ಪೊಲೀಸರು ಠಾಣೆಯಲ್ಲಿ ಕರ್ತವ್ಯ ಮಾಡುತ್ತಿದ್ದ ಗರ್ಭಿಣಿ ಮಹಿಳಾ ಪೊಲೀಸ್ ಗೆ ಸೀಮಂತ ಕಾರ್ಯವನ್ನು ಮಾಡಿ ಜನ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣೆಯ ಸಿಪಿ.ಪೂರ್ಣಿಮಾ ರವರಿಗೆ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿ ವರ್ಗದ ಸಹೋದ್ಯೋಗಿಗಳು ಸೇರಿ ಸೀಮಂತ ಕಾರ್ಯಕ್ರಮ ನಡೆಸಿದ್ದಾರೆ.
ಈ ಮೂಲಕ ಪೊಲೀಸ್ ಠಾಣೆಗಳು ಜನಸ್ನೇಹಿ ಆಗಿರುವುದರ ಜೊತೆಗೆ ಸಿಬ್ಬಂದಿ ಆತ್ಮೀಯತೆಯಿಂದ ಇದ್ದಾರೆ ಎಂಬುದನ್ನು ಪೊಲೀಸರು ತೋರಿಸಿದ್ದಾರೆ.
ಠಾಣೆಯಲ್ಲಿ ಮಹಿಳಾ ಸಿಬ್ಬಂದಿ ಸಿ.ಪಿ.ಪೂರ್ಣಿಮಾ ಅವರಿಗೆ ಕೈ ಬಳೆ ತೊಡಿಸಿ, ಹೂ ಮುಡಿಸುವ ಮೂಲಕ ಸೀಮಂತ ಶಾಸ್ತ್ರ ಮಾಡಲಾಯಿತು. ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಠಾಣೆಯ ಮಹಿಳಾ ಸಿಬ್ಬಂದಿಯಿಂದ ಸೀಮಂತ ಕಾರ್ಯ ನಡೆಯಿತು.
ಠಾಣೆಯ ಎಲ್ಲಾ ಸಿಬ್ಬಂದಿ ಶುಭ ಹಾರೈಸಿದ ಪರಿಗೆ ಸಿ.ಪಿ.ಪೂರ್ಣಿಮಾ ಭಾವುಕರಾದರು. ಬಳಿಕ ಮಾತನಾಡಿದ ಅವರು, ಮನೆಯಲ್ಲಿ ಸಿಕ್ಕಿದ ಈ ರೀತಿಯ ಆತ್ಮೀಯತೆ, ಠಾಣೆಯಲ್ಲಿ ಸಿಕ್ಕಿದೆ. ಪೊಲೀಸ್ ಠಾಣೆಗಳು ಜನಸ್ನೇಹಿ ಮಾತ್ರವಲ್ಲ. ಸಿಬ್ಬಂದಿ ನಡುವಿನ ಸ್ನೇಹ ಬಾಂಧವ್ಯಕ್ಕೂ ಸಾಕ್ಷಿಯಾಗಿದೆ ಎಂದರು.
ಒಟ್ಟಾರೆ ಮಹಿಳೆ ಜೀವನದಲ್ಲಿ ತುಂಬಾ ವಿಶೇಷವಾದ ಸೀಮಂತವನ್ನು ಠಾಣಾ ಸಿಬ್ಬಂದಿ ಮಾಡಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…