ನಡೆಸಿದ್ದಾರೆ. ಈ ವೇಳೆ ಸ್ಥಳಕ್ಕೆ ಅಪ್ರೋಜ್ ಖಾನ್ ಬಂದು ನನ್ನ ಮಗನನ್ನು ಏಕೆ ಹೊಡೆಯುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.
ಇದಕ್ಕೆ ನೀನು ಯಾವ ಪೊಲೀಸ್ ಎಂದು ಮೊಬೈಲ್ ಕಿತ್ತುಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ ಕಾರಿನಲ್ಲಿ ಕಿಡ್ನಾಪ್ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಈ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಅಪ್ರೋಜ್ ಖಾನ್ ದೂರು ನೀಡಲು ಹೋಗಿದ್ದಾರೆ. ಆದರೆ, ಡಿವೈಎಸ್ಪಿ ಮೋಹನ್ ಕುಮಾರ್, ಇನ್ಸ್ ಪೆಕ್ಟರ್ ರಾಘವ್ ರಿಂದ ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂಬ ಆರೋಪ ಸಹ ಕೇಳಿಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…