ಪೊಲೀಸರು ಠಾಣೆಯಲ್ಲಿ ಕರ್ತವ್ಯ ಮಾಡುತ್ತಿದ್ದ ಗರ್ಭಿಣಿ ಮಹಿಳಾ ಪೊಲೀಸ್ ಗೆ ಸೀಮಂತ ಕಾರ್ಯವನ್ನು ಮಾಡಿ ಜನ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣೆಯ ಸಿಪಿ.ಪೂರ್ಣಿಮಾ ರವರಿಗೆ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿ ವರ್ಗದ ಸಹೋದ್ಯೋಗಿಗಳು ಸೇರಿ ಸೀಮಂತ ಕಾರ್ಯಕ್ರಮ ನಡೆಸಿದ್ದಾರೆ.
ಈ ಮೂಲಕ ಪೊಲೀಸ್ ಠಾಣೆಗಳು ಜನಸ್ನೇಹಿ ಆಗಿರುವುದರ ಜೊತೆಗೆ ಸಿಬ್ಬಂದಿ ಆತ್ಮೀಯತೆಯಿಂದ ಇದ್ದಾರೆ ಎಂಬುದನ್ನು ಪೊಲೀಸರು ತೋರಿಸಿದ್ದಾರೆ.
ಠಾಣೆಯಲ್ಲಿ ಮಹಿಳಾ ಸಿಬ್ಬಂದಿ ಸಿ.ಪಿ.ಪೂರ್ಣಿಮಾ ಅವರಿಗೆ ಕೈ ಬಳೆ ತೊಡಿಸಿ, ಹೂ ಮುಡಿಸುವ ಮೂಲಕ ಸೀಮಂತ ಶಾಸ್ತ್ರ ಮಾಡಲಾಯಿತು. ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಠಾಣೆಯ ಮಹಿಳಾ ಸಿಬ್ಬಂದಿಯಿಂದ ಸೀಮಂತ ಕಾರ್ಯ ನಡೆಯಿತು.
ಠಾಣೆಯ ಎಲ್ಲಾ ಸಿಬ್ಬಂದಿ ಶುಭ ಹಾರೈಸಿದ ಪರಿಗೆ ಸಿ.ಪಿ.ಪೂರ್ಣಿಮಾ ಭಾವುಕರಾದರು. ಬಳಿಕ ಮಾತನಾಡಿದ ಅವರು, ಮನೆಯಲ್ಲಿ ಸಿಕ್ಕಿದ ಈ ರೀತಿಯ ಆತ್ಮೀಯತೆ, ಠಾಣೆಯಲ್ಲಿ ಸಿಕ್ಕಿದೆ. ಪೊಲೀಸ್ ಠಾಣೆಗಳು ಜನಸ್ನೇಹಿ ಮಾತ್ರವಲ್ಲ. ಸಿಬ್ಬಂದಿ ನಡುವಿನ ಸ್ನೇಹ ಬಾಂಧವ್ಯಕ್ಕೂ ಸಾಕ್ಷಿಯಾಗಿದೆ ಎಂದರು.
ಒಟ್ಟಾರೆ ಮಹಿಳೆ ಜೀವನದಲ್ಲಿ ತುಂಬಾ ವಿಶೇಷವಾದ ಸೀಮಂತವನ್ನು ಠಾಣಾ ಸಿಬ್ಬಂದಿ ಮಾಡಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…