ಪೊಲೀಸರು ಠಾಣೆಯಲ್ಲಿ ಕರ್ತವ್ಯ ಮಾಡುತ್ತಿದ್ದ ಗರ್ಭಿಣಿ ಮಹಿಳಾ ಪೊಲೀಸ್ ಗೆ ಸೀಮಂತ ಕಾರ್ಯವನ್ನು ಮಾಡಿ ಜನ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣೆಯ ಸಿಪಿ.ಪೂರ್ಣಿಮಾ ರವರಿಗೆ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿ ವರ್ಗದ ಸಹೋದ್ಯೋಗಿಗಳು ಸೇರಿ ಸೀಮಂತ ಕಾರ್ಯಕ್ರಮ ನಡೆಸಿದ್ದಾರೆ.
ಈ ಮೂಲಕ ಪೊಲೀಸ್ ಠಾಣೆಗಳು ಜನಸ್ನೇಹಿ ಆಗಿರುವುದರ ಜೊತೆಗೆ ಸಿಬ್ಬಂದಿ ಆತ್ಮೀಯತೆಯಿಂದ ಇದ್ದಾರೆ ಎಂಬುದನ್ನು ಪೊಲೀಸರು ತೋರಿಸಿದ್ದಾರೆ.
ಠಾಣೆಯಲ್ಲಿ ಮಹಿಳಾ ಸಿಬ್ಬಂದಿ ಸಿ.ಪಿ.ಪೂರ್ಣಿಮಾ ಅವರಿಗೆ ಕೈ ಬಳೆ ತೊಡಿಸಿ, ಹೂ ಮುಡಿಸುವ ಮೂಲಕ ಸೀಮಂತ ಶಾಸ್ತ್ರ ಮಾಡಲಾಯಿತು. ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಠಾಣೆಯ ಮಹಿಳಾ ಸಿಬ್ಬಂದಿಯಿಂದ ಸೀಮಂತ ಕಾರ್ಯ ನಡೆಯಿತು.
ಠಾಣೆಯ ಎಲ್ಲಾ ಸಿಬ್ಬಂದಿ ಶುಭ ಹಾರೈಸಿದ ಪರಿಗೆ ಸಿ.ಪಿ.ಪೂರ್ಣಿಮಾ ಭಾವುಕರಾದರು. ಬಳಿಕ ಮಾತನಾಡಿದ ಅವರು, ಮನೆಯಲ್ಲಿ ಸಿಕ್ಕಿದ ಈ ರೀತಿಯ ಆತ್ಮೀಯತೆ, ಠಾಣೆಯಲ್ಲಿ ಸಿಕ್ಕಿದೆ. ಪೊಲೀಸ್ ಠಾಣೆಗಳು ಜನಸ್ನೇಹಿ ಮಾತ್ರವಲ್ಲ. ಸಿಬ್ಬಂದಿ ನಡುವಿನ ಸ್ನೇಹ ಬಾಂಧವ್ಯಕ್ಕೂ ಸಾಕ್ಷಿಯಾಗಿದೆ ಎಂದರು.
ಒಟ್ಟಾರೆ ಮಹಿಳೆ ಜೀವನದಲ್ಲಿ ತುಂಬಾ ವಿಶೇಷವಾದ ಸೀಮಂತವನ್ನು ಠಾಣಾ ಸಿಬ್ಬಂದಿ ಮಾಡಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…