ಪೊಲೀಸ್ ಅಧಿಕಾರಿಯಿಂದಲೇ ಮುಖ್ಯಪೇದೆ ಮೇಲೆ‌ ಮಾರಣಾಂತಿಕ ಹಲ್ಲೆ

ಆನೇಕಲ್ : ಕಾನೂನು ರಕ್ಷಣೆ ಮಾಡುವ ಪೊಲೀಸರೇ ತಮ್ಮ ಕರ್ತವ್ಯ ಮರೆತು ಪರಸ್ಪರ ಹೊಡೆದಾಡಿಕೊಂಡರೆ ಯಾರನ್ನೂ ಕೇಳುವುದು.. ಇದೀಗ ಅಂತಹದ್ದೇ ಒಂದು ಘಟನೆ ರಾಜ್ಯ ಗಡಿಭಾಗ ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ.

ಗೋವಿಂದರಾಜನಗರ ಪೊಲೀಸರಿಂದ ಅತ್ತಿಬೆಲೆ ಪೊಲೀಸ್‌ ಠಾಣೆಯ ಮುಖ್ಯಪೇದೆ ಆದ ಅಪ್ರೋಜ್ ಖಾನ್ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಇದೀಗ ಹಲ್ಲೆ ನಡೆಸಿದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರಿನ ಗೋವಿಂದರಾಜನಗರ ಠಾಣೆಯ ಪೊಲೀಸರು ಅತ್ತಿಬೆಲೆ ಟೋಲ್ ಬಳಿ ಇನೋವಾ ಮತ್ತು ಸ್ವಿಫ್ಟ್ ಕಾರಿನಲ್ಲಿ ಎಂಟಕ್ಕೂ ಅಧಿಕ ಪೊಲೀಸರು ನಿಲ್ಲಿಸಿಕೊಂಡಿದ್ದರು. ಈ ವೇಳೆ ಮುಖ್ಯಪೇದೆ ಅಪ್ರೋಜ್ ಖಾನ್ ಅವರ ಮಗ ಅಲಿಅಜಗರ್ ಖಾನ್ ಬೇಕರಿಗೆ ಬೈಕ್‌ನಲ್ಲಿ ಬಂದಿದ್ದ..

ಅಲಿಅಜಗ‌ರ್ ಖಾನ್‌ನ ಬರುತ್ತಿದ್ದಂತೆ ಬೈಕ್‌ ಅಡ್ಡಗಟ್ಟಿದ ಗೋವಿಂದರಾಜನಗರ ಪೊಲೀಸರು ದಾಖಲಾತಿ  ನೀಡುವಂತೆ ಕೇಳಿದ್ದಾರೆ. ಅಲ್ಲದೇ ಅಲಿಅಜಗ‌ರ್ ಖಾನ್‌ನ ಕತ್ತಿನ ಪಟ್ಟಿಯನ್ನು ಹಿಡಿದು ಹಲ್ಲೆ ಮಾಡಿದ್ದಾರೆ.

ಈ ವೇಳೆ ಪೊಲೀಸರು ಹಲ್ಲೆ ನಡೆಸುತ್ತಿದ್ದಂತೆ ಅಲಿ ನನ್ನ ತಂದೆ ಪೊಲೀಸ್ ಎಂದು ಹೇಳಿದ್ದಾನೆ. ಇದರಿಂದ ಇನ್ನಷ್ಟು ಸಿಟ್ಟಾದ ಪೊಲೀಸರು ಇನ್ನಷ್ಟು ಹಲ್ಲೆ ನಡೆಸಿದ್ದಾರೆ. ಈ ವೇಳೆ ಸ್ಥಳಕ್ಕೆ ಅಪ್ರೋಜ್ ಖಾನ್ ಬಂದು ನನ್ನ ಮಗನನ್ನು ಏಕೆ ಹೊಡೆಯುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ನೀನು ಯಾವ ಪೊಲೀಸ್‌ ಎಂದು ಮೊಬೈಲ್‌ ಕಿತ್ತುಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ ಕಾರಿನಲ್ಲಿ ಕಿಡ್ನಾಪ್ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಈ ಬಗ್ಗೆ ಅತ್ತಿಬೆಲೆ ಪೊಲೀಸ್‌ ಠಾಣೆಯಲ್ಲಿ ಅಪ್ರೋಜ್ ಖಾನ್ ದೂರು ನೀಡಲು ಹೋಗಿದ್ದಾರೆ. ಆದರೆ, ಡಿವೈಎಸ್ಪಿ ಮೋಹನ್ ಕುಮಾ‌ರ್, ಇನ್ಸ್ ಪೆಕ್ಟರ್ ರಾಘವ್ ರಿಂದ ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂಬ ಆರೋಪ ಸಹ ಕೇಳಿಬಂದಿದೆ.

Ramesh Babu

Journalist

Recent Posts

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

6 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

7 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

18 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

18 hours ago

ಹೊರಗುತ್ತಿಗೆ ನೇಮಕಾತಿಯಲ್ಲೂ ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಕಡ್ಡಾಯ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…

18 hours ago

ಆತ್ರೇಯ ಆಯುರ್ವೇದ ಕಾಲೇಜಿಗೆ ಬೀಗ; 400 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ: ಪರ್ಯಾಯ ವ್ಯವಸ್ಥೆಗೆ ಆಗ್ರಹಿಸಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

  ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…

19 hours ago