ಪೊಲೀಸರು ಠಾಣೆಯಲ್ಲಿ ಕರ್ತವ್ಯ ಮಾಡುತ್ತಿದ್ದ ಗರ್ಭಿಣಿ ಮಹಿಳಾ ಪೊಲೀಸ್ ಗೆ ಸೀಮಂತ ಕಾರ್ಯವನ್ನು ಮಾಡಿ ಜನ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣೆಯ ಸಿಪಿ.ಪೂರ್ಣಿಮಾ ರವರಿಗೆ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿ ವರ್ಗದ ಸಹೋದ್ಯೋಗಿಗಳು ಸೇರಿ ಸೀಮಂತ ಕಾರ್ಯಕ್ರಮ ನಡೆಸಿದ್ದಾರೆ.
ಈ ಮೂಲಕ ಪೊಲೀಸ್ ಠಾಣೆಗಳು ಜನಸ್ನೇಹಿ ಆಗಿರುವುದರ ಜೊತೆಗೆ ಸಿಬ್ಬಂದಿ ಆತ್ಮೀಯತೆಯಿಂದ ಇದ್ದಾರೆ ಎಂಬುದನ್ನು ಪೊಲೀಸರು ತೋರಿಸಿದ್ದಾರೆ.
ಠಾಣೆಯಲ್ಲಿ ಮಹಿಳಾ ಸಿಬ್ಬಂದಿ ಸಿ.ಪಿ.ಪೂರ್ಣಿಮಾ ಅವರಿಗೆ ಕೈ ಬಳೆ ತೊಡಿಸಿ, ಹೂ ಮುಡಿಸುವ ಮೂಲಕ ಸೀಮಂತ ಶಾಸ್ತ್ರ ಮಾಡಲಾಯಿತು. ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಠಾಣೆಯ ಮಹಿಳಾ ಸಿಬ್ಬಂದಿಯಿಂದ ಸೀಮಂತ ಕಾರ್ಯ ನಡೆಯಿತು.
ಠಾಣೆಯ ಎಲ್ಲಾ ಸಿಬ್ಬಂದಿ ಶುಭ ಹಾರೈಸಿದ ಪರಿಗೆ ಸಿ.ಪಿ.ಪೂರ್ಣಿಮಾ ಭಾವುಕರಾದರು. ಬಳಿಕ ಮಾತನಾಡಿದ ಅವರು, ಮನೆಯಲ್ಲಿ ಸಿಕ್ಕಿದ ಈ ರೀತಿಯ ಆತ್ಮೀಯತೆ, ಠಾಣೆಯಲ್ಲಿ ಸಿಕ್ಕಿದೆ. ಪೊಲೀಸ್ ಠಾಣೆಗಳು ಜನಸ್ನೇಹಿ ಮಾತ್ರವಲ್ಲ. ಸಿಬ್ಬಂದಿ ನಡುವಿನ ಸ್ನೇಹ ಬಾಂಧವ್ಯಕ್ಕೂ ಸಾಕ್ಷಿಯಾಗಿದೆ ಎಂದರು.
ಒಟ್ಟಾರೆ ಮಹಿಳೆ ಜೀವನದಲ್ಲಿ ತುಂಬಾ ವಿಶೇಷವಾದ ಸೀಮಂತವನ್ನು ಠಾಣಾ ಸಿಬ್ಬಂದಿ ಮಾಡಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…