ಪೊಲೀಸರು ಠಾಣೆಯಲ್ಲಿ ಕರ್ತವ್ಯ ಮಾಡುತ್ತಿದ್ದ ಗರ್ಭಿಣಿ ಮಹಿಳಾ ಪೊಲೀಸ್ ಗೆ ಸೀಮಂತ ಕಾರ್ಯವನ್ನು ಮಾಡಿ ಜನ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣೆಯ ಸಿಪಿ.ಪೂರ್ಣಿಮಾ ರವರಿಗೆ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿ ವರ್ಗದ ಸಹೋದ್ಯೋಗಿಗಳು ಸೇರಿ ಸೀಮಂತ ಕಾರ್ಯಕ್ರಮ ನಡೆಸಿದ್ದಾರೆ.
ಈ ಮೂಲಕ ಪೊಲೀಸ್ ಠಾಣೆಗಳು ಜನಸ್ನೇಹಿ ಆಗಿರುವುದರ ಜೊತೆಗೆ ಸಿಬ್ಬಂದಿ ಆತ್ಮೀಯತೆಯಿಂದ ಇದ್ದಾರೆ ಎಂಬುದನ್ನು ಪೊಲೀಸರು ತೋರಿಸಿದ್ದಾರೆ.
ಠಾಣೆಯಲ್ಲಿ ಮಹಿಳಾ ಸಿಬ್ಬಂದಿ ಸಿ.ಪಿ.ಪೂರ್ಣಿಮಾ ಅವರಿಗೆ ಕೈ ಬಳೆ ತೊಡಿಸಿ, ಹೂ ಮುಡಿಸುವ ಮೂಲಕ ಸೀಮಂತ ಶಾಸ್ತ್ರ ಮಾಡಲಾಯಿತು. ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಠಾಣೆಯ ಮಹಿಳಾ ಸಿಬ್ಬಂದಿಯಿಂದ ಸೀಮಂತ ಕಾರ್ಯ ನಡೆಯಿತು.
ಠಾಣೆಯ ಎಲ್ಲಾ ಸಿಬ್ಬಂದಿ ಶುಭ ಹಾರೈಸಿದ ಪರಿಗೆ ಸಿ.ಪಿ.ಪೂರ್ಣಿಮಾ ಭಾವುಕರಾದರು. ಬಳಿಕ ಮಾತನಾಡಿದ ಅವರು, ಮನೆಯಲ್ಲಿ ಸಿಕ್ಕಿದ ಈ ರೀತಿಯ ಆತ್ಮೀಯತೆ, ಠಾಣೆಯಲ್ಲಿ ಸಿಕ್ಕಿದೆ. ಪೊಲೀಸ್ ಠಾಣೆಗಳು ಜನಸ್ನೇಹಿ ಮಾತ್ರವಲ್ಲ. ಸಿಬ್ಬಂದಿ ನಡುವಿನ ಸ್ನೇಹ ಬಾಂಧವ್ಯಕ್ಕೂ ಸಾಕ್ಷಿಯಾಗಿದೆ ಎಂದರು.
ಒಟ್ಟಾರೆ ಮಹಿಳೆ ಜೀವನದಲ್ಲಿ ತುಂಬಾ ವಿಶೇಷವಾದ ಸೀಮಂತವನ್ನು ಠಾಣಾ ಸಿಬ್ಬಂದಿ ಮಾಡಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…
ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…