ಪೊಲೀಸ್ ಇಲಾಖೆಯಲ್ಲಿ ಮಹಾನ್ ಸಾಧನೆ ಮಾಡಿದ ಶ್ವಾನಕ್ಕೆ ಅದ್ಧೂರಿ ಬೀಳ್ಕೊಡುಗೆ: 10 ವರ್ಷಗಳಿಗೂ ಹೆಚ್ಚು ಕಾಲ ಇಲಾಖೆಯಲ್ಲಿ ಸೇವೆ: ಒಟ್ಟು 204 ಪ್ರಕರಣಗಳಲ್ಲಿ 35 ಅಪರಾಧ ಪ್ರಕರಣಗಳ ಕುರಿತಾದ ಸುಳಿವು: 9 ಜನ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಇಲಾಖೆಗೆ ಸಹಕಾರ

ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಶ್ವಾನದಳದಲ್ಲಿ ಸುದೀರ್ಘ 10 ವರ್ಷಗಳಿಗೂ ಹೆಚ್ಚು ಕಾಲ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಹಲವಾರು ಅಪರಾಧ ಪ್ರಕರಣಗಳನ್ನು ಯಶಸ್ವಿಯಾಗಿ ಬೇಧಿಸುವಲ್ಲಿ ಶ್ರಮಿಸಿದ್ದು, ಹಿರಿಯ ಅಧಿಕಾರಿಗಳಿಂದ ಪದಕ, ಪ್ರಶಂಸೆ ಹಾಗೂ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದ ಪೊಲೀಸ್ ಶ್ವಾನಕ್ಕೆ ಬೀಳ್ಕೊಡುಗೆ ಕಾರ್ಯಕ್ರಮ ನಗರದ ಡಿ.ಎ.ಆರ್. ಆವರಣದಲ್ಲಿ ಏರ್ಪಡಿಸಲಾಗಿತ್ತು.

ಈ ಶ್ವಾನವು ತನ್ನ ಸೇವಾ ಅವಧಿಯಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಜರುಗಿದ ಕಳ್ಳತನ, ದರೋಡೆ ಹಾಗೂ ಕೊಲೆ ಇತ್ಯಾದಿ ಒಟ್ಟು 204 ಪ್ರಕರಣಗಳಲ್ಲಿ 35 ರಲ್ಲಿ ಅಪರಾಧ ಪ್ರಕರಣಗಳ ಕುರಿತಾದ ಸುಳಿವು ಹಾಗೂ 9 ಜನ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಪೊಲೀಸ್ ಇಲಾಖೆಗೆ ಸಹಕರಿಸಿರುತ್ತದೆ.

ಶ್ವಾನವು ವಾರ್ಷಿಕವಾಗಿ ನಡೆಸಲಾಗುವ ಪೊಲೀಸ್ ಡ್ಯೂಟಿ ಮೀಟ್ ನಲ್ಲಿ ಹಲವಾರು ಪದಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿಯನ್ನು ತಂದುಕೊಟ್ಟಿರುತ್ತದೆ. ಶ್ವಾನದ ಹ್ಯಾಂಡ್ಲರ್ ಮಂಜುನಾಥ ಮತ್ತು ಸಹಾಯಕ ನಿರ್ವಾಹಕ ಸಿ.ಕುಮಾರ್ ರವರಿಗೆ ಜಿಲ್ಲಾಧಿಕಾರಿಗಳಾದ ಮೀನಾ ನಾಗರಾಜ್ ಸಿ.ಎನ್ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ವಿಕ್ರಮ್ ಅಮಟೆ ರವರು ಪ್ರಸಂಶನ ಪತ್ರ ನೀಡಿದರು.

Ramesh Babu

Journalist

Recent Posts

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

6 minutes ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

2 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

3 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

4 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

5 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

11 hours ago