ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ ಅವ್ಯವಸ್ಥೆಗೆ ಅವಕಾಶ ನೀಡದೆ ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಯಿತು.
ದೊಡ್ಡಬಳ್ಳಾಪುರ ತಾಲೂಕಿನ ಏಳು ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪರೀಕ್ಷೆ ನಡೆಸಲಾಯಿತು. ಪರೀಕ್ಷೆಯ ಪಾರದರ್ಶಕತೆ ಹಾಗೂ ಭದ್ರತೆಯನ್ನು ಖಚಿತಪಡಿಸಲು ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳ ಮೂಲಕ ಲೈವ್ ವೆಬ್ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿತ್ತು.
ಅಕ್ರಮ ತಡೆಗಟ್ಟುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಝೆರಾಕ್ಸ್ ಮತ್ತು ಸೈಬರ್ ಕೇಂದ್ರಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಜೊತೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
ಇದೇ ವೇಳೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪರೀಕ್ಷಾ ಕೇಂದ್ರ ಸಂಖ್ಯೆ 103ರಲ್ಲಿ ಅಭ್ಯರ್ಥಿಗಳ ಫೇಸ್ ಡಿಟೆಕ್ಷನ್ ಪ್ರಕ್ರಿಯೆಗೆ ಬಳಸುತ್ತಿದ್ದ ಸರ್ವರ್ ತಾತ್ಕಾಲಿಕವಾಗಿ ಸ್ಥಗಿತಗೊಂಡ ಪರಿಣಾಮ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
ಆರಂಭದಲ್ಲಿ ಅಭ್ಯರ್ಥಿಗಳಲ್ಲಿ ಆತಂಕ ಕಂಡುಬಂದರೂ, ಪರೀಕ್ಷಾ ಸಿಬ್ಬಂದಿ ತಕ್ಷಣವೇ ಮ್ಯಾನ್ಯುಯಲ್ ಪರಿಶೀಲನೆ ನಡೆಸಿ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿದರು. ಇದರಿಂದ ಯಾವುದೇ ಅಭ್ಯರ್ಥಿಗೆ ಪರೀಕ್ಷೆ ಬರೆಯಲು ತೊಂದರೆಯಾಗದೆ, ಎಲ್ಲರೂ ನಿರಾಳವಾಗಿ ಪರೀಕ್ಷೆಯಲ್ಲಿ ಭಾಗವಹಿಸಿದರು.
ಜಿಲ್ಲೆಯ ಏಳು ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 3,462 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಅವರಲ್ಲಿ 3,228 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 234 ಅಭ್ಯರ್ಥಿಗಳು ಗೈರಾಗಿದ್ದಾರೆ.
ಒಟ್ಟಾರೆ ಪರೀಕ್ಷೆ ಶಾಂತಿಯುತ ಹಾಗೂ ವ್ಯವಸ್ಥಿತವಾಗಿ ನಡೆಯಿತು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…