ಪೊಲೀಸ್ ಇಲಾಖೆಯಲ್ಲಿ ಮಹಾನ್ ಸಾಧನೆ ಮಾಡಿದ ಶ್ವಾನಕ್ಕೆ ಅದ್ಧೂರಿ ಬೀಳ್ಕೊಡುಗೆ: 10 ವರ್ಷಗಳಿಗೂ ಹೆಚ್ಚು ಕಾಲ ಇಲಾಖೆಯಲ್ಲಿ ಸೇವೆ: ಒಟ್ಟು 204 ಪ್ರಕರಣಗಳಲ್ಲಿ 35 ಅಪರಾಧ ಪ್ರಕರಣಗಳ ಕುರಿತಾದ ಸುಳಿವು: 9 ಜನ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಇಲಾಖೆಗೆ ಸಹಕಾರ

ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಶ್ವಾನದಳದಲ್ಲಿ ಸುದೀರ್ಘ 10 ವರ್ಷಗಳಿಗೂ ಹೆಚ್ಚು ಕಾಲ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಹಲವಾರು ಅಪರಾಧ ಪ್ರಕರಣಗಳನ್ನು ಯಶಸ್ವಿಯಾಗಿ ಬೇಧಿಸುವಲ್ಲಿ ಶ್ರಮಿಸಿದ್ದು, ಹಿರಿಯ ಅಧಿಕಾರಿಗಳಿಂದ ಪದಕ, ಪ್ರಶಂಸೆ ಹಾಗೂ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದ ಪೊಲೀಸ್ ಶ್ವಾನಕ್ಕೆ ಬೀಳ್ಕೊಡುಗೆ ಕಾರ್ಯಕ್ರಮ ನಗರದ ಡಿ.ಎ.ಆರ್. ಆವರಣದಲ್ಲಿ ಏರ್ಪಡಿಸಲಾಗಿತ್ತು.

ಈ ಶ್ವಾನವು ತನ್ನ ಸೇವಾ ಅವಧಿಯಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಜರುಗಿದ ಕಳ್ಳತನ, ದರೋಡೆ ಹಾಗೂ ಕೊಲೆ ಇತ್ಯಾದಿ ಒಟ್ಟು 204 ಪ್ರಕರಣಗಳಲ್ಲಿ 35 ರಲ್ಲಿ ಅಪರಾಧ ಪ್ರಕರಣಗಳ ಕುರಿತಾದ ಸುಳಿವು ಹಾಗೂ 9 ಜನ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಪೊಲೀಸ್ ಇಲಾಖೆಗೆ ಸಹಕರಿಸಿರುತ್ತದೆ.

ಶ್ವಾನವು ವಾರ್ಷಿಕವಾಗಿ ನಡೆಸಲಾಗುವ ಪೊಲೀಸ್ ಡ್ಯೂಟಿ ಮೀಟ್ ನಲ್ಲಿ ಹಲವಾರು ಪದಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿಯನ್ನು ತಂದುಕೊಟ್ಟಿರುತ್ತದೆ. ಶ್ವಾನದ ಹ್ಯಾಂಡ್ಲರ್ ಮಂಜುನಾಥ ಮತ್ತು ಸಹಾಯಕ ನಿರ್ವಾಹಕ ಸಿ.ಕುಮಾರ್ ರವರಿಗೆ ಜಿಲ್ಲಾಧಿಕಾರಿಗಳಾದ ಮೀನಾ ನಾಗರಾಜ್ ಸಿ.ಎನ್ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ವಿಕ್ರಮ್ ಅಮಟೆ ರವರು ಪ್ರಸಂಶನ ಪತ್ರ ನೀಡಿದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

4 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago