ಪೊಲೀಸರು ಠಾಣೆಯಲ್ಲಿ ಕರ್ತವ್ಯ ಮಾಡುತ್ತಿದ್ದ ಗರ್ಭಿಣಿ ಮಹಿಳಾ ಪೊಲೀಸ್ ಗೆ ಸೀಮಂತ ಕಾರ್ಯವನ್ನು ಮಾಡಿ ಜನ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣೆಯ ಸಿಪಿ.ಪೂರ್ಣಿಮಾ ರವರಿಗೆ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿ ವರ್ಗದ ಸಹೋದ್ಯೋಗಿಗಳು ಸೇರಿ ಸೀಮಂತ ಕಾರ್ಯಕ್ರಮ ನಡೆಸಿದ್ದಾರೆ.
ಈ ಮೂಲಕ ಪೊಲೀಸ್ ಠಾಣೆಗಳು ಜನಸ್ನೇಹಿ ಆಗಿರುವುದರ ಜೊತೆಗೆ ಸಿಬ್ಬಂದಿ ಆತ್ಮೀಯತೆಯಿಂದ ಇದ್ದಾರೆ ಎಂಬುದನ್ನು ಪೊಲೀಸರು ತೋರಿಸಿದ್ದಾರೆ.
ಠಾಣೆಯಲ್ಲಿ ಮಹಿಳಾ ಸಿಬ್ಬಂದಿ ಸಿ.ಪಿ.ಪೂರ್ಣಿಮಾ ಅವರಿಗೆ ಕೈ ಬಳೆ ತೊಡಿಸಿ, ಹೂ ಮುಡಿಸುವ ಮೂಲಕ ಸೀಮಂತ ಶಾಸ್ತ್ರ ಮಾಡಲಾಯಿತು. ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಠಾಣೆಯ ಮಹಿಳಾ ಸಿಬ್ಬಂದಿಯಿಂದ ಸೀಮಂತ ಕಾರ್ಯ ನಡೆಯಿತು.
ಠಾಣೆಯ ಎಲ್ಲಾ ಸಿಬ್ಬಂದಿ ಶುಭ ಹಾರೈಸಿದ ಪರಿಗೆ ಸಿ.ಪಿ.ಪೂರ್ಣಿಮಾ ಭಾವುಕರಾದರು. ಬಳಿಕ ಮಾತನಾಡಿದ ಅವರು, ಮನೆಯಲ್ಲಿ ಸಿಕ್ಕಿದ ಈ ರೀತಿಯ ಆತ್ಮೀಯತೆ, ಠಾಣೆಯಲ್ಲಿ ಸಿಕ್ಕಿದೆ. ಪೊಲೀಸ್ ಠಾಣೆಗಳು ಜನಸ್ನೇಹಿ ಮಾತ್ರವಲ್ಲ. ಸಿಬ್ಬಂದಿ ನಡುವಿನ ಸ್ನೇಹ ಬಾಂಧವ್ಯಕ್ಕೂ ಸಾಕ್ಷಿಯಾಗಿದೆ ಎಂದರು.
ಒಟ್ಟಾರೆ ಮಹಿಳೆ ಜೀವನದಲ್ಲಿ ತುಂಬಾ ವಿಶೇಷವಾದ ಸೀಮಂತವನ್ನು ಠಾಣಾ ಸಿಬ್ಬಂದಿ ಮಾಡಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…
ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…
ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…
ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…
ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನ ಕ್ಷಣ…